ಹಾಸನ : ಸಾಹಿತ್ಯ ಸಮ್ಮೇಳನಕ್ಕೆ ವಿಶೇಷ ಬಸ್ ವ್ಯವಸ್ಥೆ
ಹಾಸನ, ಜ.30 : ಶ್ರವಣಬೆಳಗೊಳದಲ್ಲಿ ನಡೆಯಲಿರುವ 81ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕ್ಷಣಗಣನೆ ಆರಂಭವಾಗಿದೆ. ಶನಿವಾರ ಸಂಜೆ ಸಮ್ಮೇಳಾನಾಧ್ಯಕ್ಷರ ಮೆರವಣಿಗೆ ನಡೆಯಲಿದೆ. ಕೆಎಸ್ಆರ್ಟಿಸಿ ಸಾಹಿತ್ಯ ಸಮ್ಮೇಳನಕ್ಕಾಗಿ ವಿಶೇಷ ಬಸ್ಸುಗಳ ವ್ಯವಸ್ಥೆಯನ್ನು ಮಾಡಿದೆ.
ಫೆ.1ರಿಂದ ಮೂರು ದಿನಗಳ ಕಾಲ ಹಾಸನ ಜಿಲ್ಲೆಯ ಶ್ರವಣಬೆಳಗೊಳದಲ್ಲಿ 81ನೇ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದೆ. ಸಾಹಿತ್ಯ ಸಮ್ಮೇಳನಕ್ಕೆ ಆಗಮಿಸುವ ಸಾಹಿತ್ಯಾಸಕ್ತರಿಗೆ ಜನವರಿ 31 ರಿಂದ ಚನ್ನರಾಯಪಟ್ಟಣದಿಂದ ಶ್ರವಣಬೆಳಗೊಳಕ್ಕೆ ಪ್ರತೀ 2 ನಿಮಿಷಕ್ಕೆ ಒಂದರಂತೆ ಬಸ್ಸುಗಳನ್ನು ಓಡಿಸಲಾಗುತ್ತಿದೆ.

* ಹಾಸನದ ಎಲ್ಲಾ ತಾಲೂಕು ಕೇಂದ್ರಗಳಿಂದ ಬೆಳಗ್ಗೆ 7.30ಕ್ಕೆ ಹಾಗೂ 9.30ಕ್ಕೆ ಸಮ್ಮೇಳನಕ್ಕೆ ಆಗಮಿಸಲು ಬಸ್ಸುಗಳ ವ್ಯವಸ್ಥೆ ಮಾಡಲಾಗಿದೆ.
* ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಿಂದ ಸಮ್ಮೇಳನಕ್ಕಾಗಿ ಒಂದೊಂದು ಬಸ್ ವ್ಯವಸ್ಥೆಯನ್ನು ಮಾಡಲಾಗಿದೆ. [ಅಧ್ಯಕ್ಷರ ಮೆರವಣಿಗೆಗೆ ಎತ್ತಿನ ಗಾಡಿ ಸಿದ್ಧ]
* ಶ್ರವಣಬೆಳಗೊಳದಿಂದ ಚನ್ನರಾಯಪಟ್ಟಣಕ್ಕೆ ಬೆಳಗ್ಗೆ 6 ಗಂಟೆಯಿಂದ ರಾತ್ರಿ 11ಗಂಟೆಯವರೆಗೆ ಹೋಗಿ ಬರಲು ಬಸ್ಸುಗಳಿವೆ.
* ಪ್ರತಿನಿಧಿಗಳ ವಸತಿ ಗೃಹಗಳಿಗೆ ಅವರನ್ನು ತಲುಪಿಸಲು 118 ಬಸ್ಸುಗಳನ್ನು ನಿಯೋಜಿಸಲಾಗಿದೆ. [ಸಾಹಿತ್ಯ ಸಮ್ಮೇಳನದಲ್ಲಿ ಒಂದೇ ನಿರ್ಣಯ!]
* ದೂರ ಸ್ಥಳಗಳಿಂದ ಆಗಮಿಸುವ ಸಾಹಿತ್ಯಾಸಕ್ತರಿಗೆ ಹತ್ತಿರದ ಪ್ರೇಕ್ಷಣೀಯ ಸ್ಥಳಗಳನ್ನು ನೋಡಲು ಅನುಕೂಲವಾಗುವಂತೆ ಒಂದು ದಿನದ ಪ್ರವಾಸಿ ಪ್ಯಾಕೇಜ್ ಮಾಡಲಾಗಿದೆ. ಕೆಎಸ್ಆರ್ಟಿಸಿ ಮತ್ತು ಪ್ರವಾಸೋಧ್ಯಮ ಇಲಾಖೆ ಸಹಯೋಗದಲ್ಲಿ ಪ್ಯಾಕೇಜ್ ಸಿದ್ಧಪಡಿಸಲಾಗಿದೆ.
ಮಾರ್ಗಗಳು: 1) ಶ್ರವಣಬೆಳಗೊಳ-ಹಳೇಬೀಡು-ಬೇಲೂರು-ಹಲ್ಮಿಡಿ
2) ಶ್ರವಣಬೆಳಗೊಳ-ಶ್ರೀರಂಗಪಟ್ಟಣ-ಮೈಸೂರು-ಕೆಆರ್ಎಸ್
* ಶ್ರವಣಬೆಳಗೊಳದಲ್ಲಿ ಆಟೋಗಳು ಮತ್ತು ಟ್ಯಾಕ್ಸಿಗಳಿಗೆ ನಿಗದಿತ ದರವನ್ನು ಮಾತ್ರ ಪಡೆಯುವಂತೆ ಚಾಲಕರಿಗೆ ಸೂಚಿಸಲಾಗಿದೆ. ಈ ಕುರಿತು ಸ್ವಯಂ ಸೇವಕರು ಮತ್ತು ಪೋಲೀಸರು ಸ್ಥಳದಲ್ಲಿಯೇ ಮಾಹಿತಿ ನೀಡಲಿದ್ದಾರೆ.
-
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
ಗಂಡ-ಹೆಂಡತಿ ಜಗಳ ಇಡೀ ದಿನ ತೋರಿಸಿದರೆ ಸಮಾಜಕ್ಕೆ ಏನು ಪ್ರಯೋಜನ: ಮಾಧ್ಯಮಗಳಿಗೆ ಸಿಎಂ ಪ್ರಶ್ನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
'ಕೋಟಿಗೊಬ್ಬ' ರೀರಿಲೀಸ್: ವಿಷ್ಣುದಾದಾ ಅಭಿಮಾನಿಗಳಿಂದ ಸಂಭ್ರಮ, ಪ್ರಸನ್ನ ಥಿಯೇಟರ್ನಲ್ಲಿ ನಾಳೆ 10,000 ಮಂದಿಗೆ ನಾನ್ವೆಜ್ ಊಟ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Smriti Mandhana: ಸ್ಮೃತಿ ಮಂಧಾನ-ಪಲಾಶ್ ಮುಚ್ಚಲ್ ಮತ್ತೆ ಒಂದಾಗ್ತಾರಾ? ಇಬ್ಬರ ಕುಟುಂಬಗಳ ಸೀಕ್ರೆಟ್ ಮೀಟಿಂಗ್ ವಿಡಿಯೋ ವೈರಲ್ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Government Schools: ಈ ವರ್ಷದಿಂದಲೇ ಸರ್ಕಾರಿ ಶಾಲೆಗಳಲ್ಲಿ ದ್ವಿಭಾಷಾ ನೀತಿ: ಎಲ್ಲ ಶಿಕ್ಷಕರಿಗೆ ಇಂಗ್ಲಿಷ್ ಟ್ರೈನಿಂಗ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಏಪ್ರಿಲ್ 11ರ ದರಪಟ್ಟಿ












Click it and Unblock the Notifications