SWR: ಪ್ರಶಾಂತಿ ಎಕ್ಸ್ಪ್ರೆಸ್ ರೈಲಿಗೆ ಹೆಚ್ಚುವರಿ ಬೋಗಿ: ರೈಲುಗಳ ನಿಲುಗಡೆಯಲ್ಲಿ ಬದಲಾವಣೆ
ನೈಋತ್ಯ ರೈಲ್ವೆ ವ್ಯಾಪ್ತಿಯಲ್ಲಿ ಪೀಕ್ ಸಮಯದಲ್ಲಿ ಉಂಟಾಗುವ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿವಾರಿಸಲು ಅಧಿಕಾರಿಗಳು ಮುಂದಾಗಿದ್ದಾರೆ. ಪ್ರಶಾಂತಿ ಡೈಲಿ ಎಕ್ಸ್ಪ್ರೆಸ್ ರೈಲಿಗೆ ಬೋಗಿ ಹೆಚ್ಚಿಸಲು ಪೂರ್ವ ಕರಾವಳಿ ರೈಲ್ವೆಯು ನಿರ್ಧರಿಸಿದೆ. ಜೊತೆಗೆ ಚನ್ನಸಂದ್ರ ನಿಲ್ದಾಣದಲ್ಲಿ ನಿಲುಗಡೆ ರದ್ದತಿ ಮುಂದುವರಿಯಲಿದೆ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.
ಭುವನೇಶ್ವರ-ಕೆಎಸ್ಆರ್ ಬೆಂಗಳೂರು ಪ್ರಶಾಂತಿ ಡೈಲಿ ಎಕ್ಸ್ಪ್ರೆಸ್ ರೈಲು (18463) ಏಪ್ರಿಲ್ 01 ರಿಂದ 30 ರವರೆಗೆ ಒಂದು ಎಸಿ ತ್ರಿ ಟೈಯರ್ ಕೋಚ್ ಹೆಚ್ಚುವರಿಯಾಗಿ ಸೇರಿಸಲಾಗುತ್ತದೆ. ಮರಳಿ ಅದೇ ದಿಕ್ಕಿನಲ್ಲಿ ಬರುವ ಕೆಎಸ್ಆರ್ ಬೆಂಗಳೂರು-ಭುವನೇಶ್ವರ ಪ್ರಶಾಂತಿ ಡೈಲಿ ಎಕ್ಸ್ಪ್ರೆಸ್ ರೈಲು (18464) ಸಹ ಒಂದು ತಿಂಗಳ ಕಾಲ ಎಸಿ ತ್ರಿ ಟೈಯರ್ ಕೋಚ್ನೊಂದಿಗೆ ಕಾರ್ಯಾಚರಣೆ ನಡೆಸಲಿದೆ ಎಂದು ನೈಋತ್ಯ ರೈಲ್ವೆ ಮುಕ್ಯ ಸಾರ್ವಜನಿಕ ಸಂಪರ್ಕಾಧಿಕಾರಿ ಮಂಜುನಾಥ ಕನಮಡಿ ಅವರು ಹೇಳಿದರು.

ಚನ್ನಸಂದ್ರ ನಿಲ್ದಾಣ ಸ್ಟಾಪ್ ರದ್ದು ವಿಸ್ತರಣೆ
ಚನ್ನಸಂದ್ರ ರೈಲು ನಿಲ್ದಾನಗಳಲ್ಲಿ ಪಾದಚಾರಿ ಸೇತುವೆಯ ಇಳಿಜಾರು ಕಾಮಗಾರಿ ಪ್ರಗತಿಯಲ್ಲಿದೆ. ಹೀಗಾಗಿ ಈ ಕೆಎಸ್ಆರ್ ಬೆಂಗಳೂರು-ಅನಂತಪುರ-ಕೆಎಸ್ಆರ್ ಬೆಂಗಳೂರು ಮೆಮು ರೈಲು (66559/66560) ಹಾಗೂ ಕೆಎಸ್ಆರ್ ಬೆಂಗಳೂರು-ಕೋಲಾರ-ಬೆಂಗಳೂರು ಕಂಟೋನ್ಮೆಂಟ್ ಡೆಮು ರೈಲುಗಳ (66591/66592) ಚನ್ನಸಂದ್ರ ನಿಲ್ದಾಣದಲ್ಲಿ ನಿಲುಗಡೆ ರದ್ದತಿಯನ್ನು ಮುಂದಿನ ಮೇ 31ರವರೆಗೆ ವಿಸ್ತರಿಸಲಾಗಿದೆ.
ಹೂಡಿ ಹಾಲ್ಟ್: ತಾತ್ಕಾಲಿಕ ನಿಲುಗಡೆ ವಿಸ್ತರಣೆ
ನಿತ್ಯ ಸಂಚರಿಸುವ ಪ್ರಯಾಣಿಕರ ಅನುಕೂಲ ನೋಡಿಕೊಂಡು ಬೆಂಗಳೂರಿನ ಹೂಡಿ ಹಾಲ್ಟ್ ನಿಲ್ದಾಣದಲ್ಲಿ ನಿಲುಗಡೆ ನೀಡುತ್ತಿದ್ದ ಜೋಲಾರ್ಪೇಟೆ-ಕೆಎಸ್ಆರ್ ಬೆಂಗಳೂರು-ಜೋಲಾರ್ಪೇಟೆ ಮೆಮು ರೈಲಿನ (16519/16520) ತಾತ್ಕಾಲಿಕ ನಿಲುಗಡೆಯನ್ನು ಜೂನ್ 1ರಿಂದ ನವೆಂಬರ್ 30ರವರೆಗೆ ಆರು ತಿಂಗಳ ಅವಧಿಗೆ ವಿಸ್ತರಣೆ ಮಾಡಲಾಗಿದೆ.
ರೈಲುಗಳ ಸಮಯ ಪರಿಷ್ಕರಣೆ
ವಿರಂಗನ ಲಕ್ಷ್ಮಿಬಾಯಿ ಝಾನ್ಸಿ ಜಂಕ್ಷನ್ನಿಂದ ಹೊಡವು ಹಜರತ್ ನಿಜಾಮುದ್ದೀನ್-ಮೈಸೂರು ಸಾಪ್ತಾಹಿಕ ಎಕ್ಸ್ಪ್ರೆಸ್ ರೈಲಿನ (12782) ಆಗಮನ ಮತ್ತು ನಿರ್ಗಮನ ಸಮಯವನ್ನು ಪರಿಷ್ಕೃರಣೆ ಮಾಡಲಾಗಿದೆ. ಈ ಹೊಸ ಸಮಯದಡಿ ರೈಲು ಆಗಮನ ನಿರ್ಗಮನವು ಮುಂದಿನ ಮೇ 25 ಜಾರಿಗೆ ಬರಲಿದೆ. ಈ ಹಿಂದೆ ಹಿಂದೆ 11:20 ಗಂಟೆಯ ಬದಲಿಗೆ 11:15 ಗಂಟೆಗೆ ಮತ್ತು 11:28 ಗಂಟೆಯ ಬದಲಿಗೆ 11:23 ಗಂಟೆಗೆ ಆಗಮಿಸಿ ನಿರ್ಗಮಿಸಲಿದೆ ಎಂದು ನೈಋತ್ಯ ರೈಲ್ವೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
-
SWR: ಏಪ್ರಿಲ್ 2-5 ಬೆಂಗಳೂರು, ಹುಬ್ಬಳ್ಳಿಯಿಂದ ವಿಶೇಷ ಎಕ್ಸ್ಪ್ರೆಸ್ ರೈಲು ಕಾರ್ಯಾಚರಣೆ, ವೇಳಾಪಟ್ಟಿ -
Hindi Language: ಹಿಂದಿ ಭಾಷೆ ರದ್ದು, ಎಸ್ಎಸ್ಎಲ್ಸಿ ಮಕ್ಕಳ ಬದುಕಿಗೆ ಕಲ್ಲು:ಆರ್ ಅಶೋಕ್ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Karnataka Rains: ಬೆಂಗಳೂರು ಸೇರಿ ರಾಜ್ಯದ ಹಲವು ಜಿಲ್ಲೆಗಳಿಗೆ ಮುಂದಿನ ಮೂರು ಗಂಟೆಗಳಲ್ಲಿ ಭಾರೀ ಮಳೆ ಮುನ್ಸೂಚನೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ಪಾರದರ್ಶಕ ನೇಮಕಾತಿಗಾಗಿ ಪ್ರತಿಷ್ಠಿತ 'ಸ್ಕಾಚ್ ರಾಷ್ಟ್ರೀಯ ಪ್ರಶಸ್ತಿ' ಮುಡಿಗೇರಿಸಿಕೊಂಡ KSRTC -
Bengaluru Metro: ORR ರಸ್ತೆಯ ನೀಲಿ ಮಾರ್ಗದಲ್ಲಿ ಸಂಯೋಜಿತ ಗರ್ಡರ್ ಸ್ಥಾಪನೆ -
IPL 2026: ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ಹೇಳೋದೇನು? -
ಕನ್ನಡತಿ ಶ್ರೇಯಾಂಕಾ ಪಾಟೀಲ್, ಮಂಧಾನ ಜೊತೆ ಆರ್ಸಿಬಿ ಪಂದ್ಯ ವೀಕ್ಷಣೆ: ಕ್ರೀಡಾ ಸ್ಪೂರ್ತಿ ಮೆರೆದ ಜೆಮಿಮಾ ರೊಡ್ರಿಗಸ್ -
Indian Railway: ಬಣ್ಣದಿಂದಲೇ ರೈಲುಗಳ ವ್ಯತ್ಯಾಸ ಗುರುತಿಸುವುದು ಹೇಗೆ? -
RCB: ಆರ್ಸಿಬಿ ಜೆರ್ಸಿ ಧರಿಸಿದವರಿಗೆ ಉಚಿತ ಪ್ರಯಾಣ; ಬೆಂಗಳೂರು ಆಟೋ ಚಾಲಕನ 'ಆಫರ್' ಪೋಸ್ಟರ್ ವೈರಲ್












Click it and Unblock the Notifications