Get Updates
Get notified of breaking news, exclusive insights, and must-see stories!

ಗಲಭೆ, ಆರ್‌ಎಸ್‌ಎಸ್‌ ಪ್ರಾಬಲ್ಯದ ಈ 'ಕೇಸರಿ' ಜಿಲ್ಲೆಗಳೆ ಬಿಜೆಪಿಗೆ ನಿರ್ಣಾಯಕ!

ಬೆಂಗಳೂರು, ಏಪ್ರಿಲ್.28 : ಚುನಾವಣೆ ಹಿನ್ನೆಲೆ ಯಾವ ಯಾವ ವಿಧಾನಸಭಾ ಕ್ಷೇತ್ರಗಳು, ಜಿಲ್ಲೆಗಳು ಯಾವ ಪಕ್ಷಕ್ಕೆ ಬೆಂಬಲ ನೀಡುತ್ತವೆ ಎಂಬ ಬಗ್ಗೆ ಈಗಾಗಲೇ ಅದರ ಹಿಂದಿನ ಫಲಿತಾಂಶಗಳ ಆಧಾರದ ಮೇಲೆ ಸಮೀಕರಣ ಮಾಡಲಾಗುತ್ತಿದೆ. ಇದರ ಹಿನ್ನೆಲೆಯಲ್ಲಿ ನೋಡಿದಾಗ ಮಲೆನಾಡು ಜಿಲ್ಲೆಗಳಾದ ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಕೊಡಗು ದಕ್ಷಿಣ ಕರ್ನಾಟಕದ ಉಳಿದ ಜಿಲ್ಲೆಗಳಿಂದ ಪ್ರತ್ಯೇಕವಾಗಿ ನಿಂತಿವೆ.

ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಕೊಡಗು ಈ ಮೂರು ಜಿಲ್ಲೆಗಳ ರಾಜಕೀಯ ಸಮೀಕರಣಗಳನ್ನು ಬಿಜೆಪಿಗೆ ಸ್ಪಷ್ಟವಾದ ನಿಲುವು ನೀಡುತ್ತದೆ. ಈ ಜಿಲ್ಲೆಗಳಲ್ಲಿ ಬಿಜೆಪಿ ತಮ್ಮ ಬೇರು ಬಿಟ್ಟಿದೆ. ಶಿವಮೊಗ್ಗದಲ್ಲಿ ಬಿ.ಎಸ್.ಯಡಿಯೂರಪ್ಪ ಹಾಕಿದ ತಳಹದಿ, ಚಿಕ್ಕಮಗಳೂರಿನಲ್ಲಿನ ಬಾಬಾ ಬುಡನ್‌ಗಿರಿ ವಿವಾದ, ಕೊಡಗಿನಲ್ಲಿ ಟಿಪ್ಪು ಸುಲ್ತಾನ್ ಜನ್ಮ ಜಯಂತಿ ವಿವಾದಗಳನ್ನು ಮುಂದಿಟ್ಟುಕೊಂಡು ಬಿಜೆಪಿ ಭದ್ರ ತಳಹದಿಯನ್ನು ಹಾಕಿಕೊಂಡಿದೆ.

South Karnatakas saffron districts Shivamogga, Chikkamagaluru and Kodagu

ಶಿವಮೊಗ್ಗ ಜಿಲ್ಲೆಯಲ್ಲಿ ಬಿಜೆಪಿ ನೆಲೆಯೂರಲು ಆರಂಭಿಸಿದ್ದು 1983 ರಿಂದ. ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಎಂ. ಆನಂದ ರಾವ್ ಅವರೊಂದಿಗೆ ಹೋರಾಡಿ ಮೊದಲ ಬಾರಿಗೆ ರಾಜ್ಯ ವಿಧಾನಸಭೆಗೆ ಆಯ್ಕೆಯಾದರು. ಅಂದಿನಿಂದ ಪ್ರತಿ ಚುನಾವಣೆಯಲ್ಲೂ ಬಿಜೆಪಿ ಪಕ್ಷ ಹಂತಹಂತವಾಗಿ ತಳವೂರಲು ಆರಂಭಿಸಿತ್ತು.

ಸಮಾಜವಾದಿ ನಾಯಕ ಶಾಂತವೇರಿ ಗೋಪಾಲ ಗೌಡ ಅವರ ಹುಟ್ಟೂರಾದ ತೀರ್ಥಹಳ್ಳಿಯ ಜನರು 1994 ರಲ್ಲಿ ಬಿಜೆಪಿಯ ಆರಗ ಜ್ಞಾನೇಂದ್ರ ಅವರನ್ನು ಮೊದಲ ಬಾರಿಗೆ ಆಯ್ಕೆ ಮಾಡಿದರು. ಇನ್ನು, ಹಿಂದುಳಿದ ವರ್ಗಗಳ ನಾಯಕ, ಮಾಜಿ ಮುಖ್ಯಮಂತ್ರಿ ಎಸ್. ಬಂಗಾರಪ್ಪ ಅವರು ಬಿಜೆಪಿಗೆ ಸೇರ್ಪಡೆಯಾದ ನಂತರ ಸಾಗರ ಮತ್ತು ಸೊರಬ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಯಿತು. ಇವರಿಂದಾಗಿಯೇ ಈ ಜಿಲ್ಲೆಗಳಲ್ಲಿ ಬಿಜೆಪಿ ಇಷ್ಟು ಗಟ್ಟಿಯಾಗಿ ನೆಲೆಯೂರಲು ಕಾರಣವಾಯಿತು ಎನ್ನುವ ಮಾತುಗಳಿವೆ.

ಇದರ ಜೊತೆಗೆ ಆರೆಸ್ಸೆಸ್ ಚಟುವಟಿಕೆಗಳಿಂದ ಶಿವಮೊಗ್ಗದಲ್ಲಿ ಬಿಜೆಪಿ ಬೆಳೆಯಲು ಸಾಧ್ಯ ಎಂದು ಪಕ್ಷದ ಒಳಗಿನವರು ಹೇಳುತ್ತಾರೆ. ಶಿವಮೊಗ್ಗ ನಗರದಲ್ಲಿ ಪದೇ ಪದೇ ನಡೆಯುತ್ತಿರುವ ಕೋಮುಗಲಭೆಗಳು ಬಿಜೆಪಿಗೆ ಹಿಂದೂಗಳನ್ನು ಸಂಘಟಿಸಲು ಅವಕಾಶ ಮಾಡಿಕೊಟ್ಟಿವೆ. 2018ರ ಚುನಾವಣೆಯಲ್ಲಿ ಏಳು ಸ್ಥಾನಗಳ ಪೈಕಿ ಆರರಲ್ಲಿ ಬಿಜೆಪಿ ಜಯ ಸಾಧಿಸಿತ್ತು.

*ಚಿಕ್ಕಮಗಳೂರಿನಲ್ಲಿ ಬಾಬಾ ಬುಡನ್‌ಗಿರಿ ವಿವಾದ*

ಮತ್ತೊಂದು ಜಿಲ್ಲೆ ಚಿಕ್ಕಮಗಳೂರಿನಲ್ಲಿ, ಹಿಂದೂಗಳು ಮತ್ತು ಮುಸ್ಲಿಮರು ಪೂಜಿಸುವ ಶ್ರೀ ಗುರು ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾದ ಗಲಾಟೆ ಪ್ರಾರಂಭವಾದ ನಂತರ 2000 ರ ದಶಕದಲ್ಲಿ ಬಿಜೆಪಿ ಇಲ್ಲಿ ತನ್ನ ನೆಲೆಯನ್ನು ವಿಸ್ತರಿಸಲು ಸಾಧ್ಯವಾಯಿತು.

South Karnatakas saffron districts Shivamogga, Chikkamagaluru and Kodagu

1990 ರ ದಶಕದಲ್ಲಿ ಸಂಘ ಪರಿವಾರದೊಂದಿಗೆ ಸಂಬಂಧ ಹೊಂದಿರುವ ಸಂಘಟನೆಗಳು ಈ ಸ್ಥಳವನ್ನು ಹಿಂದೂ ಪೂಜಾ ಸ್ಥಳವೆಂದು ಘೋಷಿಸಬೇಕೆಂದು ಒತ್ತಾಯಿಸಿದವು. ಇದೇ ಕಾರಣದಿಂದಾಗಿ 2004ರಲ್ಲಿ ಮೊದಲ ಬಾರಿಗೆ ಚಿಕ್ಕಮಗಳೂರು ಜಿಲ್ಲೆಯ ಐದು ಸ್ಥಾನಗಳ ಪೈಕಿ ಮೂರರಲ್ಲಿ ಬಿಜೆಪಿಗೆ ಗೆಲುವು ದಕ್ಕಿತು. ಇದು ಪಕ್ಷದಲ್ಲಿ ಹೊಸ ಹುರುಪು ನೀಡಿತು. ಇದಾದ ನಂತರ ಕಳೆದ 2018ರ ಚುನಾವಣೆಯಲ್ಲಿ ಐದು ಸ್ಥಾನಗಳ ಪೈಕಿ ನಾಲ್ಕರಲ್ಲಿ ಬಿಜೆಪಿ ಗೆದ್ದಿತ್ತು.

ಬಿಜೆಪಿಯ ಮೊದಲ ರಾಜ್ಯಾಧ್ಯಕ್ಷರಾದ ಎ.ಕೆ. ಸುಬ್ಬಯ್ಯ ಕೊಡಗು ಜಿಲ್ಲೆಯವರಾಗಿದ್ದು, ಸತತವಾಗಿ ಬಿಜೆಪಿಯನ್ನು ಬೆಳೆಸಿದ್ದಾರೆ. ಆದರೆ ಅವರು ಪಕ್ಷದ ಅತ್ಯಂತ ಕಟು ವಿಮರ್ಶಕರಲ್ಲಿ ಒಬ್ಬರಾದರು. ಕಳೆದ ಚುನಾವಣೆಯಲ್ಲಿ ಮೈಸೂರು ದೊರೆ ಟಿಪ್ಪು ಸುಲ್ತಾನ್ ಅವರ ಜನ್ಮ ದಿನಾಚರಣೆಯನ್ನು ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ನಿರ್ಧಾರವನ್ನು ಬಿಜೆಪಿ ಪ್ರಚಾರದ ಸಾಧನವಾಗಿ ಬಳಸಿಕೊಂಡಿತು. ಇದರಿಂದಾಗಿಯೇ 2018ರಲ್ಲಿ ಜಿಲ್ಲೆಯ ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಿತ್ತು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+