ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಜಿಎಸ್‌ಟಿ ಬಗ್ಗೆ ಚರ್ಚಿಸಲು ಸೆ.14ರಂದು ವಿಶೇಷ ಅಧಿವೇಶನ

|
Google Oneindia Kannada News

ಬೆಂಗಳೂರು, ಸೆಪ್ಟೆಂಬರ್ 01 : ಮಹತ್ವದ ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ವಿಧೇಯಕದ ಬಗ್ಗೆ ಚರ್ಚೆ ನಡೆಸಲು ಕರ್ನಾಟಕ ವಿಧಾನಸಭೆ ವಿಶೇಷ ಅಧಿವೇಶನ ನಡೆಯಲಿದೆ. ಈಗಾಗಲೇ ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಮಹತ್ವದ ಜಿಎಸ್‌ಟಿ ವಿಧೇಯಕ ಅಂಗೀಕಾರವಾಗಿದೆ.

'ಸರಕು ಮತ್ತು ಸೇವಾ ತೆರಿಗೆ ವಿಧೇಯಕ ಮಂಡಿಸಲು ರಾಜ್ಯ ವಿಧಾನ ಮಂಡಲದ ಉಭಯ ಸದನಗಳ ಒಂದು ದಿನದ ವಿಶೇಷ ಅಧಿವೇಶನ ಸೆಪ್ಟೆಂಬರ್ 14 ರಂದು ನಡೆಯಲಿದೆ' ಎಂದು ಕಾನೂನು ಸಚಿವ ಟಿ.ಬಿ.ಜಯಚಂದ್ರ ಹೇಳಿದ್ದಾರೆ.[ಕರ್ನಾಟಕದ ಆದಾಯದ ಮೇಲೆ ಜಿಎಸ್ಟಿ ಪರಿಣಾಮವೇನು?]

tb jayachandra

ಬೆಂಗಳೂರಿನ ವಿಧಾನಸೌಧದಲ್ಲಿ ಸೆ.14ರ ಬುಧವಾರ ಬೆಳಗ್ಗೆ 11 ಗಂಟೆಗೆ ವಿಶೇಷ ಅಧಿವೇಶನ ಆರಂಭವಾಗಲಿದೆ. ಸರಕು ಮತ್ತು ಸೇವಾ ತೆರಿಗೆ ವಿಧೇಯಕವನ್ನು ಮಂಡಿಸಿ, ಚರ್ಚೆ ನಡೆಸಿ ಉಭಯ ಸದನಗಳಲ್ಲೂ ಅಂಗೀಕಾರ ಪಡೆಯಲಾಗುತ್ತದೆ.[ಜಿಎಸ್ಟಿ ಎಂದರೇನು? ಇದರಿಂದ ಯಾರಿಗೆ ಪ್ರಯೋಜನ?]

ರಾಷ್ಟ್ರದಾದ್ಯಂತ ಏಕರೂಪ ತೆರಿಗೆಯನ್ನು ಜಾರಿಗೆ ತರುವ, ಸರಕು ಮತ್ತು ಸೇವಾ ತೆರಿಗೆ ವಿಧೇಯಕ ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಅಂಗೀಕಾರವಾಗಿದೆ. ರಾಜ್ಯದಲ್ಲಿಯೂ ವಿಧೇಯಕಕ್ಕೆ ಒಪ್ಪಿಗೆ ಸಿಕ್ಕಿದರೆ ವ್ಯಾಟ್ ಅಥವಾ ಮೌಲ್ಯವರ್ಧಿತ ತೆರಿಗೆಯಲ್ಲಿ ಅರ್ಧದಷ್ಟು ಆದಾಯವನ್ನು ಕೇಂದ್ರ ಸರ್ಕಾರದೊಂದಿಗೆ ರಾಜ್ಯ ಹಂಚಿಕೊಳ್ಳಬೇಕು.[ಜಿಎಸ್ಟಿ ಪರಿಣಾಮ, ಯಾವುದು ಏರಿಕೆ? ಯಾವುದು ಇಳಿಕೆ?]

ತೆರಿಗೆ ಹಂಚಿಕೆಯಿಂದ ರಾಜ್ಯಕ್ಕೆ ಆಗುವ ನಷ್ಟವನ್ನು 5 ವರ್ಷಗಳವರೆಗೆ ಕೇಂದ್ರ ಸರ್ಕಾರ ಭರಿಸುತ್ತದೆ. ಬೇರೆ ರಾಜ್ಯದಿಂದ ವಸ್ತುಗಳು ರಾಜ್ಯ ಪ್ರವೇಶ ಮಾಡುವ ಮುನ್ನ ಸಲ್ಲಿಕೆಯಾಗುತ್ತಿದ್ದ ಶೇ. 2 ತೆರಿಗೆ ಜಿಎಸ್‌ಟಿ ನಿಯಮದ ಅನ್ವಯ ಕೇಂದ್ರದ ಪಾಲಾಗಲಿದೆ.

English summary
After cabinet meeting Law minister T.B.Jayachandra said, government decided to convene a special one-day session of the state legislature on September 14, 2016 to discuss about the Goods and Service Tax (GST) bill.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X