Sankranthi Special: ನೈಋತ್ಯ ರೈಲ್ವೆಯಿಂದ ಹಬ್ಬದ ವಿಶೇಷ ರೈಲುಗಳ ಸೇವೆ
ಮೈಸೂರು, ಡಿಸೆಂಬರ್ 10: ಕ್ರಿಸ್ ಮಸ್, ಹೊಸ ವರ್ಷ ಹಾಗೂ ಸಂಕ್ರಾಂತಿ ಹಬ್ಬದ ಅಂಗವಾಗಿ ನೈಋತ್ಯ ರೈಲ್ವೆಯು ಮೈಸೂರಿನಿಂದ ವಿವಿಧ ಸ್ಥಳಗಳಿಗೆ ಹಬ್ಬದ ವಿಶೇಷ ರೈಲು ಸೇವೆಯನ್ನು ಆರಂಭಿಸಿದೆ.
ತಮಿಳುನಾಡು, ಕೇರಳ ರಾಜ್ಯಗಳನ್ನು ಸಂಪರ್ಕಿಸುವ ವಿಶೇಷ ರೈಲುಗಳು ಇವಾಗಿದ್ದು, ರೈಲುಗಳಲ್ಲಿ ಸಂಚರಿಸಲು ಟಿಕೆಟ್ ಗಳನ್ನು ಮುಂಗಡ ಬುಕಿಂಗ್ ಮಾಡಿಕೊಳ್ಳುವುದು ಕಡ್ಡಾಯವಾಗಿದೆ. ವಾರದ ಎಲ್ಲಾ ದಿನಗಳಲ್ಲಿ ಈ ರೈಲುಗಳು ಸಂಚರಿಸಲಿವೆ. ಇದರೊಂದಿಗೆ ಧಾರವಾಡ-ಮೈಸೂರು ಮಾರ್ಗದ ಹಬ್ಬದ ವಿಶೇಷ ಎಕ್ಸ್ ಪ್ರೆಸ್ ರೈಲು ಸೇವೆಯನ್ನೂ ವಿಸ್ತರಿಸಲಾಗಿದೆ.

ವಿಶೇಷ ರೈಲುಗಳ ಪಟ್ಟಿ
* ಕೊಚುವೆಲಿ ಎಕ್ಸ್ ಪ್ರೆಸ್: ಕೊಚುವೆಲಿಯಿಂದ ಮೈಸೂರು ಪ್ರಯಾಣಿಸಲಿದ್ದು, ಡಿ.11ರಿಂದ ಡಿ.31ರವರೆಗೆ ಸಂಚಾರವಿರಲಿದೆ.
* ಕೊಚುವೆಲಿ ಎಕ್ಸ್ ಪ್ರೆಸ್; ಮೈಸೂರಿನಿಂದ ಕೊಚುವೆಲಿ ಪ್ರಯಾಣಿಸಲಿದ್ದು, ಡಿ.12ರಿಂದ ಜ.01, 2021ವರೆಗೆ ಸಂಚಾರವಿರಲಿದೆ.
* ಕಾವೇರಿ ಎಕ್ಸ್ ಪ್ರೆಸ್; ಚೆನ್ನೈನಿಂದ ಮೈಸೂರು, ಡಿ.14ರಿಂದ ಡಿ.31ರವರೆಗೆ ಸಂಚಾರವಿರಲಿದೆ.
* ಕಾವೇರಿ ಎಕ್ಸ್ ಪ್ರೆಸ್: ಮೈಸೂರು ಚೆನ್ನೈ; ಡಿ.15ರಿಂದ ಜ.01, 2021ವರೆಗೆ ಸಂಚಾರವಿರಲಿದೆ.
ಹಬ್ಬದ ವಿಶೇಷ ರೈಲುಗಳ ದರವು ಸಾಮಾನ್ಯ ರೈಲಿಗಿಂತ 1.3 ಪಟ್ಟು ಹೆಚ್ಚಿನದಾಗಿದೆ. ಸಂಚಾರ ಸಮಯದಲ್ಲಿ ಹಾಗೂ ರೈಲ್ವೆ ನಿಲ್ದಾಣಗಳಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರವು ವಿಧಿಸಿರುವ ಕೋವಿಡ್ ನಿಯಮಗಳನ್ನು ಪಾಲಿಸಲು ಪ್ರಕಟಣೆಯಲ್ಲಿ ಕೋರಲಾಗಿದೆ.
ಹಬ್ಬದ ವಿಶೇಷ ರೈಲು ಸೇವೆ ವಿಸ್ತರಣೆ: ಧಾರವಾಡ ಮೈಸೂರು ಮಾರ್ಗದ ಎಕ್ಸ್ ಪ್ರೆಸ್ ರೈಲು ಸೇವೆಯನ್ನು ವಿಸ್ತರಿಸಲಾಗಿದೆ. ಧಾರವಾಡದಿಂದ ಮೈಸೂರು- ಜನವರಿ 15, 2021ರವರೆಗೆ, ಮೈಸೂರಿನಿಂದ ಧಾರವಾಡ ರೈಲು ಸೇವೆಯನ್ನು ಜನವರಿ 16, 2021ವರೆಗೂ ವಿಸ್ತರಿಸಲಾಗಿದೆ. ಸಮಯ, ನಿಲುಗಡೆಯಲ್ಲಿ ಯಾವುದೇ ಬದಲಾವಣೆಯಿಲ್ಲ. ಕ್ರಿಸ್ ಮಸ್, ಹೊಸ ವರ್ಷ ಹಾಗೂ ಸಂಕ್ರಾಂತಿ ಹಬ್ಬದ ಅಂಗವಾಗಿ ಪ್ರಯಾಣಿಕರ ಅನುಕೂಲಕ್ಕೆ ರೈಲು ಸೇವೆಯನ್ನು ವಿಸ್ತರಿಸಲಾಗಿದೆ.
Recommended Video
-
Summer Camp: ನಟನ ಮೈಸೂರು ಸಂಸ್ಥೆಯಿಂದ ಮಕ್ಕಳಿಗೆ ಬೇಸಿಗೆ ಶಿಬಿರ 'ರಜಾಮಜಾ' ಆಯೋಜನೆ -
ಹಿರಿಯ ನಾಗರಿಕರಿಗೆ ರೈಲ್ವೇ ನಿಯಮಗಳು 2026: ರಿಯಾಯಿತಿ ಇಲ್ಲದಿದ್ದರೂ ಸೌಲಭ್ಯಗಳು ಮುಂದುವರಿಕೆ -
Viral Video: 11 ವರ್ಷದ ಬಾಲಕನಿಂದ ಯಶಸ್ವಿ ವಿಮಾನ ಲ್ಯಾಂಡಿಂಗ್; ನೆಟ್ಟಿಗರ ಮನಗೆದ್ದ ಈ ಪುಟ್ಟ ಪೋರ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ












Click it and Unblock the Notifications