ದೀಪಾವಳಿ ಹಬ್ಬದ ಸಮಯದಲ್ಲಿ ಕಾಲೇಜು ಉಪನ್ಯಾಸಕರಿಗೆ ಬಂಪರ್ ಕೊಡುಗೆ
ಬೆಂಗಳೂರು, ಅಕ್ಟೋಬರ್ 29: ದೀಪಾವಳಿ ಹಬ್ಬದ ಸಂದರ್ಭದಲ್ಲಿಯೇ ಕರ್ನಾಟಕ ಸರ್ಕಾರ ರಾಜ್ಯ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರಿಗೆ ಬಂಪರ್ ಕೊಡುಗೆಯನ್ನು ನೀಡಿದೆ. ಸರ್ಕಾರದ ಪ್ರಧಾನ ಕಾರ್ಯದರ್ಶಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಈ ಕುರಿತು ನಿರ್ದೇಶಕರು, ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಇವರಿಗೆ ಪತ್ರದ ಮೂಲಕ ಮಾಹಿತಿಯನ್ನು ನೀಡಿದ್ದಾರೆ. ಅಧ್ಯಕ್ಷರು, ಕರ್ನಾಟಕ ರಾಜ್ಯ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘ(ರಿ) ಬೆಂಗಳೂರು ಇವರ ಪತ್ರವನ್ನು ಉಲ್ಲೇಖಿಸಿದ್ದಾರೆ.
ಈ ಪತ್ರವು 2007-08 ಸಾಲಿನ ಅಧಿಸೂಚನೆ ಅನ್ವಯ ದಿನಾಂಕ 01-08- 2008ರ ನಂತರ ಕಾರ್ಯವರದಿ ಮಾಡಿಕೊಂಡಿರುವ ಉಪನ್ಯಾಸಕರುಗಳಿಗೆ ವಿಶೇಷ ಭತ್ಯೆಯನ್ನು ನೀಡುವ ಬಗ್ಗೆ ಎಂಬ ವಿಷಯವನ್ನು ಒಳಗೊಂಡಿದೆ. ಸರ್ಕಾರದ ಆದೇಶ ಸಂಖ್ಯೆ ಆಇ 18 ಎಸ್ಆರ್ಪಿ 2023 5/8/2023 ಉಲ್ಲೇಖ ಮಾಡಲಾಗಿದೆ. ಅಧ್ಯಕ್ಷರು, ಕರ್ನಾಟಕ ರಾಜ್ಯ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘ(ರಿ), ಬೆಂಗಳೂರು ಇವರ ಮನವಿ ದಿನಾಂಕ 10.06.2024 ಸಹ ಉಲ್ಲೇಖಿಸಲಾಗಿದೆ.

ವಿವರಗಳು: ಪದ್ಮನಿ ಎಸ್. ಎನ್. ಸರ್ಕಾರದ ಅಧೀನ ಕಾರ್ಯದರ್ಶಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ (ಪದವಿ ಪೂರ್ವ ಶಿಕ್ಷಣ) ಇವರ ಹೆಸರಿನಲ್ಲಿ ಹೊರಡಿಸಿರುವ ಆದೇಶದಲ್ಲಿ ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ ಅಧ್ಯಕ್ಷರು, ಕರ್ನಾಟಕ ರಾಜ್ಯ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘ(ರಿ) ಬೆಂಗಳೂರು ಇವರ ದಿನಾಂಕ 10.06.2024ರ ಪತ್ರವನ್ನು ಪರಿಶೀಲಿಸಲಾಯಿತು.
ಮಾನ್ಯ ಕರ್ನಾಟಕ ಆಡಳಿತ ನ್ಯಾಯಮಂಡಳಿಯು ಅರ್ಜಿ ಸಂಖ್ಯೆ:4412-4428 ರಲ್ಲಿ ದಿನಾಂಕ 05.05.2021ರ ತೀರ್ಪಿನಲ್ಲಿ ನೀಡಿದ ನಿರ್ದೇಶನ ಮತ್ತು ಮಾನ್ಯ ಕರ್ನಾಟಕ ಹೈಕೋರ್ಟ್ W. P. No:6902/2022 ರಲ್ಲಿ ದಿನಾಂಕ 20.06.2023ರಂದು ನೀಡಿದ ತೀರ್ಪಿನಲ್ಲಿನ ಅಭಿಪ್ರಾಯದ ಬೆಳಕಿನಲ್ಲಿ, 2007-08ರ ಶಿಕ್ಷಕರುಗಳ ನೇರ ನೇಮಕಾತಿ ಅಧಿಸೂಚನೆಯನ್ವಯ ನೇಮಕಾತಿ ಪ್ರಕ್ರಿಯೆ ಕೈಗೊಂಡು ಪ್ರಕಟಿಸಲಾದ ಅಂತಿಮ ಆಯ್ಕೆ ಪಟ್ಟಿಯಲ್ಲಿನ ಶಿಕ್ಷಕರುಗಳಿಗೆ ಸೀಮಿತಗೊಂಡಂತೆ ವಿಶೇಷ ಭತ್ಯೆಯನ್ನು ಮಂಜೂರು ಮಾಡಿ, ವಿಸ್ತತವಾದ ಅದೇಶಗಳನ್ನು ಹೊರಡಿಸಲಾಗಿರುತ್ತದೆ. ಸದರಿ ಆದೇಶವು ಸ್ವಯಂ ವೇದ್ಯವಾಗಿದ್ದು ಸ್ಪಷ್ಟವಾಗಿರುತ್ತದೆ.
ಮಾನ್ಯ ಕರ್ನಾಟಕ ಆಡಳಿತ ನ್ಯಾಯಮಂಡಳಿಯ ನಿರ್ದೇಶನದಂತೆ ರಾಜ್ಯ ಸರ್ಕಾರವು ಹೊರಡಿಸಿದ ಈ ಮೇಲೆ ತಿಳಿಸಿರುವ ದಿನಾಂಕ 05.12.2023ರ ಆದೇಶವನ್ನು ಪರಿಗಣಿಸಿದ ಮಾನ್ಯ ಆಡಳಿತ ನ್ಯಾಯಮಂಡಳಿಯು CTA 533-134/2021 ಪ್ರಕರಣದಲ್ಲಿ ದಿನಾಂಕ 08.12.2023ರಂದು ನೀಡಿದ ತೀರ್ಪಿನಲ್ಲಿ ರಾಜ್ಯ ಸರ್ಕಾರದ ವಿರುದ್ಧ ದಾಖಲಾಗಿದ್ದ ನ್ಯಾಯಾಂಗ ನಿಂದನಾ ಪ್ರಕರಣವನ್ನು ಕೈಬಿಟ್ಟಿರುತ್ತದೆ.
ಆದುದರಿಂದ, ಈ ಮೇಲೆ ತಿಳಿಸಿದ ದಿನಾಂಕ 05.12.2023ರ ಆದೇಶದ ಕಂಡಿಕೆ 1(i) ಮತ್ತು (ii) ರ ಅವಕಾಶಗಳ ಕಡೆಗೆ ಗಮನ ಸೆಳೆಯುತ್ತಾ ಅದರನ್ವಯ ಅರ್ಹ ಉಪನ್ಯಾಸಕರಿಗೆ ವಿಶೇಷ ಭತ್ಯೆಗಳನ್ನು ಮಂಜೂರು ಮಾಡಲು ನಿಯಮಾನುಸಾರ ಕ್ರಮ ಕೈಗೊಳ್ಳುವಂತೆ ತಿಳಿಸಲು ಈ ಮೂಲಕ ನಿರ್ದೇಶಿತಳಾಗಿದ್ದೇನೆ ಎಂದು ಹೇಳಿದ್ದಾರೆ.
ಸರ್ಕಾರ ದಿನಾಂಕ 01-08- 2008ರ ನಂತರ ಕಾರ್ಯವರದಿ ಮಾಡಿಕೊಂಡಿರುವ ಉಪನ್ಯಾಸಕರುಗಳಿಗೆ ವಿಶೇಷ ಭತ್ಯೆಯನ್ನು ನೀಡಲು ಒಪ್ಪಿಗೆ ನೀಡಿದೆ. ಈ ವಿಶೇಷ ಭತ್ಯೆ ಅಕ್ಟೋಬರ್ ಸಂಬಳದೊಂದಿಗೆ ಸೇರಿಕೊಂಡು ಬಂದರೆ ದೀಪಾವಳಿ ಹಬ್ಬದ ಸಂದರ್ಭದಲ್ಲಿ ಉಪನ್ಯಾಸಕರಿಗೆ ಸಿಹಿಸುದ್ದಿ ಸಿಗಲಿದೆ. ಆದರೆ ಯಾವಾಗ ಭತ್ಯೆ ಮಂಜೂರು ಆಗುತ್ತದೆ? ಎಂದು ಆದೇಶದಲ್ಲಿ ತಿಳಿಸಿಲ್ಲ.
-
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ












Click it and Unblock the Notifications