ವಿಧಾನಸಭೆಯಲ್ಲಿ ಸಂವಿಧಾನದ ಮೇಲೆ ಚರ್ಚೆ ನಡೆಯುತ್ತಾ?
ಬೆಂಗಳೂರು, ಮಾ. 03: ಇಂದು ಮತ್ತು ನಾಳೆ ಎರಡು ದಿನಗಳ ಕಾಲ ಸಂವಿಧಾನದ ಮೇಲೆ ವಿಧಾನಸಭೆಯಲ್ಲಿ ವಿಶೇಷ ಚರ್ಚೆಗೆ ಅವಕಾಶ ಕಲ್ಪಿಸಲಾಗಿದ್ದರೂ, ಚರ್ಚೆ ನಡೆಯುವುದು ಅನುಮಾನ. ಭಾರತ ಸಂವಿಧಾನಕ್ಕೆ 70 ವರ್ಷಗಳಾದ ಹಿನ್ನೆಲೆಯಲ್ಲಿ ವಿಶೇಷ ಚರ್ಚೆಗೆ ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಅವಕಾಶ ಕಲ್ಪಿಸಿದ್ದಾರೆ. ಆದರೆ ವಿಧಾನಸಭೆಯಲ್ಲಿ ಸ್ವಾತಂತ್ರ್ಯ ಹೋರಾಟಗಾರ ದೊರೆಸ್ವಾಮಿ ಅವರ ವಿಚಾರ ಇಟ್ಟುಕೊಂಡು ವಿಪಕ್ಷಗಳು ಧರಣಿ ಮಾಡುತ್ತಿವೆ. ಸ್ವಾತಂತ್ರ್ಯ ಹೋರಾಟಗಾರ ಎಚ್ ಎಸ್ ದೊರೆಸ್ವಾಮಿ ಅವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ಬಿಜೆಪಿಯ ಸದಸ್ಯ, ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ತಮ್ಮ ಹೇಳಿಕೆ ಹಿಂದಕ್ಕೆ ಪಡೆದು ಕ್ಷಮೆ ಕೇಳಬೇಕು ಎಂದು ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳು ಪಟ್ಟು ಹಿಡಿದು ಸದನದ ಬಾವಗಿಳಿದು ಧರಣಿ ನಡೆಸುತ್ತಿವೆ.
ಇದೇ ವಿಚಾರಕ್ಕೆ ಸಂಬಂಧಿಸಿದಂತೆ ನಿನ್ನೆಯೂ ಕೂಡ ಸದನ ಕಲಾಪ ಸರಿಯಾಗಿ ನಡೆಯಲಿಲ್ಲ. ವಿರೋಧ ಪಕ್ಷಗಳ ಸದಸ್ಯರ ಧರಣಿ ಮಧ್ಯದಲ್ಲಿಯೇ ರಾಜ್ಯಪಾಲರ ಭಾಷಣದ ಮೇಲೆ ನಡೆದ ಚರ್ಚೆಗೆ ಮುಖ್ಯಮಂತ್ರಿ ಉತ್ತರ ಕೊಟ್ಟರು. ಜೊತೆಗೆ 8 ವಿಧೇಯಕಗಳಿಗೆ ಸರ್ಕಾರ ಅನುಮೋದನೆ ಪಡೆದುಕೊಂಡಿತು.
ಇವತ್ತು 11 ಗಂಟೆಗೆ ವಿಧಾನ ಸಭಾ ಕಲಾಪ ಆರಂಭವಾಗುತ್ತದೆ. ಕಲಾಪ ಆರಂಭವಾಗುತ್ತಿದ್ದಂತೆಯೆ ಸಂವಿಧಾನದ ಪ್ರಸ್ತಾವನೆಯನ್ನು ಸ್ಪೀಕರ್ ಕಾಗೇರಿ ಅವರು ಓದಲಿದ್ದಾರೆ. ಬಳಿಕ ಪ್ರಸ್ತಾವಿಕ ಮಾತುಗಳನ್ನು ಆಡಲಿದ್ದಾರೆ. ಆದರೆ ವಿಧಾನಸಭೆ ಕಲಾಪ ಆರಂಭವಾಗುತ್ತಿದ್ದಂತೆಯೆ ಸದನದ ಬಾವಿಗಳಿದು ಧರಣಿಯನ್ನು ಮುಂದುವರೆಸಲು ವಿರೋಧ ಪಕ್ಷಗಳು ತೀರ್ಮಾನಿಸಿವೆ. ಧರಣಿಯಲ್ಲಿ ಭಾಗವಹಿಸಲು ಅನುಕೂಲವಾಗುವಂತೆ ಸದನಲ್ಲಿ ಹಾಜರಿಬೇಕು ಎಂದು ಈಗಾಗಲೇ ಕಾಂಗ್ರೆಸ್ ತನ್ನ ಸದಸ್ಯರಿಗೆ ವಿಪ್ ಜಾರಿ ಮಾಡಿದೆ. ಸಂವಿಧಾನದ ಮೇಲೆ ಚರ್ಚೆಗೆ ಅವಕಾಶ ಕಲ್ಪಿಸಿರುವುದರಿಂದ ಧರಣಿ ಕೈಬಿಟ್ಟು ಚರ್ಚೆಯಲ್ಲಿ ವಿರೋಧ ಪಕ್ಷಗಳು ಭಾಗವಹಿಸುತ್ತವೆಯಾ ಎಂಬುದು ಕುತೂಹಲ ಮೂಡಿಸಿದೆ.

ನಿನ್ನೆ ಸುಗಮ ಕಲಾಪ ನಡೆಸಲು ಅನುಕೂಲವಾಗುವಂತೆ ಕಾಂಗ್ರೆಸ್ ನಾಯಕರೊಂದಿಗೆ ಎರಡು ಬಾರಿ ಸ್ಪೀಕರ್ ಕಾಗೇರಿ ಅವರು ಸಂಧಾನ ಸಭೆ ನಡಿಸಿದ್ದರು. ಆದರೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಶಾಸಕ ಯತ್ನಾಳ್ ಕ್ಷಮೆ ಕೇಳುವವರೆಗೆ ಧರಣಿ ಕೈಬಿಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
-
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ












Click it and Unblock the Notifications