ಎಲ್ಲಾ ಮಹಾನಗರಗಳಲ್ಲೂ ನೀರಿನ ದರ ಹೆಚ್ಚಳ
ಬೆಂಗಳೂರು, ನ.20 : ಬೆಂಗಳೂರು ಮಹಾನಗರದಲ್ಲಿ ನೀರಿನ ದರ ಹೆಚ್ಚಳವಾಗಿ ವಾರಗಳು ಕಳೆಯುತ್ತಾ ಬಂತು, ಸದ್ಯ ರಾಜ್ಯದ ಎಲ್ಲಾ ಪಾಲಿಕೆ, ನಗರಸಭೆ ವ್ಯಾಪ್ತಿಯಲ್ಲಿ ನೀರಿನ ದರವನ್ನು ಹೆಚ್ಚಳ ಮಾಡುವ ಪ್ರಸ್ತಾಪ ಕೇಳಿಬಂದಿದೆ. ಚುನಾವಣೆ ಕಾರಣದಿಂದ ತಡೆಹಿಡಿಯಲಾಗಿದ್ದ ದರ ಪರಿಷ್ಕರಣೆ ಶೀಘ್ರದಲ್ಲೇ ಜಾರಿಗೆ ಬರಲಿದೆ.
ನಗರಾಭಿವೃದ್ಧಿ ಸಚಿವ ವಿನಯ್ ಕುಮಾರ್ ಸೊರಕೆ ಅವರು ಈ ಕುರಿತು ಮಾಹಿತಿ ನೀಡಿದ್ದು, ನಗರ ಸಂಸ್ಥೆಗಳ ವ್ಯಾಪ್ತಿಯಲ್ಲಿ ಪೂರೈಸುವ ನೀರಿನ ದರ ಪರಿಷ್ಕರಿಸುವಂತೆ ಎರಡು ವರ್ಷಗಳ ಹಿಂದೆಯೇ ನಗರಾಭಿವೃದ್ಧಿ ಇಲಾಖೆ ಸುತ್ತೋಲೆ ರವಾನಿಸಿತ್ತು. [ಬೆಂಗಳೂರಿನ ನೀರಿನ ದರ]

ಚುನಾವಣೆ ಹಿನ್ನೆಲೆಯಲ್ಲಿ ದರ ಪರಿಷ್ಕರಣೆ ಮಾಡಿರಲಿಲ್ಲ. ಹಿಂದೆ ಕಳಿಸಿದ ಸುತ್ತೋಲೆ, ಸ್ಲಾಬ್ ಮಾದರಿಯಲ್ಲಿ ದರ ಪರಿಷ್ಕರಣೆ ಮಾಡುವಂತೆ ಸದ್ಯ ಸೂಚನೆ ನೀಡಲಾಗಿದ್ದು, ಹೊಸ ಮಾದರಿಯಲ್ಲಿಯೇ ನೀರಿನ ಕರ ವಸೂಲು ಮಾಡುವಂತೆ ಸೂಚನೆ ನೀಡಲಾಗಿದೆ ಎಂದು ಹೇಳಿದರು. [ಹೊಸ ನೀರಿನ ಸಂಪರ್ಕ ಪಡೆಯುವುದು ಹೇಗೆ?]
ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಅಕ್ರಮ ನೀರಿನ ಸಂಪರ್ಕಗಳನ್ನು ಮೂರು ತಿಂಗಳೊಳಗೆ ಅಧಿಕೃತಗೊಳಿಸಿ, ನಂತರ ದರ ಏರಿಕೆ ಆದೇಶ ಜಾರಿಗೆ ತರಲಾಗುತ್ತದೆ. ಮೂರು ತಿಂಗಳೊಳಗೆ ನೀರಿನ ಸಂಪರ್ಕ ಸಕ್ರಮ ಮಾಡಿಕೊಳ್ಳದಿದ್ದರೆ, ನೀರಿನ ಸಂಪರ್ಕ ಕಡಿತಗೊಳಿಸಲಾಗುತ್ತದೆ ಎಂದು ಸಚಿವರು ಎಚ್ಚರಿಕೆ ನೀಡಿದರು.
ಸ್ಮಾರ್ಟ್ ಸಿಟಿಗೆ ಪ್ರಸ್ತಾವನೆ ಸಲ್ಲಿಕೆ : ಕೇಂದ್ರ ಸರ್ಕಾರದ 'ಸ್ಮಾರ್ಟ್ ಸಿಟಿ' ಯೋಜನೆಗೆ ಆರು ನಗರಗಳ ಹೆಸರನ್ನು ಶಿಫಾರಸು ಮಾಡಲಾಗಿದೆ ಎಂದು ವಿನಯ್ ಕುಮಾರ್ ಸೊರಕೆ ತಿಳಿಸಿದರು. ಕಲಬುರಗಿ, ಹುಬ್ಬಳ್ಳಿ-ಧಾರವಾಡ, ಮೈಸೂರು, ಮಂಗಳೂರು, ಬೆಳಗಾವಿ, ದಾವಣಗೆರೆಯ ಹೆಸರನ್ನು ಪ್ರಸ್ತಾವನೆಯಲ್ಲಿ ಕಳಿಸಲಾಗಿದೆ ಎಂದರು.
ಪ್ರವಾಸೋದ್ಯಮದ ಅಭಿವೃದ್ಧಿಗೆ ಪೂರಕವಾಗಿರು ಹೊಸಪೇಟೆ, ವಿಜಯಪುರ ಹಾಗೂ ಉಡುಪಿ ನಗರಗಳನ್ನು ಪರಂಪರೆ ನಗರವೆಂದು ಘೋಷಿಸಿ, ಅಭಿವೃದ್ಧಿಗೆ ನೆರವಾಗುವಂತೆ ಸರ್ಕಾರ ಪ್ರಸ್ತಾವನೆ ಸಿದ್ಧಪಡಿಸಿತ್ತು. ಮುಖ್ಯಮಂತ್ರಿಗಳು ಇದನ್ನು ಅನುಮೋದಿಸಿ ಕೇಂದ್ರಕ್ಕೆ ಕಳುಹಿಸಿದ್ದಾರೆ ಎಂದು ಸಚಿವರು ಹೇಳಿದರು.
ಉಪ ನಗರ ಅಭಿವೃದ್ಧಿ : ಬೆಂಗಳೂರಿನ ಜನಸಂಖ್ಯೆ 90 ಲಕ್ಷದ ಗಡಿ ದಾಟುತ್ತಿದೆ. ಆದ್ದರಿಂದ ಬೆಂಗಳೂರಿಗೆ ಹೊಂದಿಕೊಂಡಂತಿರುವ ರಾಮನಗರ, ತುಮಕೂರು, ದೇವನಹಳ್ಳಿಗಳನ್ನು ಉಪನಗರಗಳಾಗಿ ಅಭಿವೃದ್ಧಿ ಪಡಿಸುವ ಯೋಜನೆ ಸಿದ್ಧಪಡಿಸಲಾಗುತ್ತಿದೆ ಎಂದು ಸಚಿವರು ತಿಳಿಸಿದರು.
-
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral












Click it and Unblock the Notifications