ನೈಋತ್ಯ ರೈಲ್ವೆ ಪ್ರಕಟಣೆ; ಹಲವು ರೈಲು ಸಂಚಾರದಲ್ಲಿ ಬದಲಾವಣೆ
ಬೆಂಗಳೂರು, ಆಗಸ್ಟ್ 06; ನೈಋತ್ಯ ರೈಲ್ವೆ ಕಾಮಗಾರಿಯ ಕಾರಣ ಕೆಲವು ರೈಲುಗಳ ಸೇವೆಯಲ್ಲಿ ಬದಲಾವಣೆ ಮಾಡಲಾಗುತ್ತಿದೆ ಎಂದು ಹೇಳಿದೆ. ಆಗಸ್ಟ್ 8ರಿಂದ ರೈಲು ಸಂಚಾರ ನಡೆಸುವ ಜನರು ಈ ಮಾಹಿತಿ ತಿಳಿದು ಪ್ರಯಾಣಕ್ಕೆ ಯೋಜನೆ ರೂಪಿಸುವುದು ಸೂಕ್ತ.
ಬಿಸಾನತ್ತಂ ಮತ್ತು ಮಲ್ಲನೂರು ನಿಲ್ದಾಣಗಳ ನಡುವಿನ ಕುಪ್ಪಂ ನಿಲ್ದಾಣದಲ್ಲಿ ನಡೆಯುತ್ತಿರುವ ಕಾಮಗಾರಿಯ ಸಲುವಾಗಿ ಕೆಲವು ರೈಲುಗಳ ಸೇವೆಯಲ್ಲಿ ಬದಲಾವಣೆ ಮಾಡಲಾಗುತ್ತಿದೆ ಎಂದು ನೈಋತ್ಯ ರೈಲ್ವೆ ಹೇಳಿದೆ.

ಕೆಲವು ರೈಲುಗಳ ಸಂಚಾರವನ್ನು ರದ್ದುಗೊಳಿಸಲಾಗಿದೆ. ಕೆಲವು ರೈಲುಗಳ ಮಾರ್ಗ ಬದಲಾವಣೆ ಮಾಡಲಾಗಿದೆ. ಕೆಲವು ರೈಲುಗಳು ತಡವಾಗಿ ಸಂಚಾರವನ್ನು ಆರಂಭಿಸಲಿವೆ. ಯಾವ-ಯಾವ ರೈಲುಗಳ ಎಂಬ ಮಾಹಿತಿ ಇಲ್ಲಿದೆ.
ರೈಲು ರದ್ದು; ರೈಲು ಸಂಖ್ಯೆ 06290 ಕುಪ್ಪಂ - ಬಂಗಾರಪೇಟೆ ವಿಶೇಷ ಮೆಮು ರೈಲನ್ನು ಆಗಸ್ಟ್ 8 ಮತ್ತು 9 ರಂದು ರದ್ದುಗೊಳಿಸಲಾಗುತ್ತಿದೆ.
* ರೈಲು ಭಾಗಶಃ ರದ್ದು. ರೈಲು ಸಂಖ್ಯೆ 06291 ಕೃಷ್ಣರಾಜಪುರಂ-ಕುಪ್ಪಂ ವಿಶೇಷ ಮೆಮು ರೈಲನ್ನು ಬಂಗಾರಪೇಟೆ ಮತ್ತು ಕುಪ್ಪಂ ನಿಲ್ದಾಣಗಳ ನಡುವೆ ಆಗಸ್ಟ್ 8 ಮತ್ತು 9 ರಂದು ಭಾಗಶಃ ರದ್ದುಗೊಳಿಸಲಾಗುತ್ತಿದೆ. ಈ ರೈಲು ಕುಪ್ಪಂ ಬದಲು ಬಂಗಾರಪೇಟೆ ನಿಲ್ದಾಣದಲ್ಲಿ ತನ್ನ ಪ್ರಯಾಣ ಕೊನೆಗೊಳಿಸಲಿದೆ.
* ರೈಲುಗಳ ಮಾರ್ಗ ಬದಲಾವಣೆ. ಆಗಸ್ಟ್ 8 ರಂದು ಬೆಂಗಳೂರಿನಿಂದ ಹೊರಡುವ ರೈಲು ಸಂಖ್ಯೆ 12684 ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು-ಎರ್ನಾಕುಲಂ ಸೂಪರ್ಫಾಸ್ಟ್ ಎಕ್ಸ್ಪ್ರೆಸ್ ರೈಲು ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು, ಬೈಯ್ಯಪ್ಪನಹಳ್ಳಿ, ಹೊಸೂರು, ಓಮಲೂರು ಮತ್ತು ಸೇಲಂ ನಿಲ್ದಾಣಗಳ ಮಾರ್ಗವಾಗಿ ಚಲಿಸಲಿದೆ. ಹೀಗಾಗಿ ಕೃಷ್ಣರಾಜಪುರಂ, ಬಂಗಾರಪೇಟೆ ಮತ್ತು ತಿರುಪತ್ತೂರು ನಿಲ್ದಾಣಗಳಲ್ಲಿ ನಿಲುಗಡೆ ಇಲ್ಲ.
* ಆಗಸ್ಟ್ 8 ಮತ್ತು 9 ರಂದು ಕೆ. ಎಸ್. ಆರ್ ಬೆಂಗಳೂರಿನಿಂದ ಹೊರಡುವ ರೈಲು ಸಂಖ್ಯೆ 16526 ಕೆ. ಎಸ್. ಆರ್ ಬೆಂಗಳೂರು-ಕನ್ಯಾಕುಮಾರಿ ಡೈಲಿ ಎಕ್ಸ್ಪ್ರೆಸ್ ರೈಲು ಬೆಂಗಳೂರು ದಂಡು, ಬೈಯ್ಯಪ್ಪನಹಳ್ಳಿ ಹೊಸೂರು, ಓಮಲೂ ಮತ್ತು ಸೇಲಂ ನಿಲ್ದಾಣಗಳ ಮಾರ್ಗವಾಗಿ ಚಲಿಸಲಿದೆ. ಹೀಗಾಗಿ ಕೃಷ್ಣರಾಜಪುರಂ, ವೈಟ್ಫೀಲ್ಡ್, ಮಾಲೂರು, ಬಂಗಾರಪೇಟೆ, ಕುಪ್ಪಂ ಮತ್ತು ತಿರುಪತ್ತೂರು ನಿಲ್ದಾಣಗಳಲ್ಲಿ ನಿಲುಗಡೆ ಇಲ್ಲ.
* ರೈಲು ತಡವಾಗಿ ಪ್ರಾರಂಭ. ಆಗಸ್ಟ್ 8 ಮತ್ತು 9 ರಂದು ಕೆ. ಎಸ್. ಆರ್ ಬೆಂಗಳೂರಿನಿಂದ ಹೊರಡುವ ರೈಲು ಸಂಖ್ಯೆ 12658 ಕೆ. ಎಸ್. ಆರ್ ಬೆಂಗಳೂರು-ಡಾ ಎಂ. ಜಿ. ಆರ್ ಚೆನ್ನೈ ಸೆಂಟ್ರಲ್ ಡೈಲಿ ಸೂಪರ್ಫಾಸ್ಟ್ ಎಕ್ಸ್ಪ್ರೆಸ್ ರೈಲು ಮೂಲ ನಿಲ್ದಾಣದಿಂದ ಕ್ರಮವಾಗಿ 60 ಮತ್ತು 70 ನಿಮಿಷ ಕಾಲ ತಡವಾಗಿ ಪ್ರಾರಂಭವಾಗಲಿದೆ.
* ರೈಲುಗಳ ನಿಯಂತ್ರಣ. ಆಗಸ್ಟ್ 7 ರಂದು ದಾದರ್ನಿಂದ ಹೊರಡುವ ರೈಲು ಸಂಖ್ಯೆ 11005 ದಾದರ್-ಪುದುಚೇರಿ ಎಕ್ಸ್ಪ್ರೆಸ್ ರೈಲನ್ನು ಮಾರ್ಗ ಮಧ್ಯ 30 ನಿಮಿಷ ಕಾಲ ನಿಯಂತ್ರಿಸಲಾಗುತ್ತಿದೆ.
* ಆಗಸ್ಟ್ 8 ಮತ್ತು 9 ರಂದು ಚಾಮರಾಜನಗರದಿಂದ ಹೊರಡುವ ರೈಲು ಸಂಖ್ಯೆ 16219 ಚಾಮರಾಜನಗರ- ತಿರುಪತಿ ಡೈಲಿ ಎಕ್ಸ್ಪ್ರೆಸ್ ರೈಲನ್ನು ಮಾರ್ಗ ಮಧ್ಯ ಕ್ರಮವಾಗಿ 90 ಮತ್ತು 100 ನಿಮಿಷಗಳ ಕಾಲ ನಿಯಂತ್ರಿಸಲಾಗುತ್ತಿದೆ.
* ಆಗಸ್ಟ್ 9 ರಂದು ಮೈಸೂರಿನಿಂದ ಹೊರಡುವ ರೈಲು ಸಂಖ್ಯೆ 22681 ಮೈಸೂರು-ಡಾ ಎಂ.ಜಿ.ಆರ್ ಚೆನ್ನೈ ಸೂಪರ್ಫಾಸ್ಟ್ ಎಕ್ಸ್ಪ್ರೆಸ್ ರೈಲನ್ನು ಮಾರ್ಗ ಮಧ್ಯ 60 ನಿಮಿಷ ಕಾಲ ನಿಯಂತ್ರಿಸಲಾಗುತ್ತಿದೆ.
ಪ್ರಕಟಣೆಯಲ್ಲಿ ನೈಋತ್ಯ ರೈಲ್ವೆ. ನಾಗವಂಗಲ ಮತ್ತು ಚಿಕ್ಕಜಾಜೂರು ನಿಲ್ದಾಣಗಳ ನಡುವಿನ ರೈಲ್ವೆ ಸಂಬಂಧಿತ ಕಾಮಗಾರಿ ಸಲುವಾಗಿ ಈ ಕೆಳಗಿನ ರೈಲುಗಳನ್ನು ನಿಯಂತ್ರಿಸಲಾಗುತ್ತಿದೆ ಎಂದು ಹೇಳಿದೆ.
* ರೈಲು ಸಂಖ್ಯೆ 16213 ಅರಸೀಕೆರೆ-ಎಸ್. ಎಸ್. ಎಸ್ ಹುಬ್ಬಳ್ಳಿ ಡೈಲಿ ಎಕ್ಸ್ಪ್ರೆಸ್ ರೈಲನ್ನು ಆಗಸ್ಟ್ 8 ಮತ್ತು 9 ರಂದು ಮಾರ್ಗ ಮಧ್ಯ 90 ನಿಮಿಷ ಕಾಲ ನಿಯಂತ್ರಿಸಲಾಗುತ್ತಿದೆ.
* ಆಗಸ್ಟ್ 9 ರಂದು ವಾಸೋ-ಡ-ಗಾಮಾದಿಂದ ಹೊರಡುವ ರೈಲು ಸಂಖ್ಯೆ 17310 ವಾಸೋ-ಡ-ಗಾಮಾ- ಯಶವಂತಪುರ ಡೈಲಿ ಎಕ್ಸ್ಪ್ರೆಸ್ ರೈಲನ್ನು ಮಾರ್ಗ ಮಧ್ಯ 15 ನಿಮಿಷ ಕಾಲ ನಿಯಂತ್ರಿಸಲಾಗುತ್ತಿದೆ.












Click it and Unblock the Notifications