ಎಲ್ಲಾ ಮಹಾನಗರಗಳಲ್ಲೂ ನೀರಿನ ದರ ಹೆಚ್ಚಳ
ಬೆಂಗಳೂರು, ನ.20 : ಬೆಂಗಳೂರು ಮಹಾನಗರದಲ್ಲಿ ನೀರಿನ ದರ ಹೆಚ್ಚಳವಾಗಿ ವಾರಗಳು ಕಳೆಯುತ್ತಾ ಬಂತು, ಸದ್ಯ ರಾಜ್ಯದ ಎಲ್ಲಾ ಪಾಲಿಕೆ, ನಗರಸಭೆ ವ್ಯಾಪ್ತಿಯಲ್ಲಿ ನೀರಿನ ದರವನ್ನು ಹೆಚ್ಚಳ ಮಾಡುವ ಪ್ರಸ್ತಾಪ ಕೇಳಿಬಂದಿದೆ. ಚುನಾವಣೆ ಕಾರಣದಿಂದ ತಡೆಹಿಡಿಯಲಾಗಿದ್ದ ದರ ಪರಿಷ್ಕರಣೆ ಶೀಘ್ರದಲ್ಲೇ ಜಾರಿಗೆ ಬರಲಿದೆ.
ನಗರಾಭಿವೃದ್ಧಿ ಸಚಿವ ವಿನಯ್ ಕುಮಾರ್ ಸೊರಕೆ ಅವರು ಈ ಕುರಿತು ಮಾಹಿತಿ ನೀಡಿದ್ದು, ನಗರ ಸಂಸ್ಥೆಗಳ ವ್ಯಾಪ್ತಿಯಲ್ಲಿ ಪೂರೈಸುವ ನೀರಿನ ದರ ಪರಿಷ್ಕರಿಸುವಂತೆ ಎರಡು ವರ್ಷಗಳ ಹಿಂದೆಯೇ ನಗರಾಭಿವೃದ್ಧಿ ಇಲಾಖೆ ಸುತ್ತೋಲೆ ರವಾನಿಸಿತ್ತು. [ಬೆಂಗಳೂರಿನ ನೀರಿನ ದರ]

ಚುನಾವಣೆ ಹಿನ್ನೆಲೆಯಲ್ಲಿ ದರ ಪರಿಷ್ಕರಣೆ ಮಾಡಿರಲಿಲ್ಲ. ಹಿಂದೆ ಕಳಿಸಿದ ಸುತ್ತೋಲೆ, ಸ್ಲಾಬ್ ಮಾದರಿಯಲ್ಲಿ ದರ ಪರಿಷ್ಕರಣೆ ಮಾಡುವಂತೆ ಸದ್ಯ ಸೂಚನೆ ನೀಡಲಾಗಿದ್ದು, ಹೊಸ ಮಾದರಿಯಲ್ಲಿಯೇ ನೀರಿನ ಕರ ವಸೂಲು ಮಾಡುವಂತೆ ಸೂಚನೆ ನೀಡಲಾಗಿದೆ ಎಂದು ಹೇಳಿದರು. [ಹೊಸ ನೀರಿನ ಸಂಪರ್ಕ ಪಡೆಯುವುದು ಹೇಗೆ?]
ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಅಕ್ರಮ ನೀರಿನ ಸಂಪರ್ಕಗಳನ್ನು ಮೂರು ತಿಂಗಳೊಳಗೆ ಅಧಿಕೃತಗೊಳಿಸಿ, ನಂತರ ದರ ಏರಿಕೆ ಆದೇಶ ಜಾರಿಗೆ ತರಲಾಗುತ್ತದೆ. ಮೂರು ತಿಂಗಳೊಳಗೆ ನೀರಿನ ಸಂಪರ್ಕ ಸಕ್ರಮ ಮಾಡಿಕೊಳ್ಳದಿದ್ದರೆ, ನೀರಿನ ಸಂಪರ್ಕ ಕಡಿತಗೊಳಿಸಲಾಗುತ್ತದೆ ಎಂದು ಸಚಿವರು ಎಚ್ಚರಿಕೆ ನೀಡಿದರು.
ಸ್ಮಾರ್ಟ್ ಸಿಟಿಗೆ ಪ್ರಸ್ತಾವನೆ ಸಲ್ಲಿಕೆ : ಕೇಂದ್ರ ಸರ್ಕಾರದ 'ಸ್ಮಾರ್ಟ್ ಸಿಟಿ' ಯೋಜನೆಗೆ ಆರು ನಗರಗಳ ಹೆಸರನ್ನು ಶಿಫಾರಸು ಮಾಡಲಾಗಿದೆ ಎಂದು ವಿನಯ್ ಕುಮಾರ್ ಸೊರಕೆ ತಿಳಿಸಿದರು. ಕಲಬುರಗಿ, ಹುಬ್ಬಳ್ಳಿ-ಧಾರವಾಡ, ಮೈಸೂರು, ಮಂಗಳೂರು, ಬೆಳಗಾವಿ, ದಾವಣಗೆರೆಯ ಹೆಸರನ್ನು ಪ್ರಸ್ತಾವನೆಯಲ್ಲಿ ಕಳಿಸಲಾಗಿದೆ ಎಂದರು.
ಪ್ರವಾಸೋದ್ಯಮದ ಅಭಿವೃದ್ಧಿಗೆ ಪೂರಕವಾಗಿರು ಹೊಸಪೇಟೆ, ವಿಜಯಪುರ ಹಾಗೂ ಉಡುಪಿ ನಗರಗಳನ್ನು ಪರಂಪರೆ ನಗರವೆಂದು ಘೋಷಿಸಿ, ಅಭಿವೃದ್ಧಿಗೆ ನೆರವಾಗುವಂತೆ ಸರ್ಕಾರ ಪ್ರಸ್ತಾವನೆ ಸಿದ್ಧಪಡಿಸಿತ್ತು. ಮುಖ್ಯಮಂತ್ರಿಗಳು ಇದನ್ನು ಅನುಮೋದಿಸಿ ಕೇಂದ್ರಕ್ಕೆ ಕಳುಹಿಸಿದ್ದಾರೆ ಎಂದು ಸಚಿವರು ಹೇಳಿದರು.
ಉಪ ನಗರ ಅಭಿವೃದ್ಧಿ : ಬೆಂಗಳೂರಿನ ಜನಸಂಖ್ಯೆ 90 ಲಕ್ಷದ ಗಡಿ ದಾಟುತ್ತಿದೆ. ಆದ್ದರಿಂದ ಬೆಂಗಳೂರಿಗೆ ಹೊಂದಿಕೊಂಡಂತಿರುವ ರಾಮನಗರ, ತುಮಕೂರು, ದೇವನಹಳ್ಳಿಗಳನ್ನು ಉಪನಗರಗಳಾಗಿ ಅಭಿವೃದ್ಧಿ ಪಡಿಸುವ ಯೋಜನೆ ಸಿದ್ಧಪಡಿಸಲಾಗುತ್ತಿದೆ ಎಂದು ಸಚಿವರು ತಿಳಿಸಿದರು.
-
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
LPG ಕೊರತೆ ಎಫೆಕ್ಟ್: ಬೆಂಗಳೂರಿನ ಪಿಜಿಗಳಲ್ಲಿ ಇನ್ಮುಂದೆ ಸಿಗಲ್ಲ ದೋಸೆ, ಚಪಾತಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ -
Bengaluru: SSLC ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಬಿಎಂಟಿಸಿಯಿಂದ ಉಚಿತ ಪ್ರಯಾಣ -
Gold: ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರದ ನಿಧಿ ಮೌಲ್ಯ 8 ಕೋಟಿ ರೂ.; ನಿಧಿ ಕೊಟ್ಟ ಕುಟುಂಬದಿಂದ ಹೊಸ ಡಿಮ್ಯಾಂಡ್, ಉತ್ಖನನ ಅಂತ್ಯ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್












Click it and Unblock the Notifications