ಕೊರೊನಾ ಇದ್ದರೂ ವಿಧಾನಸಭೆ ಕಲಾಪಕ್ಕೆ ಬಂದರಾ ಪ್ರಿಯಾಂಕ್ ಖರ್ಗೆ?
ಬೆಂಗಳೂರು, ಸೆ. 25: ಕೊರೊನಾ ವೈರಸ್ ಪಾಸಿಟಿವ್ ಇದ್ದರೂ ಮಾಜಿ ಸಚಿವ, ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ಅವರು ವಿಧಾನಸಭೆ ಕಲಾಪಕ್ಕೆ ಹಾಜರಾದರಾ? ಇಂಥದ್ದೊಂದು ಚರ್ಚೆ ವಿಧಾನಸಭೆ ಕಲಾಪ ಆರಂಭವಾದ ತಕ್ಷಣ ನಡೆಯಿತು. ವಿಧಾನ ಮಂಡಲ ಮಳೆಗಾಲದ ಅಧಿವೇಶನ ಆರಂಭವಾಗಿ ಐದನೇ ದಿನಕ್ಕೆ ಕಾಲಿಟ್ಟಿದೆ. ಆದರೆ ಕಾಂಗ್ರೆಸ್ ಸದಸ್ಯ ಪ್ರಿಯಾಂಕ್ ಖರ್ಗೆ ಅವರು ಎರಡು ದಿನಗಳ ಬಳಿಕ ಇವತ್ತು ಕಲಾಪದಲ್ಲಿ ಭಾಗವಹಿಸಿದ್ದರು.
ಪ್ರಿಯಾಂಕ್ ಖರ್ಗೆ ಅವರನ್ನು ಸದನದಲ್ಲಿ ನೋಡುತ್ತಿದ್ದಂತೆಯೆ ಕಾನೂನು ಸಚಿವ ಜೆ.ಸಿ. ಮಾಧುಸ್ವಾಮಿ ಅವರು ಆಕ್ಷೇಪ ಎತ್ತಿದರು. ಶಾಸಕ ಪ್ರಿಯಾಂಕ್ ಖರ್ಗೆ ಅವರು ಕೋವಿಡ್ ಪಾಸಿಟೀವ್ ಬಂದು ಎರಡೇ ದಿನಕ್ಕೆ ಸದನಕ್ಕೆ ಬಂದಿದ್ದಾರೆ ಎಂದು ಅವರು ಪ್ರಸ್ತಾಪಿಸಿದರು. ಅದಕ್ಕೆ ಸ್ಪಷ್ಟನೆ ಕೊಟ್ಟ ಪ್ರಿಯಾಂಕ್ ಖರ್ಗೆ ಅವರು, ಕೊರೊನಾ ಪಾಸಿಟಿವ್ ಕುರಿತು ಸದನದಲ್ಲಿ ಸ್ಪಷ್ಟನೆ ಕೊಟ್ಟರು.

ಮೊದಲು ನನಗೆ ಕೊರೊನಾ ಪಾಸಿಟಿವ್ ಎಂದು ವೈದ್ಯರು ವರದಿ ಕೊಟ್ಟಿದ್ದರು. ನಂತರ 48 ಗಂಟೆಗಳ ಬಳಿಕ ನೆಗೆಟಿವ್ ಎಂದು ವರದಿ ಬಂತು. ಅನುಮಾನ ಬಂದು ವೈದ್ಯರನ್ನು ಸಂಪರ್ಕಿಸಿ ಮತ್ತೆ ಪರೀಕ್ಷೆಗೆ ಒಳಗಾದಾಗ ನೆಗೆಟಿವ್ ಎಂದು ವರದಿ ಬಂತು. ನಂತರ ವೈರಲಾಜಿಸ್ಟ್ ಅವರನ್ನು ಭೇಟಿ ಮಾಡಿ, ಕೊನೆಗೆ RTPCR ಪರೀಕ್ಷೆಗೂ ಒಳಗಾಗಿದ್ದೆ. ಅದರಲ್ಲಿಯೂ ನೆಗಟಿವ್ ಎಂದಿದೆ. ಹೀಗಾಗಿ ಯಾರಿಗೂ ತೊಂದರೆಯಾಗಬಾರದೆಂದು ಎರಡು ದಿನ ಮನೆಯಲ್ಲಿಯೇ ಇದ್ದೆ. ನಿಮಗೆ ಕೊರೊನಾ ಬಂದೇ ಇಲ್ಲ ಅಂತ ವೈರಲಾಜಿಸ್ಟ್ ಹೇಳಿದ ಬಳಿಕ ನಾನು ಸದನಕ್ಕೆ ಹಾಜರಾಗಿದ್ದೇನೆ ಎಂದು ತಮ್ಮ ಕೊರೊನಾ ಬಗ್ಗೆ ಪ್ರಿಯಾಂಕ ಖರ್ಗೆ ಸ್ಪಷ್ಟನೆ ಕೊಟ್ಟಿದ್ದಾರೆ.

Recommended Video
ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಸ್ಪೀಕರ್ ಕಾಗೇರಿ ಅವರೂ ಸ್ಪಷ್ಟನೆ ಕೊಟ್ಟಿರು. ಕಾಂಗ್ರೆಸ್ ಸದಸ್ಯ ಪ್ರಿಯಾಂಕ್ ಖರ್ಗೆ ಅವರ ಕೊರೊನಾ ಪರೀಕ್ಷಾ ವರದಿಯ ನೆಗೆಟಿವ್ ರಿಪೋರ್ಟ್ ನನ್ನ ಬಳಿ ಇದೆ. ಆತಂಕಬೇಡ ಎಂದು ಎಂದು ಮಾಧುಸ್ವಾಮಿ ಅವರಿಗೆ ಕಾಗೇರಿ ಸ್ಪಷ್ಟನೆ ಕೊಟ್ಟರು.
-
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ಬೇಸಿಗೆಯ ಸುಡು ಬಿಸಿಲಿನಿಂದ ಪಾರಾಗಲು ಭೇಟಿ ನೀಡಬಹುದಾದ ಭಾರತದ 10 ಪ್ರೇಕ್ಷಣೀಯ ಸ್ಥಳಗಳು












Click it and Unblock the Notifications