ನೈಋತ್ಯ ಪಧವೀದರ ಕ್ಷೇತ್ರ ಚುನಾವಣೆ: ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ
ಮೈಸೂರು, ಮೇ 21: ನೈಋತ್ಯ ಪದವೀಧರ ಕ್ಷೇತ್ರ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ಆಯನೂರು ಮಂಜುನಾಥ ಅವರು ನಾಮಪತ್ರ ಸಲ್ಲಿಸಿದ್ದಾರೆ.
ಬಿಜೆಪಿ ಮುಖಂಡ ಕೆ.ಎಸ್.ಈಶ್ವರಪ್ಪ ಅವರ ಜೊತೆ ಆಗಮಿಸಿದ ಆಯನೂರು ಮಂಜುನಾಥ ಅವರು ಚುನಾವಣಾಧಿಕಾರಿಗಳಿಗೆ ನಾಮಪತ್ರ ಸಲ್ಲಿಸಿದರು. ಗೆಲ್ಲುವ ವಿಶ್ವಾಸವನ್ನೂ ಅವರು ವ್ಯಕ್ತಪಡಿಸಿದ್ದಾರೆ.
ಇನ್ನು ಆಗ್ನೇಯ ಶಿಕ್ಷಕರ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯನ್ನು ಬದಲಾಯಿಸಲಾಗಿದ್ದು ಹಾಲನೂರು ಎಸ್ ಲೇಪಾಕ್ಷಿ ಅವರ ಬದಲಿಗೆ ವೈ.ಎ.ನಾರಾಯಣಸ್ವಾಮಿ ಅವರಿಗೆ ಅವಕಾಶ ನೀಡಲಾಗಿದೆ.

ನೈಋತ್ಯ ಪದವೀಧರ ಕ್ಷೇತ್ರ ಚುನಾವಣೆಗೆ ನಾಳೆ ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದ್ದು, ಜೂನ್ 8 ಕ್ಕೆ ಚುನಾವಣೆ ನಡೆಯಲಿದೆ. ಮತ್ತು ಜೂನ್ 12ಕ್ಕೆ ಮತ ಎಣಿಕೆ ನಡೆಯಲಿದೆ.











Click it and Unblock the Notifications