ರಾಜ್ಯಪಾಲರನ್ನು ಜಂಟಿ ಅಧಿವೇಶನಕ್ಕೆ ಆಹ್ವಾನಿಸಿದ ಸಭಾಧ್ಯಕ್ಷ, ಸಭಾಪತಿ
ಬೆಂಗಳೂರು, ಫೆಬ್ರವರಿ 14: ಸೋಮವಾರ ಪ್ರಾರಂಭವಾಗಲಿರುವ ಜಂಟಿ ಅಧಿವೇಶನಕ್ಕೆ ರಾಜ್ಯಪಾಲ ವಜುಭಾಯಿ ವಾಲಾ ಅವರನ್ನು ವಿಧಾನಸಭಾ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಮತ್ತು ಪರಿಷತ್ ಸಭಾಪತಿ ಪ್ರತಾಪ್ ಚಂದ್ರ ಶೆಟ್ಟಿ ಅವರು ಆಹ್ವಾನ ನೀಡಿದ್ದಾರೆ.
ನಿನ್ನೆ ರಾಜಭವನಕ್ಕೆ ತೆರಳಿ ರಾಜ್ಯಪಾಲರನ್ನು ಭೇಟಿ ಆಗಿದ್ದ ಸ್ಪೀಕರ್ ಮತ್ತು ಸಭಾಪತಿ ರಾಜ್ಯಪಾಲರಿಗೆ ಅಧಿಕೃತ ಆಹ್ವಾನ ನೀಡಿದರು. ಜೊತೆಗೆ ಅಧಿವೇಶನದ ಕುರಿತು ಮಾಹಿತಿಯನ್ನು ನೀಡಿದರು.
ಮುಂದಿನ ಸೋಮವಾರ 15 ನೇ ವಿಧಾನಸಭೆ ಜಂಟಿ ಅಧಿವೇಶನ ಪ್ರಾರಂಭವಾಗಲಿದ್ದು, ಫೆಬ್ರವರಿ 17 ರಿಂದ 20 ರ ವರೆಗೆ ಹಾಗೂ ಮಾರ್ಚ್ 2 ರಿಂದ 31 ರ ವರೆಗೆ ಅಧಿವೇಶನ ನಡೆಯಲಿದೆ. ಒಟ್ಟು 25 ದಿನಗಳ ಕಾಲ ಅಧಿವೇಶನ ನಡೆಯಲಿದೆ.

ಸೋಮವಾರ ಜಂಟಿ ಅಧಿವೇಶನ ಪ್ರಾರಂಭ
ಸೋಮವಾರದಂದು ರಾಜ್ಯಪಾಲ ವಜುಭಾಯಿವಾಲಾ ಅವರು ಜಂಟಿ ಅಧಿವೇಶನ ಉದ್ದೇಶಿಸಿ ಮಾತನಾಡಲಿದ್ದಾರೆ. ನಂತರ ಅದೇ ದಿನ ಅಗಲಿದ ಗಣ್ಯರಿಗೆ ಸಂತಾಪ ಸೂಚಿಸಿ ಸದನ ಮುಂದೂಡಲಾಗುತ್ತದೆ. ಮಂಗಳವಾರದಿಂದ ಗುರುವಾರದವರೆಗೆ ರಾಜ್ಯಪಾಲರ ಭಾಷಣದ ಮೇಲೆ ಚರ್ಚೆ ನಡೆಯಲಿದೆ.

ಮಾರ್ಚ್ 5 ಕ್ಕೆ ಯಡಿಯೂರಪ್ಪ ಬಜೆಟ್ ಮಂಡನೆ
ಮತ್ತೆ ಮಾರ್ಚ್ 2 ಕ್ಕೆ ಅಧಿವೇಶನ ಆರಂಭವಾಗಲಿದ್ದು, ಮಾರ್ಚ್ 5 ಕ್ಕೆ ಸಿಎಂ ಯಡಿಯೂರಪ್ಪ ಅವರು ಬಜೆಟ್ ಮಂಡಿಸಲಿದ್ದಾರೆ. 31 ರ ವರೆಗೆ ಬಜೆಟ್ ಮೇಲೆ ಚರ್ಚೆ ನಡೆಯಲಿದೆ.

ಸ್ಪೀಕರ್ ಕ್ರಮಕ್ಕೆ ಸಿದ್ದರಾಮಯ್ಯ ವಿರೋಧ
ಸ್ಪೀಕರ್ ಕಾಗೇರಿ ಅವರು ಕೆಲವು ದಿನಗಳ ಹಿಂದೆ ನೀಡಿದ್ದ ಸೂಚನೆ ಬಗ್ಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಆಕ್ಷೇಪ ವ್ಯಕ್ತಪಡಿಸಿದ್ದರು. ರಾಜ್ಯಪಾಲರ ಭಾಷಣದ ವೇಳೆ ಯಾರೂ ಗಲಾಟೆ ಮಾಡಬಾರದು, ಪ್ರತಿಭಟನೆ ಮಾಡಬಾರದು, ಭಾಷಣದ ಮಧ್ಯೆ ಮಾತನಾಡಬಾರದು ಹೀಗೊಂದು ವೇಳೆ ಮಾಡಿದರೆ ಕಲಾಪದಿಂದ ಹೊರಗೆ ಹಾಕಲಾಗುವುದು ಎಂದು ಎಚ್ಚರಿಸಿದ್ದರು.

ಈ ಬಾರಿಯೂ ಮಾಧ್ಯಮಗಳಿಗೆ ನಿಷೇಧ
ಯಡಿಯೂರಪ್ಪ ಸಿಎಂ ಆದ ನಂತರದ ಮೊದಲ ಅಧಿವೇಶನಕ್ಕೆ ಮಾಧ್ಯಮಗಳಿಗೆ ಕಲಾಪದ ನೇರ ಪ್ರಸಾರ ಮಾಡಲು ಹಾಗೂ ಕಲಾಪದ ಛಾಯಾಚಿತ್ರ ತೆಗೆಯಲು ಹೇರಲಾಗಿದ್ದ ನಿರ್ಭಂದವನ್ನು ಈ ಬಾರಿಯ ಅಧಿವೇಶನದಲ್ಲೂ ಮುಂದುವರೆಸಲಾಗಿದೆ. ಈ ಬಗ್ಗೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications