ಶೀಘ್ರದಲ್ಲಿ ಪಿಯು ವಿಜ್ಞಾನ ಪಠ್ಯಪುಸ್ತಕ ಕನ್ನಡದಲ್ಲಿ ಲಭ್ಯ!
ಬೆಂಗಳೂರು, ಏಪ್ರಿಲ್ 05: ಎಸ್ಎಸ್ಎಲ್ಸಿ ಮುಗಿಸಿ ಪಿಯುಸಿಯಲ್ಲಿ ವಿಜ್ಞಾನ ವಿಭಾಗವನ್ನು ಆಯ್ಕೆ ಮಾಡಿಕೊಳ್ಳುವ ವಿದ್ಯಾರ್ಥಿಗಳಿಗೊಂದು ಸಿಹಿ ಸುದ್ದಿ ಇದೆ. ಈ ಶೈಕ್ಷಣಿಕ ವರ್ಷದಿಂದ ಪಿಯುಸಿಯ ವಿಜ್ಞಾನ ಪಠ್ಯಪುಸ್ತಕವು ಕನ್ನಡ ಭಾಷೆಯಲ್ಲೂ ಲಭ್ಯವಾಗಲಿದೆ.
ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | 2018ರ ನಿಮ್ಮ ಕನಸಿನ ಸಂಪುಟವನ್ನು ಆಯ್ಕೆ ಮಾಡಿ
ವಿಜ್ಞಾನವನ್ನು ಆಯ್ಕೆ ಮಾಡಿಕೊಳ್ಳಲು ಇಷ್ಟವಿದೆ ಆದರೆ ಆಂಗ್ಲ ಭಾಷೆ ಕಷ್ಟ ಎಂದು ಹಿಂಜರಿಯುತ್ತಿದ್ದ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದ್ದು, ಇನ್ನು 15 ದಿನಗಳಲ್ಲಿ ಪುಸ್ತಕ ಮಾರುಕಟ್ಟೆಯಲ್ಲಿ ಲಭ್ಯವಾಗಲಿದೆ. ಸರ್ಕಾರದ ಈ ನಿರ್ಧಾರವು ಹೆಚ್ಚು ಮಕ್ಕಳು ವಿಜ್ಞಾನ ವಿಷಯವನ್ನು ಆಯ್ಕೆ ಮಾಡಿಕೊಳ್ಳಲು ಸಹಾಯವಾಗಲಿದೆ.
ಕರ್ನಾಟಕದ ಯಾವುದೇ ಕಾಲೇಜುಗಳು ವಿಜ್ಞಾನವನ್ನು ಕನ್ನಡದಲ್ಲಿ ಬೋಧಿಸಬಹುದಾಗಿದೆ. ಇಂಗ್ಲಿಷ್ ನ್ನು ಅನುವಾದಿಸಿಕೊಳ್ಳಲು ಸಾಧ್ಯವಾಗದವರು ಕನ್ನಡ ಪುಸ್ತಕಗಳನ್ನು ಓದಿಕೊಳ್ಳಬಹುದಾಗಿದೆ. ಈ ಮೊದಲೇ ವಿಜ್ಞಾನ ವಿಭಾಗವನ್ನು ಕನ್ನಡ ಮೀಡಿಯಂನಲ್ಲಿ ತೆರೆಯಲಾಗಿತ್ತಾದರೂ ವಿದ್ಯಾರ್ಥಿಗಳ ಕೊರತೆಯಿಂದಾಗಿ ಅದನ್ನು ಮುಚ್ಚಲಾಗಿತ್ತು ಎಂದು ಪದವಿಪೂರ್ವ ಶಿಕ್ಷಣ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.

ವಿಜ್ಞಾನ ಪರಿಣಿತರು ಹಾಗೂ ಹಿರಿಯ ಶಿಕ್ಷಣ ಇಲಾಖೆ ಅಧಿಕಾರಿಗಳಿಂದ ಅನುವಾದ ಮುಗಿಯುವ ಹಂತದಲ್ಲಿದೆ. ರಾಜ್ಯದಲ್ಲಿರುವ ಎಲ್ಲಾ ಸರ್ಕಾರಿ ಪಿಯು ಕಾಲೇಜುಗಳು ಎರಡು ಸೆಟ್ ಕನ್ನಡ ಪುಸ್ತಕಗಳು ಬೇಕು ಎಂದು ಕೇಳಿದೆ. ಉಚಿತವಾಗಿ ಎಲ್ಲಾ ಸರ್ಕಾರಿ ಕಾಲೇಜುಗಳಿಗೆ ಪುಸ್ತಕಗಳನ್ನು ರವಾನಿಸಲಾಗುತ್ತದೆ ಎಂದು ಪದವಿಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕರಾದ ಸಿ. ಶಿಖಾ ಅವರು ತಿಳಿಸಿದ್ದಾರೆ.
2013-14ರಲ್ಲಿ ಪದವಿಪೂರ್ವ ಶಿಕ್ಷಣ ಇಲಾಖೆಯು ವಿಜ್ಞಾನ ಪುಸ್ತಕಗಳನ್ನು ಅನುವಾದಿಸುವ ಕೆಲಸವನ್ನು ಹಂಪಿ ಕನ್ನಡ ವಿಶ್ವವಿದ್ಯಾಲಯಕ್ಕೆ ವಹಿಸಿತ್ತು. ಕೆಲವು ತಾಂತ್ರಿಕ ದೋಷದಿಂದಾಗಿ ಅನುವಾದ ಕಾರ್ಯ ಸ್ಥಗಿತಗೊಂಡಿತ್ತು. ಈ ವರ್ಷ ರಾಜ್ಯದ ಬೇರೆ ಬೇರೆ ಕಾಲೇಜುಗಳ ಉಪನ್ಯಾಸಕರ ಸಹಾಯ ಪಡೆದು ವಿಜ್ಞಾನ ಪುಸ್ತಕವನ್ನು ಆಂಗ್ಲ ಭಾಷೆಯಿಂದ ಕನ್ನಡಕ್ಕೆ ತರ್ಜುಮೆ ಮಾಡಲಾಗಿದೆ. ಶೀಘ್ರದಲ್ಲಿ ರಸಾಯನಶಾಸ್ತ್ರ, ಭೌತಶಾಸ್ತ್ರ, ಗಣಿತ ಪುಸ್ತಕಗಳು ಕೂಡ ಕನ್ನಡದಲ್ಲಿ ಲಭ್ಯವಾಗಲಿದೆ ಎಂಬ ಮಾಹಿತಿ ಲಭ್ಯವಾಗಿದೆ.
-
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger












Click it and Unblock the Notifications