ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮೂರು ರೈಲುಗಳ ಸಂಚಾರ ರದ್ದುಗೊಳಿಸಲಿದೆ ನೈಋತ್ಯ ರೈಲ್ವೆ

|
Google Oneindia Kannada News

ಬೆಂಗಳೂರು, ಜೂನ್ 11 : ಲಾಕ್ ಡೌನ್ ಪರಿಣಾಮ ಆಗಿರುವ ನಷ್ಟವನ್ನು ತುಂಬಿಕೊಳ್ಳಲು ಭಾರತೀಯ ರೈಲ್ವೆ ಹಲವು ಕ್ರಮಗಳನ್ನು ಕೈಗೊಳ್ಳುತ್ತಿದೆ. ಆರ್ಥಿಕವಾಗಿ ನಷ್ಟವಾಗುವ ರೈಲುಗಳ ಸಂಚಾರವನ್ನು ರದ್ದುಗೊಳಿಸುತ್ತಿದೆ.

ನೈಋತ್ಯ ರೈಲ್ವೆ ಕರ್ನಾಟಕದಲ್ಲಿ ಮೂರು ರೈಲುಗಳ ಸಂಚಾರ ರದ್ದುಗೊಳಿಸಬಹುದು ಎಂದು ರೈಲ್ವೆ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಿದೆ. ರೈಲ್ವೆ ಇಲಾಖೆ ಕಡಿಮೆ ಜನರು ಸಂಚಾರ ನಡೆಸುವ, ಆರ್ಥಿಕವಾಗಿ ಲಾಭವಾಗದ ಮಾರ್ಗದಲ್ಲಿ ಸಂಚಾರವನ್ನು ಸ್ಥಗಿತಗೊಳಿಸುತ್ತಿದೆ.

ಕರ್ನಾಟಕದಿಂದ ಓಡಿದ್ದು 194 ಶ್ರಮಿಕ್ ರೈಲು; 2.8 ಲಕ್ಷ ಜನರ ಪ್ರಯಾಣ ಕರ್ನಾಟಕದಿಂದ ಓಡಿದ್ದು 194 ಶ್ರಮಿಕ್ ರೈಲು; 2.8 ಲಕ್ಷ ಜನರ ಪ್ರಯಾಣ

ಮೂರು ರೈಲು, 40 ನಿಲ್ದಾಣಗಳಲ್ಲಿ ರೈಲುಗಳ ನಿಲುಗಡೆಯನ್ನು ಸ್ಥಗಿತಗೊಳಿಸಲಾಗುತ್ತಿದೆ. ಕೆಲವು ರೈಲುಗಳ ಸಂಚಾರ ರದ್ದುಗೊಳಿಸುವ ಪ್ರಸ್ತಾವನೆಗೆ ಪ್ರಯಾಣಿಕರು ವಿರೋಧ ವ್ಯಕ್ತಪಡಿಸಿದ್ದಾರೆ. ಎಲ್ಲಾ ಮಾರ್ಗಗಳ ಪರಿಶೀಲನೆ ಬಳಿಕ ನೈಋತ್ಯ ರೈಲ್ವೆ ಈ ತೀರ್ಮಾನ ಕೈಗೊಂಡಿದೆ.

ಗಂಗಾವತಿ-ಕಾರಟಗಿ ರೈಲು; ಶೀಘ್ರದಲ್ಲೇ ಸಂಚಾರ ಆರಂಭ ಗಂಗಾವತಿ-ಕಾರಟಗಿ ರೈಲು; ಶೀಘ್ರದಲ್ಲೇ ಸಂಚಾರ ಆರಂಭ

ಪ್ರಸ್ತುತ ಕೆಲವು ಪ್ರಯಾಣಿಕರ ರೈಲುಗಳು ಮಾತ್ರ ಸಂಚಾರ ನಡೆಸುತ್ತಿವೆ. ಲಾಕ್ ಡೌನ್ ಮುಗಿದು ರೈಲುಗಳ ಸಂಚಾರ ಯಥಾಸ್ಥಿತಿಗೆ ಬಂದ ಬಳಿಕ ನೂತನ ವೇಳಾಪಟ್ಟಿ ಜಾರಿಗೆ ಬರಲಿದ್ದು, ಹಲವು ರೈಲುಗಳು ಸಂಚಾರವನ್ನು ನಿಲ್ಲಿಸಲಿವೆ.

50 ಲಕ್ಷ ವಲಸೆ ಕಾರ್ಮಿಕರನ್ನು 'ಗೂಡು' ಮುಟ್ಟಿಸಿದ ಶ್ರಮಿಕ್ ರೈಲು! 50 ಲಕ್ಷ ವಲಸೆ ಕಾರ್ಮಿಕರನ್ನು 'ಗೂಡು' ಮುಟ್ಟಿಸಿದ ಶ್ರಮಿಕ್ ರೈಲು!

ಯಾವ-ಯಾವ ರೈಲುಗಳು

ಯಾವ-ಯಾವ ರೈಲುಗಳು

ನೈಋತ್ಯ ರೈಲ್ವೆ ಮೂರು ರೈಲುಗಳ ಸಂಚಾರವನ್ನು ರದ್ದುಗೊಳಿಸುವ ಪ್ರಸ್ತಾಪವನ್ನು ಕಳಿಸಿದೆ.
* ಹುಬ್ಬಳ್ಳಿ - ಬೆಂಗಳೂರು ಪ್ಯಾಸೆಂಜರ್ ರೈಲು
* ಹುಬ್ಬಳ್ಳಿ - ಮೀರಜ್ ಎಕ್ಸ್‌ಪ್ರೆಸ್ ರೈಲು
* ಬೆಳಗಾವಿ - ವಾಸ್ಕೋ ವಿಶೇಷ ಪ್ಯಾಸೆಂಜರ್ ರೈಲು

ರೈಲು ನಿಲುಗಡೆಗೆ ಅಕ್ರೋಶ

ರೈಲು ನಿಲುಗಡೆಗೆ ಅಕ್ರೋಶ

ಹುಬ್ಬಳ್ಳಿ- ಬೆಂಗಳೂರು ಪ್ಯಾಸೆಂಜರ್ ರೈಲು ಸಂಚಾರವನ್ನು ರದ್ದುಗೊಳಿಸುವ ಪ್ರಸ್ತಾವನೆಗೆ ಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನಿಂದ ಬೆಳಗ್ಗೆ ಹೊರಡುತ್ತಿದ್ದ ರೈಲು ಸಂಜೆ 6.40ಕ್ಕೆ ಹುಬ್ಬಳ್ಳಿ ತಲುಪುತ್ತಿತ್ತು. ಹುಬ್ಬಳ್ಳಿಯಿಂದ ಬೆಳಗ್ಗೆ 9.15ಕ್ಕೆ ಹೊರಡುತ್ತಿದ್ದ ರೈಲು ಸಂಜೆ ಬೆಂಗಳೂರಿಗೆ ತಲುಪುತ್ತಿತ್ತು. ಪ್ರಯಾಣದರ 85 ರೂ. ಇದೆ.

ಪ್ರಯಾಣಿಕರಿಗೆ ತೊಂದರೆ ಆಗುವುದಿಲ್ಲ

ಪ್ರಯಾಣಿಕರಿಗೆ ತೊಂದರೆ ಆಗುವುದಿಲ್ಲ

ಈ ಮೂರು ರೈಲುಗಳ ಸಂಚಾರ ರದ್ದುಗೊಳ್ಳುವುದರಿಂದ ಜನರಿಗೆ ಯಾವುದೇ ತೊಂದರೆ ಇರುವುದಿಲ್ಲ. ಬೇರೆ ರೈಲುಗಳು ಸಂಚಾರ ನಡೆಸುತ್ತಿವೆ. ಆರ್ಥಿಕ ಕಾರಣಕ್ಕೆ ರೈಲುಗಳ ಸಂಚಾರ ರದ್ದುಗೊಳಿಸಲಾಗುತ್ತಿದೆ. ನಿಲ್ದಾಣಗಳಲ್ಲಿ ಸಹ ರೈಲುಗಳ ನಿಲುಗಡೆ ರದ್ದುಗೊಳಿಸಲಾಗುತ್ತಿದೆ ಎಂದು ಇಲಾಖೆ ಹೇಳಿದೆ.

ಯಾವ-ಯಾವ ನಿಲ್ದಾಣಗಳು?

ಯಾವ-ಯಾವ ನಿಲ್ದಾಣಗಳು?

ತಿಪಟೂರಿನಲ್ಲಿ 12, ಪಾಂಡವಪುರದಲ್ಲಿ 16, ಬಂಟ್ವಾಳದಲ್ಲಿ 5 ಸೇರಿದಂತೆ ರಾಜ್ಯದ 40 ನಿಲ್ದಾಣಗಳಲ್ಲಿ ರೈಲುಗಳ ನಿಲುಗಡೆ ರದ್ದುಗೊಳಿಸಲಾಗುತ್ತಿದೆ.

English summary
South western railways proposed to stop 3 trains inducing Hubballi and Bengaluru passenger train due to low collection.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X