'ಪ್ರತ್ಯೇಕ ರಾಷ್ಟ್ರ' ಕುರಿತ ಹೇಳಿಕೆ: ಡಿಕೆ ಸುರೇಶ್ ವಿರುದ್ಧ ಸಿ ಟಿ ರವಿ ವಾಗ್ದಾಳಿ
ಹಾಸನ, ಫೆಬ್ರವರಿ 05: ದಕ್ಷಿಣ ಭಾರತ ಪ್ರತ್ಯೇಕ ರಾಷ್ಟ್ರ ಆಗಬೇಕು ಎಂಬ ಸಂಸದ ಡಿ.ಕೆ. ಸುರೇಶ್ ಹೇಳಿಕೆಗೆ, ಒಡೆದು ಆಳುವ ರಾಜಕಾರಣವನ್ನೇ ಮಾಡಿಕೊಂಡು ಬಂದಿರುವ ಕಾಂಗ್ರೆಸ್ಗೆ ಒಟ್ಟುಗೂಡಿಸಿ ಅಭ್ಯಾಸನೇ ಇಲ್ಲ ಎಂದು ಸಿಟಿ ರವಿ ತಿರುಗೇಟು ನೀಡಿದರು.
ಈ ಕುರಿತು ಹಾಸನದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ರಾಹುಲ್ಗಾಂಧಿ ಅವರ ಯಾತ್ರೆಗೆ 'ಭಾರತ್ ತೋಡೊ ಯಾತ್ರೆ' ಅಂತ ಇಟ್ಟಿದ್ದರೆ ಡಿ.ಕೆ.ಸುರೇಶ್ ಅವರ ಹೇಳಿಕೆಗಳಿಗೆ ತಾತ್ವಿಕವಾದ ಬಲ ಬರುತ್ತಿತ್ತು. ಜೋಡೊ ಅಂತ ಹೇಳ್ತಿ ದೇಶ ಒಡೆಯುವ ಮಾತನಾಡುವುದುವಎಷ್ಟು ಸರಿ? ರಾಷ್ಟ್ರ ಒಡೆಯುವ ಮಾತನ್ನು ಡಿ.ಕೆ.ಸುರೇಶ್ ಹೇಳಿದರೆ, ಜಾತಿ- ಜಾತಿ ನಡುವೆ ಒಡೆಯುವ ರಾಜಕಾರಣವನ್ನು ಸಿದ್ದರಾಮಯ್ಯ ಆದಿಯಾಗಿ ಮಾಡಿಕೊಂಡು ಬಂದಿದ್ದಾರೆ. ಸಿದ್ದರಾಮಯ್ಯ ಅವರು ಅಪರೂಪಕ್ಕೊಮ್ಮೆ ಮನುಷ್ಯತ್ವ ಇರಬೇಕು ಅಂತಾರೆ. ಆದರೆ ಮಾಡೋದೆಲ್ಲಾ ಜಾತಿ ರಾಜಕಾರಣ ಎಂದು ವಾಗ್ದಾಳಿ ನಡೆಸಿದರು.

ಬಡವರು ಎಲ್ಲಾ ಜಾತಿಯಲ್ಲೂ ಇದ್ದಾರೆ. ಯಾಕೆ ಅವರು ಬಡವರ ಪರ ಯೋಚನೆ ಮಾಡಲ್ಲ. ಬಡವರ ಪರವಾಗಿ ಏಕೆ ಮಾತನಾಡಲ್ಲ? ಜಾತಿಯನ್ನೆ ಇಟ್ಕಂಡು ಏಕೆ ಮಾತಾನಾಡುತ್ತಾರೆ? ಎಂದು ಪ್ರಶ್ನಿಸಿ? ಎಲ್ಲಾ ಜಾತಿಯಲ್ಲೂ ಒಳ್ಳೆವರೂ ಇದ್ದಾರೆ, ಕೆಟ್ಟವರೂ ಇದ್ದಾರೆ. ಹಾಗಾದರೆ ಜಾತಿ, ದ್ವೇಷ ಯಾಕೆ ? ಜಾತಿ ಒಡೆದು ರಾಜಕಾರಣ ಮಾಡೋದು, ಭಾಷೆ ಹೆಸರಿನಲ್ಲಿ ರಾಜಕಾರಣ ಮಾಡೋದು ಕಾಂಗ್ರೆಸ್ ಕಲ್ಚರ್, ಆ ಕಾಂಗ್ರೆಸ್ ಸಂಸ್ಕೃತಿಯನ್ನೇ ಡಿ.ಕೆ.ಸುರೇಶ್ ಹೇಳಿದ್ದಾರೆ ಎಂದರು.
ಸಂಕುಚಿತ ಮನೋಭಾವ ಇರುವವರು ಎಲ್ಲದರಲ್ಲೂ ತಪ್ಪು ಹುಡುಕುತ್ತಾರೆ. ದೇಶ ಒಡೆತೀವಿ ಅಂತ ಹೊರಟ ಜಿನ್ನಾಗೆ ಇವರು ಬೆಂಬಲ ಕೊಟ್ಟರು. ಅದಾದ ನಂತರ ಸರ್ದಾರ್ ಪಟೇಲ್ ದೇಶವನ್ನು ಒಗ್ಗೂಡಿಸಿದರು ರಜಾಕರು, ಹೈದರಾಬಾದ್ ನಿಜಾಮನ ಮನಸ್ಥಿತಿಯವರಂತೆ ಡಿ.ಕೆ.ಸುರೇಶ್, ಡಿ.ಕೆ.ಶಿವಕುಮಾರ್ ವರ್ತಿಸಬಾರದು. ಅಕಸ್ಮಾತ್ ವರ್ತಿಸಿದರೆ ನೀವು ನಿಜಾಮ ಅಲ್ಲ, ನಿಜಾಮನನ್ನೇ ಬಗ್ಗು ಬಡಿದಂತಹ ಸರ್ದಾರ್ ವಲ್ಲಭಾಯಿ ಪಟೇಲ್ ರಂತಹ ನೇತೃತ್ವ ಭಾಜಪ ಕೈಯಲ್ಲಿ ಇದೆ. ನಿಮ್ಮ ನಿಜಾಮಗಿರಿ ಇಲ್ಲಿ ನಡೆಯಲ್ಲ ಎಂದರು.
ಫೆ.7 ರಂದು ದೆಹಲಿಯಲ್ಲಿ ಅವರು ಪ್ರತಿಭಟನೆ ಮಾಡಲಿ, ಪ್ರತಿಭಟನೆ ಮಾಡಲು ಎಲ್ಲರಿಗೂ ಪ್ರಜಾಪ್ರಭುತ್ವದಲ್ಲಿ ಹಕ್ಕಿದೆ. ಅಂಕಿ-ಅಂಶಗಳನ್ನು ಮುಂದಿಟ್ಟು ಜನರಿಗೆ ಮನವರಿಕೆ ಮಾಡ್ತೀವಿ. ಅವರು ಹೇಳುವುದರಲ್ಲಿ ಎಷ್ಟು ಸತ್ಯ ಇದೆ, ಎಷ್ಟು ಸುಳ್ಳು ಇದೆ ಅನ್ನೋದನ್ನ ಜನರ ಮುಂದೆ ಇಡ್ತಿವಿ. ಇಲ್ಲಿ ಪ್ರತಿಭಟನೆ ಮಾಡಲು ಹಕ್ಕಿದೆ. ದೇಶ ಒಡೆಯಲು ಹಕ್ಕಿಲ್ಲ ಎಂದರು.
-
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ











Click it and Unblock the Notifications