ಎಲ್ಲಿ ಹುಡುಕಿದರೂ ಸಿಗದ ಅನುಪಮಾ, ಹುಡುಕಾಟಕ್ಕೆ ತಂಡ ರಚನೆ
ಬೆಂಗಳೂರು, ಜೂನ್ 08 : ಡಿವೈಎಸ್ಪಿ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಅನುಪಮಾ ಶೆಣೈ ಅವರನ್ನು ಹುಡುಕಲು ವಿಶೇಷ ಪೊಲೀಸ್ ತಂಡ ರಚನೆ ಮಾಡಲಾಗಿದೆ. ಅನುಪಮಾ ಅವರ ಮನವೊಲಿಸಲು ಗೃಹ ಇಲಾಖೆ ಮುಂದಾಗಿದ್ದು, ಅವರಿಗಾಗಿ ಹುಡುಕಾಟ ಆರಂಭವಾಗಿದೆ.
ಜೂನ್ 4ರ ಶನಿವಾರ ಡಿವೈಎಸ್ಪಿ ಅನುಪಮಾ ಶೆಣೈ ಅವರು ರಾಜೀನಾಮೆ ನೀಡಿದ್ದಾರೆ. ನಂತರ ಅವರು ಬಹಿರಂಗವಾಗಿ ಎಲ್ಲೂ ಕಾಣಿಸಿಕೊಂಡಿಲ್ಲ. ಯಾವ ಮಾಧ್ಯಮಗಳ ಜೊತೆಯೂ ಮಾತನಾಡಿಲ್ಲ. ಹಿರಿಯ ಅಧಿಕಾರಿಗಳ ಸಂಪರ್ಕಕ್ಕೂ ಸಿಕ್ಕಿಲ್ಲ. ಆದರೆ, ಫೇಸ್ಬುಕ್ನಲ್ಲಿ ಸಕ್ರಿಯರಾಗಿ ಪೋಸ್ಟ್ಗಳನ್ನು ಹಾಕುತ್ತಿದ್ದಾರೆ. ['ಕೊಲೆ ಬೆದರಿಕೆ ಹಾಕ್ತೀರಾ? ದೆವ್ವವಾಗಿ ಬಂದು ಕಾಡ್ತೀನಿ']

ರಾಜೀನಾಮೆ ಅಂಗೀಕಾರವಾಗಿಲ್ಲ : ಅನುಪಮಾ ಅವರ ರಾಜೀನಾಮೆಯನ್ನು ಅಂಗೀಕರಿಸ ಬೇಡಿ ಅವರ ಮನವೊಲಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಡಿಜಿಪಿ ಓಂ ಪ್ರಕಾಶ್ ಅವರಿಗೆ ಸೂಚಿಸಿದ್ದಾರೆ. ಡಿಜಿಪಿ ಓಂಪ್ರಕಾಶ್ ಅವರು ಬಳ್ಳಾರಿ ಎಸ್ಪಿ ಆರ್.ಚೇತನ್ ಅವರಿಗೆ ಈ ಕುರಿತು ನಿರ್ದೇಶನ ನೀಡಿದ್ದಾರೆ. [ಪರಮೇಶಿಪ್ರೇಮ ಪ್ರಸಂಗ... ಸಿಡಿ ಬೇಕೆ, ಆಡಿಯೋ ಬೇಕೆ?]
ಡಿಜಿಪಿ ಅವರ ನಿರ್ದೇಶನದಂತೆ ಆರ್.ಚೇತನ್ ಅವರು ಅನುಪಮಾ ಅವರನ್ನು ಹುಡುಕಲು ಪೊಲೀಸ್ ತಂಡಗಳನ್ನು ರಚನೆ ಮಾಡಿದ್ದಾರೆ. ಬಳ್ಳಾರಿ, ಬೆಂಗಳೂರು ಮತ್ತು ಅನುಪಮಾ ಅವರ ಹುಟ್ಟೂರು ಉಡುಪಿಯಲ್ಲಿ ಅವರಿಗಾಗಿ ಹುಡುಕಾಟ ನಡೆಸಲಾಗುತ್ತದೆ. [ಈಸಬೇಕು ಇದ್ದು ಜಯಿಸಬೇಕು ಅನುಪಮಾ ಶೆಣೈ ಮೇಡಂ]
ಅನುಪಮಾ ಅವರ ಮನವೊಲಿಸಲು ಮೊದಲು ಅವರು ಎಲ್ಲಿದ್ದಾರೆ? ಎಂದು ಪತ್ತೆ ಮಾಡಬೇಕು. 4 ದಿನಗಳಿಂದ ಯಾವ ಹಿರಿಯ ಅಧಿಕಾರಿಗಳ ಸಂಪರ್ಕಕ್ಕೂ ಅವರು ಸಿಕ್ಕಿಲ್ಲ. ಆದ್ದರಿಂದ, ಅವರ ಹುಡುಕಾಟಕ್ಕಾಗಿ ಪೊಲೀಸರ ತಂಡವನ್ನು ರಚನೆ ಮಾಡಲಾಗಿದೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications