Get Updates
Get notified of breaking news, exclusive insights, and must-see stories!

ಚುನಾವಣಾ ಪೂರ್ವ ಸಮೀಕ್ಷೆ: ಬೆಲೆ ಏರಿಕೆ, ಭ್ರಷ್ಟಾಚಾರ ಮತದಾರರ ಪ್ರಮುಖ 'ಸಮಸ್ಯೆಗಳು'

ಬೆಂಗಳೂರು, ಏಪ್ರಿಲ್ 14: ರಾಜ್ಯ ವಿಧಾನಸಭಾ ಚುನಾವಣೆಯು ಮೇ 10 ರಂದು ನಡೆಯಲಿದ್ದು, ಮತದಾನಕ್ಕೆ ಕೆಲವು ದಿನಗಳು ಉಳಿದಿವೆ. ಈಗಾಗಲೇ ರಾಜಕೀಯ ಪಕ್ಷಗಳು ಚುನಾವಣೆಗೆ ತಮ್ಮ ಅಭ್ಯರ್ಥಿಗಳನ್ನು ಘೋಷಿಸಿದ್ದು, ಕೆಲವು ಕ್ಷೇತ್ರಗಳನ್ನಷ್ಟೇ ಉಳಿಸಿಕೊಂಡಿವೆ. ಇದರ ನಡುವೆ ಹಲವು ಸಂಸ್ಥೆಗಳು, ಮಾಧ್ಯಮಗಳು ಚುನಾವಣಾ ಪೂರ್ವ ಸಮೀಕ್ಷೆ ನಡೆಸುತ್ತಿವೆ. ಇದರಲ್ಲಿ ಮತದಾರನ ಅಭಿಪ್ರಾಯ ತಿಳಿಯಬಹುದಾಗಿದೆ.

ಸೌತ್ ಫಸ್ಟ್-ಪೀಪಲ್ಸ್ ಪಲ್ಸ್ ಚುನಾವಣಾ ಪೂರ್ವ ಸಮೀಕ್ಷೆ ನಡೆಸಿದ್ದು ಹಲವು ವಿಷಯಗಳನ್ನು ಬಹಿರಂಗಪಡಿಸಿದೆ. ಮತದಾರರನ ಪ್ರಮುಖ ಸಮಸ್ಯೆಗಳ ಬಗ್ಗೆ ಸಮೀಕ್ಷೆ ಬೆಳಕು ಚೆಲ್ಲಿದೆ. ಬೆಲೆ ಏರಿಕೆ ಮತ್ತು ಭ್ರಷ್ಟಾಚಾರ ಕರ್ನಾಟಕದ ಮತದಾರರು ಬೊಟ್ಟು ಮಾಡಿದ ಎರಡು ಪ್ರಮುಖ "ಸಮಸ್ಯೆಗಳು" ಎಂದು ಸೌತ್ ಫಸ್ಟ್-ಪೀಪಲ್ಸ್ ಪಲ್ಸ್ ಚುನಾವಣಾ ಪೂರ್ವ ಸಮೀಕ್ಷೆ ತೋರಿಸುತ್ತದೆ.

South First Karnataka pre-poll survey: Do you know which are the top problems of voters?

ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆಗೆ ಮೇ 10 ರಂದು ಮತದಾನ ನಡೆಯಲಿದೆ. ಮಾರ್ಚ್ 25 ರಿಂದ ಏಪ್ರಿಲ್ 10 ರವರೆಗೆ ನಡೆಸಲಾದ ಕರ್ನಾಟಕ ಚುನಾವಣಾ ಅಭಿಪ್ರಾಯ ಸಂಗ್ರಹವು ರಾಜ್ಯವು ಅತಂತ್ರ ಜನಾದೇಶದತ್ತ ಸಾಗುತ್ತಿದೆ ಎಂದು ಭವಿಷ್ಯ ನುಡಿದಿದೆ. 98 ಸ್ಥಾನಗಳನ್ನು ಪಡೆಯುವ ಮೂಲಕ ಕಾಂಗ್ರೆಸ್ ಏಕೈಕ ದೊಡ್ಡ ಪಕ್ಷವಾಗಿ ಹೊರಹೊಮ್ಮುವ ನಿರೀಕ್ಷೆಯಿದೆ. ಪ್ರಸ್ತುತ ಬಿಜೆಪಿ 92 ಸ್ಥಾನಗಳನ್ನು ಗೆಲ್ಲುವ ನಿರೀಕ್ಷೆಯಿದೆ, ಹಾಗೆಯೇ ಜೆಡಿಎಸ್ 27 ಸ್ಥಾನಗಳನ್ನು ಗೆಲ್ಲುವ ನಿರೀಕ್ಷೆಯಿದೆ.

ಸೌತ್ ಫಸ್ಟ್ ಚುನಾವಣಾ ಪೂರ್ವ ಸಮೀಕ್ಷೆಯಲ್ಲಿ ಬೆಲೆ ಏರಿಕೆಯು ರಾಜ್ಯದ ಮತದಾರರಿಗೆ ದೊಡ್ಡ ಚಿಂತೆಯಾಗಿದೆ ಎಂದು ತೋರಿಸಿದೆ. ಸಮೀಕ್ಷೆಗೆ ಪ್ರತಿಕ್ರಿಯಿಸಿದವರಲ್ಲಿ ಕಾಲು ಭಾಗದಷ್ಟು ಜನರು ಇದನ್ನೇ ಮುಖ್ಯ ಸಮಸ್ಯೆ ಎಂದು ಹೇಳಿದ್ದಾರೆ. ಸಮಸ್ಯೆಗಳ ಪಟ್ಟಿಯಲ್ಲಿ ನಿರುದ್ಯೋಗವು ಎರಡನೇ ಸ್ಥಾನದಲ್ಲಿದೆ. ಪ್ರತಿಕ್ರಿಯಿಸಿದವರಲ್ಲಿ 20 ಪ್ರತಿಶತದಷ್ಟು ಜನರು ನಿರುದ್ಯೋಗವು ಪ್ರಮುಖ ಚುನಾವಣಾ ವಿಷಯವೆಂದು ಉಲ್ಲೇಖಿಸಿದ್ದಾರೆ.

*ಭ್ರಷ್ಟಾಚಾರದ ತಾಂಡವ..!*

ರಾಜ್ಯದಲ್ಲಿನ ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರದ ವಿರುದ್ಧದ ಭ್ರಷ್ಟಾಚಾರ ಆರೋಪಗಳು ಕೂಡ ಈ ಚುನಾವಣೆಯಲ್ಲಿ ಪ್ರಮುಖ ನಾಲ್ಕು ವಿಷಯಗಳಲ್ಲಿ ಕಾಣಿಸಿಕೊಂಡಿವೆ. ಶೇಕಡಾ 16 ರಷ್ಟು ಜನರು ಭ್ರಷ್ಟಾಚಾರವು ರಾಜ್ಯದಲ್ಲಿ ಒಂದು ಪ್ರಮುಖ ಸಮಸ್ಯೆಯಾಗಿದೆ ಎಂದು ಹೇಳಿದ್ದಾರೆ. ಪ್ರತಿಕ್ರಿಯಿಸಿದವರಲ್ಲಿ ಶೇಕಡಾ 20 ರಷ್ಟು ಜನರು ಕನಿಷ್ಟ ಬೆಂಬಲ ಬೆಲೆ (MSP) ಮತ್ತು ರೈತ-ಸಂಬಂಧಿತ ಸಮಸ್ಯೆಗಳನ್ನು ಈ ಸಮೀಕ್ಷೆಯಲ್ಲಿ ಪ್ರಮುಖ ಕಾಳಜಿಯ ವಿಷಯಗಳಾಗಿ ಪರಿಗಣಿಸಿದ್ದಾರೆ.

South First Karnataka pre-poll survey: Do you know which are the top problems of voters?

ಇವುಗಳ ಜೊತೆಗೆ ಆರೋಗ್ಯವು ಸಹ ಒಂದು ಸಮಸ್ಯೆಯಾಗಿ ಕಂಡುಬಂದಿದೆ. ಸಮೀಕ್ಷೆಗೆ ಪ್ರತಿಕ್ರಿಯಿಸಿದವರಲ್ಲಿ ಎಂಟು ಪ್ರತಿಶತದಷ್ಟು ಜನರು ಆರೋಗ್ಯದ ಸಮಸ್ಯೆಗಳ ಬಗ್ಗೆ ಹೇಳಿದ್ದು, ಶೇಕಡಾ 6 ರಷ್ಟು ಜನರು ಹಳೆಯ ಪಿಂಚಣಿ ಯೋಜನೆಯು ಅವರಿಗೆ ಸಮಸ್ಯೆಯಾಗಿದೆ ಎಂದು ಹೇಳಿದ್ದಾರೆ. ಎಲ್ಲಾ ಹೇಳಿಕೆಗಳು ಮತ್ತು ನಿರೂಪಣೆಗಳ ಹೊರತಾಗಿಯೂ, ವಿಶೇಷವಾಗಿ ಕೋಮು ವಿಷಯಗಳ ಬಗ್ಗೆ ಪ್ರತಿಕ್ರಿಯಿಸಿದವರಲ್ಲಿ ಕೇವಲ ಒಂದು ಪ್ರತಿಶತದಷ್ಟು ಜನರು ಮಾತ್ರ ಕೋಮುವಾದವು ಕರ್ನಾಟಕದಲ್ಲಿ ಒಂದು ಸಮಸ್ಯೆ ಎಂದು ಭಾವಿಸಿದ್ದಾರೆ.

ಸೌತ್ ಫಸ್ಟ್ ಮತ್ತು ಪೀಪಲ್ಸ್ ಪಲ್ಸ್ ಕರ್ನಾಟಕ ಚುನಾವಣೆ 2023 ರ ಸಮೀಕ್ಷೆಯಲ್ಲಿ 38 ಪ್ರತಿಶತದಷ್ಟು ಜನರು ಸಿದ್ದರಾಮಯ್ಯ ನೇತೃತ್ವದ ಹಿಂದಿನ ಕಾಂಗ್ರೆಸ್ ಸರ್ಕಾರವು ಹಾಲಿ ಸರ್ಕಾರಕ್ಕೆ ಹೋಲಿಸಿದರೆ ಉತ್ತಮವೆಂದು ಭಾವಿಸಿದ್ದಾರೆ. 35% ಜನರು ಪ್ರಸ್ತುತ ಬಿಜೆಪಿ ಸರ್ಕಾರ ಉತ್ತಮವಾಗಿದೆ ಎಂದು ಪ್ರತಿಕ್ರಿಯಿಸಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+