ಕ್ಯಾನ್ಸರ್ನಿಂದ ಬಳಲುತ್ತಿರುವ ಸರ್ಕಾರಿ ನೌಕರರಿಗೆ ವಿಶೇಷ ರಜೆ
ಬೆಂಗಳೂರು, ಜುಲೈ 13; ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿರುವ ಸರ್ಕಾರಿ ನೌಕರರಿಗೆ ವಿಶೇಷ ಸಾಂದರ್ಭಿಕ ರಜೆಯನ್ನು ನೀಡುವ ಕುರಿತು ಆದೇಶ ಹೊರಡಿಸಲಾಗಿದೆ. ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಮನವಿಯನ್ನು ಪರಿಶೀಲಿಸಿ ಈ ಕುರಿತು ಆದೇಶಿಸಲಾಗಿದೆ.
ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಮತ್ತು ಅವರ ಹೆಸರಿನಲ್ಲಿ ಸರ್ಕಾರದ ಉಪಕಾರ್ಯದರ್ಶಿ ಆರ್ಥಿಕ ಇಲಾಖೆ (ಸೇವೆಗಳು-1) ಬಿ. ಎಸ್. ಸುವರ್ಣ ಈ ಕುರಿತು ಆದೇಶ ಹೊರಡಿಸಿದ್ದಾರೆ. ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಪತ್ರ ದಿನಾಂಕ 26/8/2020 ಉಲ್ಲೇಖ ಮಾಡಿದ್ದಾರೆ.

ಈ ಆದೇಶವು ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿರುವ ಸರ್ಕಾರಿ ನೌಕರರು ವೈದ್ಯರ ಸಲಹೆಯ ಮೇರೆಗೆ ಒಳಪಡುವ ಕಿಮೋ/ ರೇಡಿಯೋಥೆರಪಿ ಚಿಕಿತ್ಸೆಯ ಪ್ರಕರಣಗಳಲ್ಲಿ ವಿಶೇಷ ಸಾಂದರ್ಭಿಕ ರಜೆಯ ಮಂಜೂರಾತಿ ಬಗ್ಗೆ ಎಂಬ ವಿಷಯವನ್ನು ಒಳಗೊಂಡಿದೆ.
ಪ್ರಸ್ತಾವನೆ ಏನಿತ್ತು?; ರಾಜ್ಯದಲ್ಲಿ ಕರ್ತವ್ಯವನ್ನು ನಿರ್ವಹಿಸುತ್ತಿರುವ ಕೆಲವು ಸರ್ಕಾರಿ ನೌಕರರು ಕ್ಯಾನ್ಸರ್ ಕಾಯಿಲೆಗೆ ಸಂಬಂಧಿಸಿದಂತೆ ವೈದ್ಯರ ಸಲಹೆಯ ಮೇರೆಗೆ ಕಿಮೋ/ ರೇಡಿಯೋ ಥೆರಪಿಯಂತಹ ಚಿಕಿತ್ಸೆಗೆ ಒಳಪಡಬೇಕಿದ್ದು, ಆ ನಿಮಿತ್ತವಾಗಿ ಕಡ್ಡಾಯವಾಗಿ ವಿಶ್ರಾಂತಿಯನ್ನು ಪಡೆಯಬೇಕಿರುವ ಅವಶ್ಯಕತೆ ಇರುತ್ತದೆ.
ಈ ಚಿಕಿತ್ಸೆ ಪಡೆಯುವಾಗ ವಿಶ್ರಾಂತಿಯ ಅಗತ್ಯತೆಯಿಂದಾಗಿ ಕಛೇರಿಗೆ ಹಾಜರಾಗಲು ಕಷ್ಟ ಸಾಧ್ಯವಾಗುತ್ತದೆ. ಆದ್ದರಿಂದ ಈ ಅವಧಿಯನ್ನು ಸಕ್ಷಮ ವೈದ್ಯಕೀಯ ಪ್ರಾಧಿಕಾರವು ನೀಡುವ ಪ್ರಮಾಣಪತ್ರವನ್ನು ಹಾಜರು ಪಡಿಸುವ ಷರತ್ತಿಗೊಳಪಟ್ಟ ವಿಶೇಷ ಸಾಂದರ್ಭಿಕ ರಜೆಯನ್ನಾಗಿ ಪರಿಗಣಿಸುವಂತೆ ಮನವಿ ಮಾಡಲಾಗಿತ್ತು.
ಅಧ್ಯಕ್ಷರು, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ಕಬ್ಬನ್ ಪಾರ್ಕ್, ಬೆಂಗಳೂರು ಇವರು ಈ ಕುರಿತು ಕೋರಿದ್ದರು. ಈ ವಿಷಯವನ್ನು ಸರ್ಕಾರವು ಪರಿಶೀಲಿಸಿದ್ದು, ಅದರಂತೆ ಈ ಆದೇಶವನ್ನು ಹೊರಡಿಸಲಾಗಿದೆ.
ಸರ್ಕಾರದ ಆದೇಶ; ಸರ್ಕಾರದ ಆದೇಶ ದಿನಾಂಕ 22/06/2021 ಅಡಿ ಕರ್ನಾಟಕ ನಾಗರೀಕ ಸೇವಾ ನಿಯಮಾವಳಿಗಳ ಅನಬಂಧ-ಬಿ ರಲ್ಲಿನ ನಿಯಮ 11(ಐ)ರ ನಂತರದಲ್ಲಿ, ಈ ಆದೇಶವನ್ನು ಹೊರಡಿಸಿದ ದಿನಾಂಕದಿಂದ ಜಾರಿಗೊಳ್ಳುವಂತೆ ನಿಯಮ 11(ಜೆ) ಎಂಬ ಹೊಸ ನಿಯಮವನ್ನು ಸೇರ್ಪಡೆಗೊಳಿಸಿದೆ.
ಕೆಎಸ್ಆರ್ಟಿಸಿ ಸುತ್ತೋಲೆ; ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್ಆರ್ಟಿಸಿ) 3/7/2023ರಂದು ಸುತ್ತೋಲೆಯೊಂದನ್ನು ಹೊರಡಿಸಿದೆ. ವ್ಯವಸ್ಥಾಪಕ ನಿರ್ದೇಶಕರು ವಿ. ಅನ್ಬುಕುಮಾರ್ ಹೆಸರಿನಲ್ಲಿ ಈ ಸುತ್ತೋಲೆ ಪ್ರಕಟವಾಗಿದೆ. ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿರುವ ನಿಗಮದ ಅಧಿಕಾರಿ/ ನೌಕರರು ವೈದ್ಯರ ಸಲಹೆಯ ಮೇರೆಗೆ ಒಳಪಡುವ ಕಿಮೋ/ ರೇಡಿಯೋಥೆರಪಿ ಚಿಕಿತ್ಸೆಯ ಪ್ರಕರಣಗಳಲ್ಲಿ ವಿಶೇಷ ಸಾಂದರ್ಭಿಕ ರಜೆ ನೀಡುವ ಕುರಿತು ಎಂಬ ವಿಷಯವನ್ನು ಸುತ್ತೋಲೆ ಒಳಗೊಂಡಿದೆ.
ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದು, ಚಿಕಿತ್ಸಾ ತಜ್ಞರು ರೂಪಿಸುವ ಯೋಜನೆಯನುಸಾರ ಪಡೆಯುವ ಕಿಮೋ/ ರೇಡಿಯೋ ಥೆರಪಿ ಚಿಕಿತ್ಸೆ ಮತ್ತು ಸಂಬಂಧದಲ್ಲಿ ಅಗತ್ಯವಾಗುವ ವಿಶ್ರಾಂತಿಯ ಅವಧಿಯ ದಿನಗಳಿಗೆ, ಸಕ್ಷಮ ವೈದ್ಯಕೀಯ ಪ್ರಾಧಿಕಾರದಿಂದ ಪ್ರಮಾಣ ಪತ್ರವನ್ನು ಪಡೆದು ಒದಗಿಸುವ ಷರತ್ತಿಗೊಳಪಟ್ಟು, ಈ ಚಿಕಿತ್ಸೆಯ ಅವಧಿಯಲ್ಲಿ ಮಾತ್ರ ಗರಿಷ್ಠ 6 ತಿಂಗಳುಗಳ ಮಿತಿಗೊಳಪಟ್ಟು ಪ್ರಸ್ತುತ ಕ್ಯಾನ್ಸರ್ನಿಂದ ಬಳಲುತ್ತಿರುವ ಪ್ರಕರಣಗಳನ್ನು ಒಳಗೊಂಡಂತೆ ವಿಶೇಷ ಸಾಂದರ್ಭಿಕ ರಜೆಯನ್ನು ಸರ್ಕಾರದಲ್ಲಿರುವಂತೆ ನಿಗಮದ ಅಧಿಕಾರಿ/ ನೌಕರರಿಗೆ ನೀಡುವ ಪ್ರಸ್ತಾವನೆಗೆ ನಿಗಮದ ನಿರ್ದೇಶಕರ ಮಂಡಳಿಯು ಠರಾವುದಿನಾಂಕ 27/6/2023 ರನ್ವಯ ಒಪ್ಪಿಗೆ ನೀಡಿರುತ್ತದೆ.
ಸಂಬಂಧಪಟ್ಟವರೂ ಮೇಲಿನ ಒಪ್ಪಿಗೆಯನ್ನು ಮನದಟ್ಟು ಮಾಡಿಕೊಂಡು ಅದರಂತೆ ಕ್ರಮ ಕೈಗೊಳ್ಳತಕ್ಕದ್ದು ಎಂದು ಸೂಚನೆ ನೀಡಲಾಗಿದೆ.
-
Summer Super Drink: ಪ್ರತಿದಿನ ಎರಡು ಗ್ಲಾಸ್ ಕಬ್ಬಿನ ರಸ: ಬೇಸಿಗೆಯ ಸೂಪರ್ ಡ್ರಿಂಕ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
ಶಾಲಾ ಮಕ್ಕಳ ಮೊಬೈಲ್ ಬಳಕೆ ನಿರ್ಬಂಧ: 'ಡಿಜಿಟಲ್ ಕರಡು ನೀತಿ' ಬಿಡುಗಡೆಗೊಳಿಸಿದ ರಾಜ್ಯ ಸರ್ಕಾರ -
Harish Rana: ಭಾರತದ ಮೊದಲ ದಯಾಮರಣದ ಹಕ್ಕುದಾರ ಹರೀಶ್ ರಾಣಾ ನಿಧನ, ಕುಟುಂಬಸ್ಥರಿಂದ ಅಂಗಾಂಗ ದಾನ -
Vastu Tips for Kitchen: ವಾಸ್ತು ಪ್ರಕಾರ ಅಡುಗೆ ಮನೆಯಲ್ಲಿ ಇವು ಇರಬಾರದು.. ಒಮ್ಮೆ ನೋಡಿ! -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ












Click it and Unblock the Notifications