ಪ್ರಯಾಣಿಕರಿಗೆ ಪ್ರಮುಖ ಸೂಚನೆ.. ಇಂದು ಬೆಂಗಳೂರಿಗೆ ಬರುವ ಹಲವು ರೈಲುಗಳು ರದ್ದು...
ಬೆಂಗಳೂರು ಮೇ 29: ಹಲವೆಡೆ ಕಾಮಗಾರಿ ನಡೆಯುತ್ತಿರುವ ಕಾರಣ ರಾಜ್ಯದ ವಿವಿಧೆಡೆಯಿಂದ ಬೆಂಗಳೂರಿಗೆ ಬರುವ ಕೆಲವು ರೈಲುಗಳನ್ನು ಇಂದಿನಿಂದ (ಮೇ 29) ಮೇ 31ರವರೆಗೆ ರದ್ದು ಮಾಡಲಾಗಿದೆ. ಈ ಬಗ್ಗೆ ನೈರುತ್ಯ ರೈಲ್ವೆ ಮಾಹಿತಿ ಹಂಚಿಕೊಂಡಿದೆ. ಹಾಗಾದರೆ ಯಾವೆಲ್ಲಾ ರೈಲುಗಳು ರದ್ದಾಗಲಿವೆ ಎಂದು ತಿಳಿಯೋಣ.
ನೀವೇನಾದ್ರೂ ವಿವಿಧ ಜಿಲ್ಲೆಗಳಿಂದ ಬೆಂಗಳೂರಿಗೆ ಪ್ರಯಾಣ ಬೆಳೆಸುತ್ತಿದ್ದರೆ ರದ್ದಾಗಿರುವ ರೈಲುಗಳ ಬಗ್ಗೆ ಮಾಹಿತಿ ಪಡೆದಿರುವುದು ಅತ್ಯಾವಶ್ಯಕ. ವಾರ್ಷಿಕ ಕೇಬಲ್ ನಿರ್ವಹಣೆ ಕಾಮಗಾರಿ ನಡೆಯುತ್ತಿರುವುದರಿಂದ ಬೈಯ್ಯಪ್ಪನಹಳ್ಳಿ ವೆಸ್ಟ್ ಕ್ಯಾಬಿನ್ ಮತ್ತು ಬೈಯ್ಯಪ್ಪನಹಳ್ಳಿ-ಸರ್ ಎಂ.ವಿಶೇಶ್ವರಯ್ಯ ಟರ್ಮಿನಲ್ ನಡುವೆ ಇಂದು ಮೂರು ಮೆಮು ರೈಲುಗಳು ರದ್ದುಗೊಳ್ಳಲಿವೆ. ನೈರುತ್ಯ ರೈಲ್ವೆ ಮಾಹಿತಿ ಪ್ರಕಾರ ಒಟ್ಟು ಎಂಟು ಮೆಮು ರೈಲುಗಳು ಭಾಗಶ: ರದ್ದಾಗಿವೆ.

ಹಾಗೆ ಸುರಕ್ಷತೆಗೆ ಸಂಬಂಧಿಸಿದ ಕಾಮಗಾರಿ ಕೈಗೊಳ್ಳುವುದರಿಂದ ಭಟ್ಕಳ ನಿಲ್ದಾಣದಲ್ಲಿ ಮೇ 29 ರಿಂದ 31 ರವರೆಗೆ ಕೆಲವು ರೈಲುಗಳನ್ನು ಭಾಗಶ: ರದ್ದುಗೊಳ್ಳಲಿವೆ ಎಂದು ಕೊಂಕಣ ರೈಲ್ವೆ ಮಾಹಿತಿ ನೀಡಿದೆ.
ಮೂರು ವಿಶೇಷ ಮೆಮು ರೈಲು ರದ್ದು:
ರೈಲು ಸಂಖ್ಯೆ (01799) ವೈಟ್ಫಿಲ್ಡ್-ಕೆಎಸ್ಆರ್ ಬೆಂಗಳೂರು ವಿಶೇಷ ಮೆಮು ರೈಲು, ಕೆಎಸ್ಆರ್ ಬೆಂಗಳೂರು-ಬಂಗಾರಪೇಟ (06561) ಮತ್ತು ಬಂಗಾರಪೇಟ-ಕೆಎಸ್ಆರ್ ಬೆಂಗಳೂರು (01773) ವಿಶೇಷ ಮೆಮು ರೈಲು ಬುಧವಾರ (ಮೇ 29) ತಾತ್ಕಾಲಿಕವಾಗಿ ರದ್ದಾಗಿವೆ.
ಎಂಟು ವಿಶೇಷ ಮೆಮು ಭಾಗಶ: ರದ್ದು:
*ಕೆಎಸ್ಆರ್ ಬೆಂಗಳೂರು-ಬಂಗಾರಪೇಟ ಮೆಮು ವಿಶೇಷ ರೈಲು ಸಂಖ್ಯೆ (06389) ಕೆಎಸ್ಆರ್ ಬೆಂಗಳೂರು-ವೈಟ್ಫಿಲ್ಟ್ ನಡುವೆ ಭಾಗಶ: ರದ್ದಾಗಲಿದೆ.

*ಚಿಕ್ಕಬಳ್ಳಾಪುರ-ಬೆಂಗಳೂರು ಕಂಟೋನ್ಮೆಂಟ್ ಮೆಮು ವಿಶೇಷ ರೈಲು ಸಂಖ್ಯೆ (06535) ಯಲಹಂಕ-ಬೆಂಗಳೂರು ಕಂಟೋನ್ಮೆಂಟ್ ನಡುವೆ ಭಾಗಶ: ರದ್ದಾಗಲಿದೆ.
*ಮರಿಕುಪ್ಪಂ-ಕೆಎಸ್ಆರ್ ಬೆಂಗಳೂರು ಮೆಮು ವಿಶೇಷ ರೈಲು ಸಂಖ್ಯೆ (01776) ಕೆಎಸ್ಆರ್ ಬೆಂಗಳೂರು-ಕೃಷ್ಣರಾಜಪುರಂ ಮಧ್ಯೆ ಭಾಗಶ: ರದ್ದಾಗಲಿದೆ.
*ಕೆಎಸ್ಆರ್ ಬೆಂಗಳೂರು-ಮರಿಕುಪ್ಪಂ ಮೆಮು ವಿಶೇಷ ರೈಲು ಸಂಖ್ಯೆ (01775) ಕೆಎಸ್ಆರ್ ಬೆಂಗಳೂರು-ಕೃಷ್ಣರಾಜಪುರಂ ನಡುವೆ ಭಾಗಶ: ರದ್ದಾಗಲಿದೆ.
*ಮರಿಕುಪ್ಪಂ-ಕೆಎಸ್ಆರ್ ಬೆಂಗಳೂರು ಮೆಮು ವಿಶೇಷ ರೈಲು ಸಂಖ್ಯೆ (01793) ಬಂಗಾರಪೇಟ-ಕೃಷ್ಣರಾಜಪುರಂ ನಡುವೆ ಭಾಗಶ: ರದ್ದಾಗಲಿದೆ.
*ಕೃಷ್ಣರಾಜಪುರಂ-ಮರಿಕುರಪ್ಪಂ ಮೆಮು ವಿಶೇಷ ರೈಲು ಸಂಖ್ಯೆ (01794) ಕೃಷ್ಣರಾಜಪುರಂ-ಬಂಗಾರಪೇಟ ನಡುವೆ ಭಾಗಶ: ರದ್ದಾಗಲಿದೆ.
*ಕೆಎಸ್ಆರ್ ಬೆಂಗಳೂರು-ಕುಪ್ಪಂ ಮೆಮು ವಿಶೇಷ ರೈಲು ಸಂಖ್ಯೆ (06529) ಕೆಎಸ್ಆರ್ ಬೆಂಗಳೂರು-ಕೃಷ್ಣರಾಜಪುರಂ ನಡುವೆ ಭಾಗಶ: ರದ್ದಾಗಲಿದೆ.
*ರೈಲು ಸಂಖ್ಯೆ 16585 ಸರ್.ಎಂ.ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು-ಮುರುಡೇಶ್ವರ ಎಕ್ಸಪ್ರೆಸ್ ರೈಲು ಶಿರೂರು ನಿಲ್ದಾಣದವರೆಗೆ ಮಾತ್ರ ಸಂಚರಿಸಲಿದೆ. ಈ ರೈಲು ಮೇ 29ರಂದು ಬೆಂಗಳೂರಿನ ಸರ್ ಎಂ.ವಿಶ್ವೇಶ್ವರಯ್ಯ ಟರ್ಮಿನಲ್ ನಿಲ್ದಾಣದಿಂದ ಹೊರಡುತ್ತದೆ. ಶಿರೂರು-ಮುರುಡೇಶ್ವರ ನಿಲ್ದಾಣಗಳ ನಡುವೆ ಭಾಗಶ: ರದ್ದಾಗಲಿದೆ.
*ರೈಲು ಸಂಖ್ಯೆ 16586 ಮುರುಡೇಶ್ವರ-ಸರ್ ಎಂ.ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ಎಕ್ಸಪ್ರೆಸ್ ರೈಲು ಮೇ 30ರಂದು ಶಿರೂರು ನಿಲ್ದಾಣದಿಂದ ಮಧ್ಯಾಹ್ನ 2.35 ಗಂಟೆಗೆ ಪ್ರಾರಂಭವಾಗಲಿದ್ದು, ಮುರುಡೇಶ್ವರ ಮತ್ತು ಶಿರೂರು ನಿಲ್ದಾಣಗಳ ನಡುವೆ ಭಾಗಶ: ರದ್ದಾಗಲಿದೆ.
-
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
IPL 2026: ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ಹೇಳೋದೇನು? -
ಮಾರ್ಚ್ 26ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
KEA: ರಾಜ್ಯದ ವಸತಿ ಶಾಲೆಗಳ ಪ್ರವೇಶ ಪರೀಕ್ಷೆ, ಅಂತಿಮ ಅಂಕಪಟ್ಟಿ ಪ್ರಕಟ -
Jobs: ರಾಜ್ಯದ ಕಾರಾಗೃಹ ಆಸ್ಪತ್ರೆಗಳಲ್ಲಿ ಖಾಲಿ ಇರುವ ವೈದ್ಯಕೀಯ ಸಿಬ್ಬಂದಿ ಹುದ್ದೆಗಳ ಭರ್ತಿಗೆ ಸರ್ಕಾರದ ಮಹತ್ವದ ಆದೇಶ -
ಬೆಂಗಳೂರಿನಲ್ಲಿ ದೇಶದ ಮೊದಲ ಮನೋರೋಗ ಅಧ್ಯಯನದ ಡಿಜಿಟಲ್ 'ಕಾಮ್-ಬ್ರೈನ್' ಲೋಕಾರ್ಪಣೆ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್










Click it and Unblock the Notifications