ಆರ್.ಎಸ್.ಎಸ್ ಸುಳ್ಳುಗಳ ಬಗ್ಗೆ ಮಾತನಾಡಿ: ಕಾಂಗ್ರೆಸ್‌ ಕಾರ್ಯಕರ್ತರಿಗೆ ಸಿಎಂ ಕ್ಲಾಸ್‌!

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾಂಗ್ರೆಸ್‌ ಕಾರ್ಯಕರ್ತರಿಗೆ ಸಣ್ಣಗೆ ಕ್ಲಾಸ್‌ ತೆಗೆದುಕೊಂಡಿದ್ದಾರೆ. ಆರ್.ಎಸ್.ಎಸ್ ಮತ್ತು ಬಿಜೆಪಿ ಪರಿವಾರ ಹೇಳುವ ಸುಳ್ಳುಗಳನ್ನು ಮೆಟ್ಟಿನಿಂತು, ಸತ್ಯ ಹೇಳುವ ಎದೆಗಾರಿಕೆಯನ್ನು ನಮ್ಮ ಪಕ್ಷದ ಕಾರ್ಯಕರ್ತರು ಬೆಳೆಸಿಕೊಳ್ಳಬೇಕು. ಕಾಂಗ್ರೆಸ್ ಕಾರ್ಯಕರ್ತರಿಗೆ ಸೈದ್ಧಾಂತಿಕ ಸ್ಪಷ್ಟತೆ ಇರಬೇಕು. ಕಾರಣ ಸೈದ್ಧಾಂತಿಕ ಹೋರಾಟವನ್ನು ನಾವು ನೀವೆಲ್ಲಾ ಈ ದೇಶದ ಭವಿಷ್ಯಕ್ಕಾಗಿ ಮುನ್ನಡೆಸಬೇಕು ಅಂತ ಅವರು ಹೇಳಿದ್ದಾರೆ.

ಬೆಂಗಳೂರಿನ ಕೆಪಿಸಿಸಿ ಕಚೇರಿಯ ಭಾರತ್ ಜೋಡೋ ಭವನದಲ್ಲಿ ಆಯೋಜಿಸಿದ್ದ 134ನೇ ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ಅವರು ಮಾತನಾಡಿದ್ದಾರೆ. ಮನುವಾದಿಗಳು ನಮ್ಮ ಸಂವಿಧಾನವನ್ನು ವಿರೋಧಿಸಿದ್ದು, ಅಂಬೇಡ್ಕರ್ ಅವರು ಮನುಸ್ಮೃತಿಗೆ ಬೆಂಕಿ ಹಾಕಿ ಸುಟ್ಟಿದ್ದು ಏಕೆ ಎಂದು ಪ್ರಶ್ನೆ ಮಾಡಿರುವ ಅವರು ನಮ್ಮ ಕಾರ್ಯಕರ್ತರು ಸ್ಪಷ್ಟವಾಗಿ ಅರಿತುಕೊಳ್ಳಬೇಕು. ಜನರಿಗೆ, ಇವತ್ತಿನ ಯುವ ಸಮುದಾಯಕ್ಕೆ ಸತ್ಯವನ್ನು ಅರ್ಥ ಮಾಡಿಸಬೇಕು ಎಂದು ಕಿವಿ ಮಾತು ಹೇಳಿದ್ದಾರೆ.

Speak about RSS lies CM Siddaramaiah s Class for Congress Workers

ಮನುಸ್ಮೃತಿ ಮತ್ತು ಜಾತಿ ವ್ಯವಸ್ಥೆ ಕಾರಣದಿಂದ ಶೋಷಣೆಗೆ, ದೌರ್ಜನ್ಯಕ್ಕೆ ಒಳಗಾಗಿದ್ದ ಎಲ್ಲಾ ಜಾತಿ, ಸಮುದಾಯಗಳನ್ನು ದೌರ್ಜನ್ಯಮುಕ್ತಗೊಳಿಸಲು ಅಂಬೇಡ್ಕರ್ ಅವರ ಬದುಕು ಮುಡಿಪಾಗಿತ್ತು. ಸಾಮಾಜಿಕ ನ್ಯಾಯದಿಂದ ವಂಚಿತರಾದವರಿಗಾಗಿ, ಅಸ್ಪೃಶ್ಯತೆ ಹೋಗಲಾಡಿಸುವುದಕ್ಕಾಗಿ ತಾನು ಶಿಕ್ಷಣ ಪಡೆದದ್ದಾಗಿ ಅಂಬೇಡ್ಕರ್ ಹೇಳಿದ ಮಾತು ಅವರ ಆಶಯ ಎಂಥದ್ದು ಎನ್ನುವುದನ್ನು ತೋರಿಸುತ್ತದೆ. 1952 ರ ಜನವರಿ 18 ರಂದು ಅಂಬೇಡ್ಕರ್ ಅವರು ತಮ್ಮ ಕೈಯಾರೆ ತಮ್ಮದೇ ಹಸ್ತಾಕ್ಷರದಲ್ಲಿ ಒಂದು ಪತ್ರ ಬರೆದಿದ್ದಾರೆ. ಆ ಪತ್ರದಲ್ಲಿ ತಮ್ಮನ್ನು ಚುನಾವಣೆಯಲ್ಲಿ ಸೋಲಿಸಿದ್ದು ಸಾವರ್ಕರ್ ಮತ್ತು ಢಾಂಗೆ ಎಂದು ಸ್ಪಷ್ಟವಾಗಿ ಬರೆದಿದ್ದಾರೆ. ಆದರೂ ಬಿಜೆಪಿಯವರು ಅಂಬೇಡ್ಕರ್ ಅವರನ್ನು ಸೋಲಿಸಿದ್ದು ಕಾಂಗ್ರೆಸ್ ಎಂದು ಸುಳ್ಳು ಹೇಳುತ್ತಾ ತಿರುಗುತ್ತಿದ್ದಾರೆ. ಕಾಂಗ್ರೆಸ್ ಕಾರ್ಯಕರ್ತರು ಜನರಿಗೆ ಈ ಸತ್ಯ ಹೇಳುವ ಎದೆಗಾರಿಕೆ ಬೆಳೆಸಿಕೊಳ್ಳಬೇಕು ಅಂತ ಹೇಳಿದ್ದಾರೆ.

ಮುಂದುವರಿದು ಎಲ್ಲಾ ಜಾತಿ, ಎಲ್ಲಾ ಧರ್ಮದವರನ್ನೂ ಸಮಾನವಾಗಿ ಕಾಣುವ ಎಲ್ಲರ ಪ್ರಗತಿಗೆ ಕಾರ್ಯಕ್ರಮಗಳನ್ನು ರೂಪಿಸಿ, ಜಾರಿ ಮಾಡಿರುವ ಚರಿತ್ರೆ ಮತ್ತು ವರ್ತಮಾನ ಇರುವುದು ಕಾಂಗ್ರೆಸ್ ಪಕ್ಷಕ್ಕೆ ಮಾತ್ರ. ಬಿಜೆಪಿಯವರಿಗೆ ಸಾರ್ವಕರ್ ಮತ್ತು ಗಾಂಧಿಯನ್ನು ಕೊಲೆ ಮಾಡಿದ ಗೋಡ್ಸೆ ಬಿಟ್ಟು ಉಳಿದ ಯಾರೂ ಬೇಕಾಗಿಲ್ಲ. ಆದರೆ ನಮಗೆ ಶಿಕ್ಷಣ, ಸಂಘಟನೆ ಮತ್ತು ಹೋರಾಟ ಎನ್ನುವ ಮೂರು ಮಂತ್ರಗಳನ್ನು ನೀಡಿದ ಅಂಬೇಡ್ಕರ್ ಬೇಕು, ಇವರು ನಮಗೆ ಬೇಕು. ಬೆಂಗಳೂರಿನಲ್ಲಿ ಅಂಬೇಡ್ಕರ್ ಮ್ಯೂಸಿಯಮ್ ಸ್ಥಾಪಿಸಲಾಗುವುದು ಮತ್ತು ಇಡೀ ದೇಶದಲ್ಲೇ ಅತ್ಯಂತ ಎತ್ತರದ ಅಂಬೇಡ್ಕರ್ ಪ್ರತಿಮೆ ಸ್ಥಾಪಿಸಲಾಗುವುದು ಅಂತ ಹೇಳಿದ್ದಾರೆ.

ನಾವು ರಾಜ್ಯದಲ್ಲಿ ಜಾರಿಗೆ ತಂದಿರುವ ಎಸ್.ಸಿ.ಎಸ್.ಪಿ / ಟಿ.ಎಸ್.ಪಿ ಕಾಯ್ದೆಯನ್ನು ಇಡೀ ದೇಶದಲ್ಲಿ ಜಾರಿಗೆ ತರಲು ನಿಮ್ಮಿಂದ ಸಾಧ್ಯವೇ ನರೇಂದ್ರ ಮೋದಿ ಅವರೇ ? ರಾಷ್ಟ್ರಮಟ್ಟದಲ್ಲಿ ಈ ಕಾಯ್ದೆಯನ್ನು ಜಾರಿಗೆ ತಂದು ತೋರಿಸಿ ಎಂದು ಸವಾಲು ಹಾಕಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+