SWR: ಹಬ್ಬದ ಪ್ರಯುಕ್ತ ಹುಬ್ಬಳ್ಳಿಯಿಂದ 14 ವಿಶೇಷ ರೈಲುಗಳು ಕಾರ್ಯಾಚರಣೆ: ಮಾರ್ಗಗಳು, ವೇಳಾಪಟ್ಟಿ
ಬೆಂಗಳೂರು, ಸೆಪ್ಟಂಬರ್ 24: ದಸರಾ ಹಬ್ಬ ಶುರುವಾಗಿದೆ. ಇದರೊಂದಿಗೆ ಶಬರಿಮಲೆ ಯಾತ್ರೆ ಹಿನ್ನೆಲೆಯಲ್ಲಿ ನೈಋತ್ಯ ರೈಲ್ವೆಯು ಉತ್ತರ ಕರ್ನಾಟಕದ ಎಸ್ಎಸ್ಎಸ್ ಹುಬ್ಬಳ್ಳಿಯಿಂದ ವಿಶೇಷ ಎಕ್ಸ್ಪ್ರೆಸ್ ರೈಲುಗಳನ್ನು ಕಾರ್ಯಾಚರಣೆ ಮಾಡಲಿದೆ. 14 ವಿಶೇಷ ರೈಲುಗಳನ್ನು ಓಡಿಸಲು ನಿರ್ಧರಿಸಿದೆ. ಯಾವೆಲ್ಲ ಮಾರ್ಗಗಳಲ್ಲಿ ಎಷ್ಟು ರೈಲುಗಳು ಸಂಚಾರ ಮಾಡಲಿವೆ, ವೇಳಾಪಟ್ಟಿ ವಿವರ ಇಲ್ಲಿದೆ.
ಎಸ್ಎಸ್ಎಸ್ ಹುಬ್ಬಳ್ಳಿ-ಕೊಲ್ಲಂ ಎಕ್ಸ್ಪ್ರೆಸ್ ರೈಲು (07313) ಪ್ರತಿ ಭಾನುವಾರ ಮಧ್ಯಾಹ್ನ 3:15ಕ್ಕೆ ಹುಬ್ಬಳ್ಳಿಯಿಂದ ಹೊರಟು, ಮುಂದಿನ ದಿನ ಮಧ್ಯಾಹ್ನ 12:55ಕ್ಕೆ ಕೊಲ್ಲಂ ತಲುಪುತ್ತದೆ. ಈ ರೈಲು ಸೆಪ್ಟಂಬರ್ 28 ರಿಂದ ಡಿಸೆಂಬರ್ 28 ರವರೆಗೆ ಸಂಚರಿಸಲಿದೆ. ಮುಖ್ಯವಾಗಿ ಇದು ದೀಪಾವಳಿ ಪ್ರಯುಕ್ತ ಊರುಗಳಿಗೆ ತೆರಳುವವರಿಗೂ ಅನುಕೂಲವಾಗಲಿದೆ.

ಕೊಲ್ಲಂ-ಎಸ್ಎಸ್ಎಸ್ ಹುಬ್ಬಳ್ಳಿ ಎಕ್ಸ್ಪ್ರೆಸ್ ರೈಲು (07314) ಪ್ರತಿ ಸೋಮವಾರ ಸಂಜೆ 5:00ಕ್ಕೆ ಕೊಲ್ಲಂನಿಂದ ಹೊರಟು, ಮುಂದಿನ ದಿನ ಸಂಜೆ 6:30ಕ್ಕೆ ಹುಬ್ಬಳ್ಳಿ ತಲುಪುತ್ತದೆ. ಈ ರೈಲು ಸೆಪ್ಟಂಬರ್ 29 ರಿಂದ ಡಿಸೆಂಬರ್ 29ರವರೆಗೆ ಸಂಚಾರ ಮಾಡಲಿದೆ.
ನಿಲುಗಡೆ ನಿಲ್ದಾಣದ ವಿವರಗಳು
ಎಸ್ಎಸ್ಎಸ್ ಹುಬ್ಬಳ್ಳಿ-ಕೋಲಂ-ಎಸ್ಎಸ್ಎಸ್ ಹುಬ್ಬಳ್ಳಿ ಎಕ್ಸ್ಪ್ರೆಸ್ ರೈಲು ಎರಡು ಬದಿ ಸಂಚಾರದಲ್ಲಿ ಹಾವೇರಿ, ದಾವಣಗೆರೆ, ಬಿರೂರು, ಅರ್ಸೀಕೆರೆ, ತುಮಕೂರು, ಎಸ್ಎಂವಿಟಿ ಬೆಂಗಳೂರು, ಕೃಷ್ಣರಾಜಪುರಂ, ಬನಗಾರಪೇಟೆ, ಸೇಲಂ, ಈರೋಡ್, ತಿರುಪುರ್, ಪೋದನೂರು, ಪಾಳಕ್ಕಾಡ್, ತ್ರಿಶೂರ್, ಅಲುವಾ, ಎರ್ನಾಕುಳಂ ಟೌನ್, ಕೊಟ್ಟಾಯಂ, ಚಂಗನಾಶೇರಿ, ತಿರುವಲ್ಲಾ, ಚೆಂಗನ್ನೂರು, ಮಾವೇಲಿಕರಾ, ಕಯಂಕುಳಂ, ಕರುಣಾಗಪಲ್ಲಿ ಹಾಗೂ ಸಸ್ತಂಕೋಟ ನಿಲ್ದಾಣಗಳಲ್ಲಿ ನಿಲುಗಡೆ ನೀಡಲಿದೆ.
ಈ ವಿಶೇಷ ರೈಲುಗಳು ವಿವಿಧ ಎಸಿ, ನಾನ್ ಎಸಿ ಸ್ಲಿಪರ್, ಜನರಲ್ ಬೋಗಿ ಒಳಗೊಂಡಂತೆ ಒಟ್ಟು 22 ಬೋಗಿಗಳನ್ನು ಹೊಂದಿರಲಿದೆ. ಪ್ರಯಾಣಿಕರು ರೈಲು ವೇಳಾಪಟ್ಟಿ ಮತ್ತು ಹೆಚ್ಚಿನ ಮಾಹಿತಿಗಾಗಿ www.enquiry.indianrail.gov.in ಮತ್ತು http://www.enquiry.indianrail.gov.in ವೆಬ್ಸೈಟ್ಗೆ ಭೇಟಿ ನೀಡಬೇಕು. ಎನ್ಟಿಇಎಸ್ ಆಪ್ ಅಥವಾ 139 ಕರೆಮಾಡಿ ಮಾಹಿತಿ ತಿಳಿಯುವಂತೆ ನೈಋತ್ಯ ರೈಲ್ವೆ ತಿಳಿಸಿದೆ.
-
ಹಿರಿಯ ನಾಗರಿಕರಿಗೆ ರೈಲ್ವೇ ನಿಯಮಗಳು 2026: ರಿಯಾಯಿತಿ ಇಲ್ಲದಿದ್ದರೂ ಸೌಲಭ್ಯಗಳು ಮುಂದುವರಿಕೆ -
"5 ತಿಂಗಳಾದ್ರೂ ಸಿಗದ ದಸರಾ ಲೆಕ್ಕ: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ'' -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL












Click it and Unblock the Notifications