Get Updates
Get notified of breaking news, exclusive insights, and must-see stories!

ಇದೇ ಮೊದಲ ಬಾರಿಗೆ ಕೇರಳ, ತಮಿಳುನಾಡು, ಕರ್ನಾಟಕ ಗಡಿಯಲ್ಲಿ ಆನೆ ಗಣತಿ

ಬೆಂಗಳೂರು, ಮೇ 19: ಇದೇ ಮೊದಲ ಬಾರಿಗೆ ಕರ್ನಾಟಕದ ಜೊತೆ ಗಡಿ ಹಂಚಿಕೊಂಡಿರುವ 4 ರಾಜ್ಯಗಳಲ್ಲಿ ಆನೆಗಳ ವಿಶೇಷ ಗಣತಿ ನಡೆಯಲಿದೆ. ಪ್ರತಿ 5 ವರ್ಷಗಳಿಗೊಮ್ಮೆ ಆನೆಗಳ ಗಣತಿ ನಡೆಯುತ್ತಿದೆ. ಆದರೆ ಮೊದಲ ಬಾರಿಗೆ ರಾಜ್ಯದ ಗಡಿ ಭಾಗದಲ್ಲಿ ಮಾತ್ರ ಆನೆಗಳ ಗಣತಿ ನಡೆಯುತ್ತಿದೆ.

ಮೇ 23 ರಿಂದ 25ರ ತನಕ ಕರ್ನಾಟಕ, ತಮಿಳುನಾಡು, ಕೇರಳ, ತೆಲಂಗಾಣ ಮತ್ತು ಆಂಧ್ರ ಪ್ರದೇಶ ರಾಜ್ಯಗಳ ಗಡಿಗಳಲ್ಲಿ ವಿಶೇಷವಾಗಿ ಆನೆಗಳ ಗಣತಿಯನ್ನು ನಡೆಸಲಾಗುತ್ತಿದೆ, ಗಣತಿಗಾಗಿ ಅರಣ್ಯ ಇಲಾಖೆ ಸಿದ್ಧತೆಗಳನ್ನು ಮಾಡಿಕೊಂಡಿದೆ.

Special Elephant Census In Border Areas Of Karnataka

ಆನೆ ಮತ್ತು ಮಾನವ ಸಂಘರ್ಷ ತಡೆಯಲು, ವಿವಿಧ ಯೋಜನೆ ರೂಪಿಸಲು ಅನುಕೂಲವಾಗುವಂತೆ ಆನೆಗಳ ಗಣತಿ ನಡೆಸಲಾಗುತ್ತಿದೆ. ಮಾರ್ಚ್ 2024ರಲ್ಲಿ ನಡೆದ ಅಂತರರಾಜ್ಯ ಅರಣ್ಯಾಧಿಕಾರಿಗಳ ಸಭೆಯಲ್ಲಿ ಗಡಿಭಾಗದಲ್ಲಿ ಮಾತ್ರ ಆನೆಗಳ ಗಣತಿ ನಡೆಸಲು ತೀರ್ಮಾನಿಸಲಾಗಿತ್ತು.

ಬಂಡೀಪುರದಲ್ಲಿ ಸಭೆ: ಮಾರ್ಚ್‌ನಲ್ಲಿ ಬಂಡೀಪುರದಲ್ಲಿ ನಡೆದ ಸಭೆಯಲ್ಲಿ ಆನೆಗಳ ಗಣತಿ ಕುರಿತು ಚರ್ಚೆಯಾಗಿತ್ತು. ಕರ್ನಾಟಕದಲ್ಲಿ ರೇಡಿಯೋ ಕಾಲರ್ ಅಳವಡಿಕೆ ಮಾಡಿದ್ದ ಆನೆ ವಯನಾಡಿನಲ್ಲಿ ವ್ಯಕ್ತಿಯೊಬ್ಬರನ್ನು ಹತ್ಯೆ ಮಾಡಿತ್ತು. ಹಾಸನದಲ್ಲಿ ಹಿಡಿದಿ ರೇಡಿಯೋ ಕಾಲರ್ ಹಾಕಿದ್ದ ಆನೆ ವಯನಾಡಿಗೆ ಹೋದ ಬಗ್ಗೆ ಸಭೆಯಲ್ಲಿ ಚರ್ಚೆ ನಡೆದಿತ್ತು.

ಆನೆಗಳ ವಲಸೆ ತಡೆಯುವುದು, ಆನೆ-ಮಾನವ ಸಂಘರ್ಷ ತಪ್ಪಿಸಲು ಕ್ರಮಗಳನ್ನು ಕೈಗೊಳ್ಳಲು ಅಂತರರಾಜ್ಯ ಗಡಿಯಲ್ಲಿ ಆನೆಗಳ ವಿಶೇಷ ಗಣತಿ ಮಾಡಲು ಒಮ್ಮತದ ಅಭಿಪ್ರಾಯ ವ್ಯಕ್ತವಾಗಿತ್ತು. ಈಗಾಗಲೇ ಆನೆಗಳ ಹಾವಳಿ ತಪ್ಪಿಸಲು 5 ಹಂತದ ಕ್ರಮಗಳನ್ನು ಕೈಗೊಳ್ಳಲು ಸಭೆಯಲ್ಲಿ ಚರ್ಚಿಸಲಾಗಿದೆ. ಇದರ ಮೊದಲ ಹಂತವಾಗಿ ಆನೆಗಳ ಸಂಖ್ಯೆನ್ನು ಲೆಕ್ಕಹಾಕಲಾಗುತ್ತಿದೆ.

2022-23ರಲ್ಲಿ ನಡೆದ ಆನೆಗಳ ಗಣತಿಯಲ್ಲಿ ದಕ್ಷಿಣದ ರಾಜ್ಯದಲ್ಲಿ ಕರ್ನಾಟಕವೇ ಮೊದಲ ಸ್ಥಾನದಲ್ಲಿತ್ತು. ರಾಜ್ಯದಲ್ಲಿ 6395 ಆನೆಗಳಿದ್ದವು. 2017ರ ಬಳಿಕ ರಾಜ್ಯದಲ್ಲಿ ಆನೆಗಳ ಸಂಖ್ಯೆ 346 ಏರಿಕೆಯಾಗಿದೆ ಎಂದು 2023ರ ಆಗಸ್ಟ್‌ನಲ್ಲಿ ಪ್ರಕಟವಾದ ಏಷ್ಯಾನ್ ಎಲಿಫೆಂಟ್ ಪಾಪ್ಯುಲೇಷನ್ ಮಧ್ಯಂತರ ಸಮೀಕ್ಷಾ ವರದಿ ಹೇಳಿತ್ತು.

ಕರ್ನಾಟಕ, ತಮಿಳುನಾಡು, ಕೇರಳ, ತೆಲಂಗಾಣ ಮತ್ತು ಆಂಧ್ರ ಪ್ರದೇಶ ರಾಜ್ಯಗಳ ಗಡಿಗಳಲ್ಲಿ ಮಾತ್ರ ಈ ವಿಶೇಷ ಆನೆಗಳ ಗಣತಿ ನಡೆಯಲಿದೆ. ಮೇ 23ರಂದು ಆನೆಗಳ ಸಂಖ್ಯೆಯನ್ನು ಲೆಕ್ಕಹಾಕಲಾಗುತ್ತದೆ. ಟ್ರಾನ್ಸಿಟ್ ಮಾದರಿಯಲ್ಲಿ ಮೇ 24ರಂದು ಗಣತಿ ನಡೆಯಲಿದೆ. ಮೇ 25ರಂದು ವಾಟರ್ ಹೋಲ್ ಕೌಂಟ್‌ ಮೂಲಕ ಗಣತಿ ನಡೆಯಲಿದೆ.

ರೆಡಿಯೋ ಕಾಲರ್ ಹಾಕಿರುವ ಆನೆಗಳನ್ನು ಸುಲಭವಾಗಿ ಗುರುತಿಸಲಾಗುತ್ತದೆ. ಕಾಡಾನೆಗಳನ್ನು ಮಾತ್ರ ಗಣತಿ ಮಾಡಲಾಗುತ್ತದೆ. ಪ್ರತಿ ಐದು ವರ್ಷಕ್ಕೊಮ್ಮೆ ದೇಶಾದ್ಯಂತ ಆನೆಗಳ ಗಣತಿ ನಡೆಯುತ್ತದೆ. ಈಗ ವಿಶೇಷವಾಗಿ ಗಡಿ ಭಾಗದಲ್ಲಿ ಮಾತ್ರ ಗಣತಿ ಮಾಡಲಾಗುತ್ತಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಕರ್ನಾಟಕ ರಾಜ್ಯದಲ್ಲಿ ಕೋಲಾರ, ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನ, ಕಾವೇರಿ ವನ್ಯಜೀವಿ ತಾಣ, ಮಲೆ ಮಹದೇಶ್ವರ ಬೆಟ್ಟ, ಬಂಡೀಪುರ ರಾಷ್ಟ್ರೀಯ ಉದ್ಯಾನ, ನಾಗರಹೊಳೆ ರಾಷ್ಟ್ರೀಯ ಉದ್ಯಾನ ಮತ್ತು ಕೊಡಗು-ಕೇರಳ ರಾಜ್ಯ ಗಡಿಯಲ್ಲಿ ಗಣತಿ ನಡೆಯಲಿದೆ.

ಕರ್ನಾಟಕದಲ್ಲಿ ಕಾಡಾನೆಗಳನ್ನು ಹಿಡಿದು ರೆಡಿಯೋ ಕಾಲರ್ ಆಳವಡಿಕೆ ಮಾಡುವ ಕಾರ್ಯಾಚರಣೆ ಆಗಾಗ ನಡೆಯುತ್ತದೆ. ಕೊಡಗು ಜಿಲ್ಲೆ ವಿರಾಜಪೇಟೆ ವಿಭಾಗದ ತಿತಿಮತಿ ವಲಯದ ವ್ಯಾಪ್ತಿಗೆ ಒಳಪಡುವ ಬಾಡಗ ಬಾಣಂಗಾಲ ಗ್ರಾಮದ ಎಲಿಕಲ್ ಎಸ್ಟೇಟ್‍ಗೆ (ಬಿಬಿಟಿಸಿ) ಒಳಪಡುವ ಬಾಡಗ ಬಾಣಂಗಾಲ ಕಾಫಿ ಎಸ್ಟೇಟ್ ಹಾಗೂ ಸುತ್ತಮುತ್ತಲಿನ ತೋಟಗಳಲ್ಲಿ ಇರುವ 3 ಕಾಡಾನೆಗಳನ್ನು ಸೆರೆ ಹಿಡಿದು ರೇಡಿಯೋ ಕಾಲರ್ ಅಳವಡಿಸುವ ಕಾರ್ಯಾಚರಣೆ ಇತ್ತೀಚೆಗೆ ನಡೆದಿತ್ತು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+