ನೈರುತ್ಯ ರೈಲ್ವೆಯ ವಿವಿಧ ವಿಶೇಷ ರೈಲುಗಳ ಸಂಚಾರ ಸೌಲಭ್ಯ ವಿಸ್ತರಣೆ: ಸಂಪೂರ್ಣ ಮಾಹಿತಿ ಇಲ್ಲಿದೆ
ಹುಬ್ಬಳ್ಳಿ, ಜೂನ್ 14: ನೈರುತ್ಯ ರೈಲ್ವೆಯು ವಿವಿಧ ವಿಶೇಷ ರೈಲುಗಳ ಸಂಚಾರ ಸೌಲಭ್ಯ ವಿಸ್ತರಣೆ ಮಾಡಲು ನಿರ್ಧರಿಸಿದ್ದು, ಹುಬ್ಬಳ್ಳಿ-ರಾಮೇಶ್ವರಂ (07355) ವಿಶೇಷ ರೈಲು ಸಂಚಾರವನ್ನು ಜುಲೈ 6ರಿಂದ ಡಿಸೆಂಬರ್ 28ರವರೆಗೆ, ರಾಮೇಶ್ವರಂ-ಹುಬ್ಬಳ್ಳಿ (07356) ರೈಲು ಸಂಚಾರವನ್ನು ಜುಲೈ1ರಿಂದ ಡಿಸೆಂಬರ್ 31ರವರೆಗೆ ವಿಸ್ತರಿಸಿದೆ.
ಹುಬ್ಬಳ್ಳಿ-ಕೆಸಿಆರ್ ಬೆಂಗಳೂರು (07339) ರೈಲು ಸಂಚಾರವನ್ನು ಜುಲೈ 1ರಿಂದ ಡಿಸೆಂಬರ್ 31ರವರೆಗೆ, ಕೆಸಿಆರ್ ಬೆಂಗಳೂರು-ಹುಬ್ಬಳ್ಳಿ (07340) ರೈಲು ಸಂಚಾರವನ್ನು ಜುಲೈ 2ರಿಂದ 2025ರ ಜನವರಿ 1ರವರೆಗೆ ವಿಸ್ತರಿಸಲಾಗಿದೆ.

ಹುಬ್ಬಳ್ಳಿ-ಡಾ.ಎಂ.ಜಿ.ಆರ್. ಚೆನ್ನೈ ಸೆಂಟ್ರಲ್-ಹುಬ್ಬಳ್ಳಿ (22697/22698) ಸಾಪ್ತಾಹಿಕ ರೈಲು ಯಶವಂತಪುರ ನಿಲ್ದಾಣದ ಬದಲು, ಯಶವಂತಪುರ ಬೈಪಾಸ್ ಮೂಲಕ ಸಂಚರಿಸಲಿದೆ. ಸೆಪ್ಟೆಂಬರ್ 7ರಿಂದ ಹುಬ್ಬಳ್ಳಿ- ಡಾ.ಎಂ.ಜಿ.ಆರ್. ಚೆನ್ನೈ ಸೆಂಟ್ರಲ್ (22697) ರೈಲು, ಸೆ.8ರಿಂದ ಡಾ.ಎಂ.ಜಿ.ಆರ್. ಚೆನ್ನೈ ಸೆಂಟ್ರಲ್-ಹುಬ್ಬಳ್ಳಿ (22698) ರೈಲು ಬದಲಿ ಮಾರ್ಗದಲ್ಲಿ ಸಂಚರಿಸಲಿದೆ ಎಂದು ಪ್ರಕಟಣೆ ತಿಳಿಸಿದೆ.
ಕರ್ನಾಟಕದ 11 ವಿಶೇಷ ರೈಲುಗಳು ರದ್ದು
11 ವಿಶೇಷ ರೈಲುಗಳು ತಾಂತ್ರಿಕ ದೋಷದಿಂದಾಗಿ ರದ್ದಾಗಿರುವುದಾಗಿ ನೈಋತ್ಯ ರೈಲ್ವೆ ತಿಳಿಸಿದೆ. ರೈಲು ಸಂಖ್ಯೆ 08543 ವಿಶಾಪಟ್ಟಣಂ ಸರ್ ಎಂ. ವಿಶ್ವೇಶ್ವರಯ್ಯ ನಿಲ್ದಾಣ( ಎಸ್ಎಂವಿಡಿ) ಬೆಂಗಳೂರು ರೈಲನ್ನು ಜೂನ್ 16ರಂದು ರದ್ದು ಮಾಡಲಾಗಿದೆ.
*ರೈಲು ಸಂಖ್ಯೆ 06218 ಗಯಾ-ಯಶವಂತಪುರ ರೈಲನ್ನು ಜೂನ್ 17ರಂದು ರದ್ದಾಗಲಿದೆ.
*ರೈಲು ಸಂಖ್ಯೆ 06521 ಎಸ್ಎಂವಿಟಿ ಬೆಂಗಳೂರು-ಗುವಾಹಟಿ ರೈಲು ಜೂನ್ 18 ರದ್ದುಗೊಳಿಸಲಾಗಿದೆ.
*ರೈಲು ಸಂಖ್ಯೆ 06565 ಎಸ್ಎಂವಿಟಿ ಬೆಂಗಳೂರು-ಮಾಲ್ಡ್ಟೌನ್ ರೈಲನ್ನು ಜೂನ್ 19ರಂದು ರದ್ದುಗೊಳಿಸಲಾಗಿದೆ.
*ರೈಲು ಸಂಖ್ಯೆ 08845 ಸಂತ್ರಗಾಚ್ ಎಸ್ಎಂವಿಟಿ ಬೇಂಗಳೂರು ರೈಲನ್ನು ಜೂನ್ 21ರಂದು ರದ್ದುಗೊಳಿಸಲಾಗಿದೆ.
*ರೈಲು ಸಂಖ್ಯೆ 06566 ಮಾಲ್ಡ್ಟೌನ್-ಎಸ್ಎಂವಿಟಿ ಬೆಂಗಳೂರು ರೈಲನ್ನು ಜೂನ್ 22ರಮದು ರದ್ದುಗೊಳಿಸಲಾಗಿದೆ.
*ರೈಲು ಸಂಖ್ಯೆ 06522 ಎಸ್ಎಂವಿಟಿ ಬೆಂಗಳೂರು ಗುವಾಹಟಿ ರೈಲು ಜೂನ್ 22ರಂದು ರದ್ದುಗೊಳಿಸಲಾಗಿದೆ.
* ರೈಲು ಸಂಖ್ಯೆ 08846 ಎಸ್ಎಂವಿಟಿ ಬೆಂಗಳೂರು-ಸಂತ್ರಗಾಚ್ ರೈಲನ್ನು ಜೂನ್ 23ರಂದು ರದ್ದುಗೊಳಿಸಲಾಗಿದೆ.
-
Railway Food: ರೈಲು ಪ್ರಯಾಣಿಕರ ಬಳಿ ಬರುತ್ತೆ ಆಹಾರ: ರೈಲ್ವೆ ಇಲಾಖೆಗೆ ಕಂಪನಿಗಳ ಸಾಥ್ -
New Railway Line: 6000 ಕಿಮೀ ರೈಲ್ವೆ ಜಾಲ ವಿಸ್ತರಣೆ, 100 ಯೋಜನೆಗಳ ಜಾರಿಗೆ ₹1.53 ಲಕ್ಷ ಕೋಟಿ ಹೂಡಿಕೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ -
ಹುಬ್ಬಳ್ಳಿ-ಗದಗ ಮಧ್ಯೆ ತಡೆರಹಿತ 'ರಾಜಹಂಸ' ಬಸ್ ಸೇವೆ ಆರಂಭ, ಟಿಕೆಟ್ ದರವೆಷ್ಟು-ವೇಳಾಪಟ್ಟಿ -
PUC ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್: ಇದೇ ವರ್ಷದಿಂದಲೇ ಸಿಗಲಿವೆ ಉಚಿತ ಪಠ್ಯ ಪುಸ್ತಕ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ












Click it and Unblock the Notifications