Tirupati: ತಿಮ್ಮಪ್ಪನ ದರ್ಶನಕ್ಕೆ ತಿರುಪತಿ, ಪ್ರವಾಸಕ್ಕೆ ಮುರುಡೇಶ್ವರಕ್ಕೆ ತೆರಳಲಿರುವ ಪ್ರಯಾಣಿಕರೇ ಗಮನಿಸಿ
ಬೆಂಗಳೂರು, ಮಾರ್ಚ್ 06: ತಿರುಪತಿ, ಮುರುಡೇಶ್ವರ ಸ್ಥಳಗಳಿಗೆ ತೆರಳಲಿರುವ ಪ್ರಯಾಣಿಕರಿಗೆ ನೈರುತ್ಯ ರೈಲ್ವೆ ಮತ್ತು ದಕ್ಷಿಣ ಮಧ್ಯ ರೈಲ್ವೆ ಪ್ರಕಟಣೆ ಹೊರಡಿಸಿದೆ. ತಿಮ್ಮಪ್ಪನ ದರ್ಶನಕ್ಕೆ ತೆರಳಲಿರುವ ಭಕ್ತಾದಿಗಳಿಗೆ ತಿರುಪತಿ ನಿಲ್ದಾಣದಲ್ಲಿ ರೈಲು ನಿಲುಗಡೆಯಿಲ್ಲ ಎಂದು ರೈಲ್ವೆ ಇಲಾಕೆ ಸೂಚನೆ ಹೊರಡಿಸಿದೆ. ಹಾಗೆಯೇ ಮುರುಡೇಶ್ವರಕ್ಕೆ ತೆರಳುವವರಿಗೂ ಪ್ರಮುಖ ಸೂಚನೆ ನೀಡಿದೆ.
ಮಾರ್ಚ್ 7 ರಂದು ಮುರುಡೇಶ್ವರ ಮತ್ತು ಸೇನಾಪುರ ಭಾಗದ ನಡುವೆ ಸುರಕ್ಷತೆಗೆ ಸಂಬಂಧಿಸಿದ ಕಾಮಗಾರಿ ಸಲುವಾಗಿ ಕೆಲ ರೈಲುಗಳನ್ನು ಭಾಗಶಃ ರದ್ದುಗೊಳಿಸಲಾಗುತ್ತಿದೆ ಎಂದು ಕೊಂಕಣ ರೈಲ್ವೆಯು ಸೂಚಿಸಿದೆ. ಮಾರ್ಚ್ 6 ರಂದು ಬೆಂಗಳೂರಿನ ಸರ್ ಎಂ.ವಿಶ್ವೇಶ್ವರಯ್ಯ ಟರ್ಮಿನಲ್ ನಿಲ್ದಾಣದಿಂದ ಹೊರಡುವ ರೈಲು ಸಂಖ್ಯೆ 16585 ಸರ್.ಎಂ.ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು- ಮುರುಡೇಶ್ವರ ಎಕ್ಸ್ ಪ್ರೆಸ್ ರೈಲು ಕುಂದಾಪುರ ನಿಲ್ದಾಣದವರೆಗೆ ಮಾತ್ರ ಸಂಚರಿಸಲಿದೆ. ಕುಂದಾಪುರ ಮತ್ತು ಮುರುಡೇಶ್ವರ ನಿಲ್ದಾಣಗಳ ನಡುವೆ ಭಾಗಶಃ ರದ್ದಾಗಲಿದೆ.

ಮಾರ್ಚ್ 7 ರಂದು ರೈಲು ಸಂಖ್ಯೆ 16586 ಮುರುಡೇಶ್ವರ-ಸರ್ ಎಂ.ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ಎಕ್ಸ್ ಪ್ರೆಸ್ ರೈಲು ಕುಂದಾಪುರ ನಿಲ್ದಾಣದಿಂದ ತನ್ನ ನಿಗದಿತ ಸಮಯಕ್ಕೆ ಪ್ರಾರಂಭವಾಗಲಿದೆ. ಮುರುಡೇಶ್ವರ ಮತ್ತು ಕುಂದಾಪುರ ನಿಲ್ದಾಣಗಳ ನಡುವೆ ಭಾಗಶಃ ರದ್ದಾಗಲಿದೆ.
ತಿರುಪತಿ ನಿಲ್ದಾಣದಲ್ಲಿ ನಿಲ್ಲಲ್ಲ ರೈಲು!
ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ತೆರಳುವವರಿಗೆ ರೈಲ್ವೆ ಇಲಾಖೆ ಪ್ರಮುಖ ಮಾಹಿತಿ ನೀಡಿದೆ. ರೈಲಿನಲ್ಲಿ ತಿರುಪತಿಗೆ ತೆರಳುವವರು ತಿರುಪತಿ ನಿಲ್ದಾಣದಲ್ಲಿ ರೈಲು ನಿಲುಗಡೆಯಿಲ್ಲ ಎಂಬುದನ್ನು ತಿಳಿದುಕೊಳ್ಳಬೇಕು. ತಿರುಪತಿ ನಿಲ್ದಾಣದಲ್ಲಿ ಸುರಕ್ಷತೆಗೆ ಸಂಬಂಧಿಸಿದ ಕಾಮಗಾರಿ ನಿಮಿತ್ತ ಈ ಕೆಳಗಿನ ರೈಲುಗಳ ಮಾರ್ಗ ಬದಲಾವಣೆ ಮಾಡಲು ದಕ್ಷಿಣ ಮಧ್ಯ ರೈಲ್ವೆಯು ಸೂಚಿಸಿದೆ.
1. ಮಾರ್ಚ್ 11 ಮತ್ತು 18, 2024 ರಂದು ಬೆಂಗಳೂರಿನ ಸರ್ ಎಂ.ವಿಶ್ವೇಶ್ವರಯ್ಯ ಟರ್ಮಿನಲ್ ನಿಲ್ದಾಣದಿಂದ ಪ್ರಾರಂಭವಾಗುವ ರೈಲು ಸಂಖ್ಯೆ 12890 ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು - ಟಾಟಾನಗರ ಸಾಪ್ತಾಹಿಕ ಸೂಪರ್ ಫಾಸ್ಟ್ ಎಕ್ಸ್ ಪ್ರೆಸ್ ರೈಲು ಕಟ್ಟಾಡಿ, ಅರಕ್ಕೋಣಂ ಮತ್ತು ರೇಣಿಗುಂಟ ನಿಲ್ದಾಣಗಳ ಮೂಲಕ ಸಂಚರಿಸಲಿದೆ. ಹೀಗಾಗಿ ತಿರುಪತಿ ನಿಲ್ದಾಣದಲ್ಲಿ ನಿಲುಗಡೆ ಇರುವುದಿಲ್ಲ.

2. ಮಾರ್ಚ್ 12, 14, 19, ಮತ್ತು 21, 2024 ರಂದು ಬೆಂಗಳೂರಿನ ಸರ್ ಎಂ.ವಿಶ್ವೇಶ್ವರಯ್ಯ ಟರ್ಮಿನಲ್ ನಿಲ್ದಾಣದಿಂದ ಪ್ರಾರಂಭವಾಗುವ ರೈಲು ಸಂಖ್ಯೆ 12836 ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು- ಹಟಿಯಾ ದ್ವಿಸಾಪ್ತಾಹಿಕ ಸೂಪರ್ ಫಾಸ್ಟ್ ಎಕ್ಸ್ ಪ್ರೆಸ್ ರೈಲು ಕಟ್ನಾಡಿ, ಅರಕ್ಕೋಣಂ ಮತ್ತು ರೇಣಿಗುಂಟ ನಿಲ್ದಾಣಗಳ ಮೂಲಕ ಸಂಚರಿಸಲಿದೆ. ಹೀಗಾಗಿ ಚಿತ್ತೂರು ಮತ್ತು ತಿರುಪತಿ ನಿಲ್ದಾಣಗಳಲ್ಲಿ ನಿಲುಗಡೆ ಇರುವುದಿಲ್ಲ.
ಹೀಗಾಗಿ ಮಾರ್ಚ್ 11 ರಿಂದ ಸುಮಾರು ಹತ್ತು ದಿನಗಳವರಗೆ ಅಂದರೆ ಮಾರ್ಚ್ 21ರ ವರೆಗೆ ತಿರುಪತಿ ರೈಲು ನಿಲ್ದಾನದಲ್ಲಿ ರೈಲು ನಿಲುಗಡೆಯಾಗುವುದಿಲ್ಲ. ಹೀಗಾಗಿ ಭಕ್ತರು ಈ ಬಗ್ಗೆ ಮುಂಜಾಗ್ರತೆ ವಹಿಸಬೇಕಿದೆ. ತಿರುಪತಿಗೆ ಸಮೀಪದಲ್ಲಿರುವ ರೇಣಿಗುಂಟ ರೈಲು ನಿಲ್ದಾಣದಲ್ಲಿ ಇಳಿಯಬಹುದು.
ತಿರುಪತಿಗೆ ವಂದೇ ಭಾರತ್ ಎಕ್ಸ್ಪ್ರೆಸ್!
ಇನ್ನು, ಬೆಂಗಳೂರಿನಿಂದ ತಿರುಪತಿಗೆ ತೆರಳುವವರು ವಂದೇ ಭಾರತ್ ಎಕ್ಸ್ಪ್ರೆಸ್ ಬೇಡಿಕೆಯಿಟ್ಟ ಕಾರಣಕ್ಕೆ ಒಂದು ವಾರದೊಳಗೆ ಬೆಂಗಳೂರು ಮತ್ತು ರೇಣಿಗುಂಟಾ ನಡುವೆ ಹೊಸ ವಂದೇ ಭಾರತ್ ಎಕ್ಸ್ಪ್ರೆಸ್ ಅನ್ನು ಓಡಿಸಲು ರೈಲ್ವೆ ಮಂಡಳಿ ಚಿಂತಿಸಿದೆ. ರೇಣಿಗುಂಟಾ ರೈಲು ನಿಲ್ದಾಣ ತಿರುಪತಿ ದೇವಾಲಕ್ಕೆ ಸಮೀಪದಲ್ಲಿರುವ ಕಾರಣ ಭಕ್ತಾಧಿಗಳಿಗೆ ಹೆಚ್ಚು ಪ್ರಯೋಜನವಾಗಲಿದೆ.
-
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ












Click it and Unblock the Notifications