ಅಕ್ಟೋಬರ್ 31ರಿಂದ 3 ದಿನ ಕರ್ನಾಟಕದ ವಿವಿಧೆಡೆ ಭಾರಿ ಮಳೆ
ಬೆಂಗಳೂರು, ಅಕ್ಟೋಬರ್ 28: ಕರ್ನಾಟಕದ ವಿವಿಧೆಡೆ ಅಕ್ಟೋಬರ್ 31 ರಿಂದ ನವೆಂಬರ್ 2 ರವರೆಗೆ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ದಕ್ಷಿಣ ಕನ್ನಡ, ಚಿಕ್ಕಮಗಳೂರು,ಕೊಡಗು, ಶಿವಮೊಗ್ಗದಲ್ಲಿ ಅಕ್ಟೋಬರ್ 31ರಂದು ಮಳೆಯಾಗಲಿದೆ.ರಾಜ್ಯದಲ್ಲಿ ತಿಂಗಳಾಂತ್ಯಕ್ಕೆ ಮತ್ತೆ ಮಳೆ ಮರಳಲಿದೆ. ಉತ್ತರ ಕರ್ನಾಟಕದಲ್ಲಿ ಅನಾಹುತ ಉಂಟು ಮಾಡಿದ್ದ ಚಿತ್ತಾ ಮಳೆ ದಕ್ಷಿಣಕ್ಕೆ ಚಿತ್ತೈಸಿಸಿ ಭಾರಿ ವರ್ಷಧಾರೆಗೆ ದಾರಿ ಮಾಡಿಕೊಟ್ಟಿತ್ತು.
ಅತಿವೃಷ್ಟಿಯಿಂದ ಸಂತ್ರಸ್ತ ಉತ್ತರ ಕರ್ನಾಟಕ ರೈತರಿಗೆ ನ್ಯಾಯ ಸಿಗಲಿ
ಈ ಬಾರಿ ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ತಮಿಳುನಾಡು ಹಾಗೂ ಕೇರಳದತ್ತ ಸಾಗಲಿದೆ. ಇದರಿಂದಾಗಿ ಈ ಎರಡೂ ರಾಜ್ಯಗಳ ಗಡಿಗಳಿಗೆ ಹೊಂದಿಕೊಂಡಿರುವ ಕರ್ನಾಟಕದ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮುಂಬರುವ ಶುಕ್ರವಾರ ಹಾಗೂ ಶನಿವಾರ ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು ನಗರ,ಗ್ರಾಮಾಂತರ ಜಿಲ್ಲೆಗಳ ಕೆಲವೆಡೆ ಮಳೆಯಾಗಲಿದೆ
ಅ.30ರಿಂದ ನಿರೀಕ್ಷಿಸಲಾಗಿರುವ ಮಳೆಯು ಕರಾವಳಿ ಹಾಗೂ ಮಲೆನಾಡು ಒಳಗೊಂಡಿರುವ ದಕ್ಷಿಣ ಒಳನಾಡಿಗೆ ಸೀಮಿತವಾಗಲಿದೆ. ಆದರೆ, ಹಿಂದಿನಷ್ಟು ಬಿರುಸು ಮಳೆ ಬಾರದಿದ್ದರೂ, ಸಾಧಾರಣ ಪ್ರಮಾಣದ ವರ್ಷಧಾರೆಯಾಗಲಿದೆ. ಉತ್ತರ ಒಳನಾಡಿನ ಜಿಲ್ಲೆಗಳಿಗೆ ಮಳೆ ಕಾಟ ಇರದು. ಆ ಜಿಲ್ಲೆಗಳ ಸೀಮಿತ ಪ್ರದೇಶಗಳಲ್ಲಿ ಹಗುರದಿಂದ ಕೂಡಿದ ಮಳೆ ಮಾತ್ರ ಆಗಲಿದ್ದು, ಒಣ ಹವೆ ಮುಂದುವರಿಯಲಿದೆ.
Recommended Video
ಕಲಬುರಗಿಯಲ್ಲಿ ಅತಿ ಹೆಚ್ಚು ಅಂದರೆ 33.3 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ. ಬೀದರ್ನಲ್ಲಿ ಕನಿಷ್ಠ 14.4 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ. ನವೆಂಬರ್ 1 ರಿಂದ 2ರವರೆಗೆ ಕರ್ನಾಟಕದ ಕರಾವಳಿ, ಉತ್ತರ ಮತ್ತು ದಕ್ಷಿಣ ಒಳನಾಡಿನಲ್ಲಿ ಮಳೆಯಾಗಲಿದೆ.