ಶೀಘ್ರದಲ್ಲಿ ಪಿಯು ವಿಜ್ಞಾನ ಪಠ್ಯಪುಸ್ತಕ ಕನ್ನಡದಲ್ಲಿ ಲಭ್ಯ!
ಬೆಂಗಳೂರು, ಏಪ್ರಿಲ್ 05: ಎಸ್ಎಸ್ಎಲ್ಸಿ ಮುಗಿಸಿ ಪಿಯುಸಿಯಲ್ಲಿ ವಿಜ್ಞಾನ ವಿಭಾಗವನ್ನು ಆಯ್ಕೆ ಮಾಡಿಕೊಳ್ಳುವ ವಿದ್ಯಾರ್ಥಿಗಳಿಗೊಂದು ಸಿಹಿ ಸುದ್ದಿ ಇದೆ. ಈ ಶೈಕ್ಷಣಿಕ ವರ್ಷದಿಂದ ಪಿಯುಸಿಯ ವಿಜ್ಞಾನ ಪಠ್ಯಪುಸ್ತಕವು ಕನ್ನಡ ಭಾಷೆಯಲ್ಲೂ ಲಭ್ಯವಾಗಲಿದೆ.
ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | 2018ರ ನಿಮ್ಮ ಕನಸಿನ ಸಂಪುಟವನ್ನು ಆಯ್ಕೆ ಮಾಡಿ
ವಿಜ್ಞಾನವನ್ನು ಆಯ್ಕೆ ಮಾಡಿಕೊಳ್ಳಲು ಇಷ್ಟವಿದೆ ಆದರೆ ಆಂಗ್ಲ ಭಾಷೆ ಕಷ್ಟ ಎಂದು ಹಿಂಜರಿಯುತ್ತಿದ್ದ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದ್ದು, ಇನ್ನು 15 ದಿನಗಳಲ್ಲಿ ಪುಸ್ತಕ ಮಾರುಕಟ್ಟೆಯಲ್ಲಿ ಲಭ್ಯವಾಗಲಿದೆ. ಸರ್ಕಾರದ ಈ ನಿರ್ಧಾರವು ಹೆಚ್ಚು ಮಕ್ಕಳು ವಿಜ್ಞಾನ ವಿಷಯವನ್ನು ಆಯ್ಕೆ ಮಾಡಿಕೊಳ್ಳಲು ಸಹಾಯವಾಗಲಿದೆ.
ಕರ್ನಾಟಕದ ಯಾವುದೇ ಕಾಲೇಜುಗಳು ವಿಜ್ಞಾನವನ್ನು ಕನ್ನಡದಲ್ಲಿ ಬೋಧಿಸಬಹುದಾಗಿದೆ. ಇಂಗ್ಲಿಷ್ ನ್ನು ಅನುವಾದಿಸಿಕೊಳ್ಳಲು ಸಾಧ್ಯವಾಗದವರು ಕನ್ನಡ ಪುಸ್ತಕಗಳನ್ನು ಓದಿಕೊಳ್ಳಬಹುದಾಗಿದೆ. ಈ ಮೊದಲೇ ವಿಜ್ಞಾನ ವಿಭಾಗವನ್ನು ಕನ್ನಡ ಮೀಡಿಯಂನಲ್ಲಿ ತೆರೆಯಲಾಗಿತ್ತಾದರೂ ವಿದ್ಯಾರ್ಥಿಗಳ ಕೊರತೆಯಿಂದಾಗಿ ಅದನ್ನು ಮುಚ್ಚಲಾಗಿತ್ತು ಎಂದು ಪದವಿಪೂರ್ವ ಶಿಕ್ಷಣ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.

ವಿಜ್ಞಾನ ಪರಿಣಿತರು ಹಾಗೂ ಹಿರಿಯ ಶಿಕ್ಷಣ ಇಲಾಖೆ ಅಧಿಕಾರಿಗಳಿಂದ ಅನುವಾದ ಮುಗಿಯುವ ಹಂತದಲ್ಲಿದೆ. ರಾಜ್ಯದಲ್ಲಿರುವ ಎಲ್ಲಾ ಸರ್ಕಾರಿ ಪಿಯು ಕಾಲೇಜುಗಳು ಎರಡು ಸೆಟ್ ಕನ್ನಡ ಪುಸ್ತಕಗಳು ಬೇಕು ಎಂದು ಕೇಳಿದೆ. ಉಚಿತವಾಗಿ ಎಲ್ಲಾ ಸರ್ಕಾರಿ ಕಾಲೇಜುಗಳಿಗೆ ಪುಸ್ತಕಗಳನ್ನು ರವಾನಿಸಲಾಗುತ್ತದೆ ಎಂದು ಪದವಿಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕರಾದ ಸಿ. ಶಿಖಾ ಅವರು ತಿಳಿಸಿದ್ದಾರೆ.
2013-14ರಲ್ಲಿ ಪದವಿಪೂರ್ವ ಶಿಕ್ಷಣ ಇಲಾಖೆಯು ವಿಜ್ಞಾನ ಪುಸ್ತಕಗಳನ್ನು ಅನುವಾದಿಸುವ ಕೆಲಸವನ್ನು ಹಂಪಿ ಕನ್ನಡ ವಿಶ್ವವಿದ್ಯಾಲಯಕ್ಕೆ ವಹಿಸಿತ್ತು. ಕೆಲವು ತಾಂತ್ರಿಕ ದೋಷದಿಂದಾಗಿ ಅನುವಾದ ಕಾರ್ಯ ಸ್ಥಗಿತಗೊಂಡಿತ್ತು. ಈ ವರ್ಷ ರಾಜ್ಯದ ಬೇರೆ ಬೇರೆ ಕಾಲೇಜುಗಳ ಉಪನ್ಯಾಸಕರ ಸಹಾಯ ಪಡೆದು ವಿಜ್ಞಾನ ಪುಸ್ತಕವನ್ನು ಆಂಗ್ಲ ಭಾಷೆಯಿಂದ ಕನ್ನಡಕ್ಕೆ ತರ್ಜುಮೆ ಮಾಡಲಾಗಿದೆ. ಶೀಘ್ರದಲ್ಲಿ ರಸಾಯನಶಾಸ್ತ್ರ, ಭೌತಶಾಸ್ತ್ರ, ಗಣಿತ ಪುಸ್ತಕಗಳು ಕೂಡ ಕನ್ನಡದಲ್ಲಿ ಲಭ್ಯವಾಗಲಿದೆ ಎಂಬ ಮಾಹಿತಿ ಲಭ್ಯವಾಗಿದೆ.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications