ಅಧಿವೇಶನದ ಕುರಿತು ಮಾಹಿತಿ ನೀಡಿದ ಸ್ಪೀಕರ್ ವಿಶ್ವೇಶ್ವರ್ ಹೆಗಡೆ ಕಾಗೇರಿ!
ಬೆಂಗಳೂರು, ಸೆ. 28: ವಿಧಾನಸಭೆ ಕಲಾ ಇನ್ನಷ್ಟು ಉತ್ತಮವಾಗಿ ನಡೆಯಲು ಅನುಕೂಲವಾಗುವಂತೆ ನಿಯಮಾವಳಿ ಸಮಿತಿ ರಚನೆ ಮಾಡಲಾಗುವುದು ಎಂದು ವಿಧಾನಸಭಾಧ್ಯಕ್ಷ ವಿಶ್ವೇಶ್ವರ್ ಹೆಗಡೆ ಕಾಗೇರಿ ಅವರು ಹೇಳಿದ್ದಾರೆ. ಮಳೆಗಾಲದ ವಿಧಾನ ಮಂಡಲ ಅಧಿವೇಶನದ ಕುರಿತು ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದಾರೆ.
15ನೇ ವಿಧಾನಸಭೆಯ 7ನೇ ಅಧಿವೇಶನ ಶನಿವಾರ ಮುಕ್ತಾಯವಾಗಿದೆ. ಒಟ್ಟು ಕಲಾಪ 6 ದಿನಗಳಲ್ಲಿ 48 ಗಂಟೆಗಳ ಕಲಾಪ ನಡೆಸಲಾಗಿದೆ. ವಿಧಾನಸಭೆಯಲ್ಲಿ ಒಟ್ಟು 36 ವಿಧೇಯಕಗಳನ್ನು ಅಂಗೀಕಾರ ಮಾಡಲಾಗಿದೆ ಎಂದು ಸ್ಪೀಕರ್ ವಿಶ್ವೇಶ್ವರ್ ಹೆಗಡೆ ಕಾಗೇರಿ ಹೇಳಿದರು. ಸದಸ್ಯರಿಂದ ಒಟ್ಟು 3,071 ಪ್ರಶ್ನೆಗಳನ್ನು ಸ್ವೀಕರಿಸಲಾಗಿತ್ತು. ಅವುಗಳ ಪೈಕಿ 1,109 ಪ್ರಶ್ನೆಗಳಿಗೆ ಸದನದಲ್ಲಿ ಉತ್ತರ ಮಂಡನೆ ಮಾಡಲಾಗಿದೆ.
ಮಳೆಗಾಲದ ಅಧಿವೇಶನ ಒಟ್ಟು ಎಂಟು ದಿನಗಳ ಕಾಲ ನಡೆಯಬೇಕಿತ್ತು. ಆದರೆ ಕೊರೊನಾ ಸಂಕಷ್ಟದ ಹಿನ್ನಲೆಯಲ್ಲಿ ಆರು ದಿನ ಮಾತ್ರ ಕಲಾಪ ನಡೆಸಲು ಸಲಹಾ ಸಮಿತಿಯಲ್ಲಿ ತೀರ್ಮಾನ ಮಾಡಲಾಗಿತ್ತು. ಅದರಂತೆ ನಡೆದುಕೊಳ್ಳಲಾಗಿದೆ. ಕಲಾಪದ ಭಾಗವನ್ನು ಶೇಕಡಾ 90 ಕೆಲಸವನ್ನು ಪೂರ್ಣಗೊಳಿಸಿದ್ದೇವೆ. ಇದು ದಾಖಲೆಯಾಗಿದೆ. ಒಟ್ಟು ಮಂಡಿಸಲಾಗಿದ್ದ 37 ವಿಧೇಯಕಗಳ ಪೈಕಿ 36 ವಿಧೇಯಕಗಳು ಅಂಗೀಕಾರವಾಗಿವೆ. ವಿಧೇಯಕಗಳ ಮೇಲೆ ಚರ್ಚೆ ಮಾಡಿಯೇ ಅಂಗೀಕಾರವಾಗಿವೆ.

ಜೊತೆಗೆ ವಿರೋಧ ಪಕ್ಷದ ನಾಯಕರು ಮಂಡಿಸಿದ್ದ ಅವಿಶ್ವಾಸ ನಿರ್ಣಯ ಪ್ರಸ್ತಾಪ ಧ್ವನಿಮತದಿಂದ ತಿರಸ್ಕಾರವಾಗಿದೆ. ಕೈಗಾರಿಕಾ ವಿವಾದಗಳು ಮತ್ತು ಕೆಲವು ಕಾನೂನುಗಳ ತಿದ್ದುಪಡಿ ವಿಧೇಯಕ ವಿಧಾನ ಪರಿಷತ್ತಿನಲ್ಲಿ ತಿರಸ್ಕೃತಗೊಂಡಿವೆ ಎಂದು ಅಧಿವೇಶನದ ಕುರಿತು ಸ್ಪೀಕರ್ ಮಾಹಿತಿ ನೀಡಿದ್ದಾರೆ.

Recommended Video
ನಿಯಮಾವಳಿ ಸಮಿತಿ ರಚನೆ: ವಿಧಾನಸಭೆ ಕಲಾಪವನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಸುಗಮವಾಗಿ ನಡಸಲು ನಿಯಮಾವಳಿ ಸಮಿತಿ ರಚನೆ ಮಾಡಲಾಗುವುದು ಎಂದು ಸ್ಪೀಕರ್ ತಿಳಿಸಿದ್ದಾರೆ. ಸದನ, ಕಾರ್ಯಕಲಾಪಗಳಲ್ಲಿ ಇನ್ನೂ ಸುಧಾರಣೆ ತರುವ ನಿಟ್ಟಿನಲ್ಲಿ ಈ ಸಮಿತಿ ರಚನೆ ಮಾಡಲಾಗುವುದು. ಜೊತೆಗೆ ರಾಜ್ಯದ ಜನತೆಯೂ ಸಲಹೆಗಳನ್ನು ನೀಡಬಹುದಾಗಿದೆ ಎಂದಿದ್ದಾರೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications