Bengaluru-Bidar Train: ಬೆಂಗಳೂರು-ಬೀದರ್ ನಡುವೆ ವಿಶೇಷ ರೈಲು: ಯಾವಾಗ? ಇಲ್ಲಿದೆ ವೇಳಾಪಟ್ಟಿ
ಬೆಂಗಳೂರು, ಆಗಸ್ಟ್ 01: ಸ್ವಾತಂತ್ರ್ಯ ದಿನಾಚರಣೆಯ (ಆಗಸ್ಟ್ 15) ರಜೆ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿವಾರಿಸಲು, ನೈಋತ್ಯ ರೈಲ್ವೆಯು ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ಮತ್ತು ಬೀದರ್ ನಡುವೆ ಪ್ರತಿ ದಿಕ್ಕಿನಲ್ಲಿ ಒಂದು ಟ್ರಿಪ್ ವಿಶೇಷ ಎಕ್ಸ್ಪ್ರೆಸ್ ರೈಲು ಸೇವೆಯನ್ನು ಆರಂಭಿಸಲಿದೆ. ಆಗಸ್ಟ್ 15ರಂದು ಶುಕ್ರವಾರ ಬಂದಿದ್ದು, ಅದರ ಆಸು ಪಾಸು ದಿನಗಳಲ್ಲಿ ಜನ ಸಂಚಾರ ಹೆಚ್ಚಿರುತ್ತದೆ. ಹೀಗಾಗಿ ಈ ವಿಶೇಷ ರೈಲು ಹೆಚ್ಚಿನ ಅನುಕೂಲ ಒದಗಿಸಲಿದೆ.
ಎಸ್ಎಂವಿಟಿ ಬೆಂಗಳೂರು - ಬೀದರ್ ವಿಶೇಷ ಎಕ್ಸ್ಪ್ರೆಸ್ ರೈಲು (ಸಂಖ್ಯೆ 06519) 2025 ಆಗಸ್ಟ್ 14 ರಂದು ಗುರುವಾರ ರಂದು ಎಎಂವಿಟಿ ಬೆಂಗಳೂರಿನಿಂದ ರಾತ್ರಿ 9:15ಕ್ಕೆ ಈ ರೈಲು ಹೊರಟು, ಮರುದಿನ ಬೆಳಗ್ಗೆ 11:30ಕ್ಕೆ ಬೀದರ್ ತಲುಪಲಿದೆ. ಮರಳಿ ಬೀದರ್ - ಎಸ್ಎಂವಿಟಿ ಬೆಂಗಳೂರು ವಿಶೇಷ ಎಕ್ಸ್ಪ್ರೆಸ್ ಪ್ರಯಾಣದಲ್ಲಿ ರೈಲು (06520) 2025 ಆಗಸ್ಟ್ 15 (ಶುಕ್ರವಾರ) ರಂದು ಬೀದರ್ನಿಂದ ಮಧ್ಯಾಹ್ನ 2:30ಕ್ಕೆ ಪ್ರಯಾಣ ಆರಂಭಿಸಿ ಮರುದಿನ ಬೆಳಗಿನ ಜಾವ 4:30ಕ್ಕೆ ಎಸ್ಎಂವಿಟಿ ಬೆಂಗಳೂರಿಗೆ ಬಂದು ಸೇರಲಿದೆ.

ಎಸ್ಎಂವಿಟಿ ಬೆಂಗಳೂರು - ಬೀದರ್ ವಿಶೇಷ ರೈಲು ಮಾರ್ಗ ಮಾರ್ಗ ಮಧ್ಯ 'ಯಲಹಂಕ, ಹಿಂದೂಪುರ, ಧರ್ಮಾವರಂ, ಅನಂತಪುರ, ಗುಂತಕಲ್, ಆದೋನಿ, ಮಂತ್ರಾಲಯಂ ರೋಡ್, ರಾಯಚೂರು, ಕೃಷ್ಣ, ಯಾದಗಿರಿ, ವಾಡಿ, ಶಹಬಾದ್, ಕಲಬುರಗಿ, ಹುಮನಾಬಾದ್ ನಿಲ್ದಾಣಗಳಲ್ಲಿ ನಿಲುಗಡೆ ನೀಡಲಿದೆ. ಎರಡು ಬದಿಯಲ್ಲಿ ಈ ಇದೇ ನಿಲ್ದಾಣಗಳಲ್ಲಿ ನಿಲುಗಡೆ ಆಗಲಿದೆ.
ಈ ವಿಶೇಷ ರೈಲು 20 ಸೆಕೆಂಡ್ ಕ್ಲಾಸ್ ಸ್ಪೀಪರ್ ಬೋಗಿಗಳು ಮತ್ತು 2 ಸೆಕೆಂಡ್ ಕ್ಲಾಸ್ ಲಗೇಜ್ ಹಾಗೂ ವಿಶೇಷಚೇತನ ಸ್ನೇಹಿ ಬೋಗಿಗಳು ಸೇರಿದಂತೆ ಒಟ್ಟು 22 ಬೋಗಿಗಳನ್ನು ಹೊಂದಿದೆ. ಈ ರೈಲು ಸಂಚಾರದಿಂದ ಬೆಂಗಳೂರು, ಗುಂತಕಲ್ ಹಾಗೂ ಕಲಬುರಗಿ, ಬೀದವರೆಗೆ ಬರುವ ಅನೇಕ ಜಿಲ್ಲೆಗಳ ಪ್ರಯಾಣಿಕರಿಗೆ ಅನುಕೂಲ ಒದಗಿಸುತ್ತದೆ.
ವಿಂಡೋ ಟ್ರೇಲಿಂಗ್ ಪರಿಶೀಲನೆ
ಡಿಆರ್ಎಂ ಬೇಲಾ ಮೀನಾ ಅವರು ಮೀರಜ್-ಹುಬ್ಬಳ್ಳಿ ಮಾರ್ಗದಲ್ಲಿ ವಿಂಡೋ ಟ್ರೇಲಿಂಗ್ ಪರಿಶೀಲನೆ ನಡೆಸಿದರು ಹಾಗೂ ರಾಯಬಾಗ, ಚಿಕ್ಕೋಡಿ ರೋಡ್ ಮತ್ತು ಗೊಕಾಕ್ ರೋಡ್ ರೈಲು ನಿಲ್ದಾಣಗಳಲ್ಲಿ ಅಮೃತ ಭಾರತ ನಿಲ್ದಾಣ ಯೋಜನೆಯ ಪ್ರಗತಿಯನ್ನು, ಪ್ರಯಾಣಿಕರ ಸೌಲಭ್ಯಗಳು, ಭದ್ರತಾ ಕ್ರಮಗಳು ಹಾಗೂ ಮೂಲಸೌಕರ್ಯ ಅಭಿವೃದ್ಧಿಯನ್ನು ಪರಿಶೀಲಿಸಿದರು. ಈ ವೇಳೆ ಕಾಮಗಾರಿ ಬಗ್ಗೆ ಅಧಿಕಾರಿಗಳು ಅಗತ್ಯ ಮಾಹಿತಿ ಒದಗಿಸಿದರು.
-
Karnataka Weather: ರಾಜ್ಯವನ್ನು ಸುಡುತ್ತಿದೆ ರಣಬಿಸಿಲು; ಕರಾವಳಿ, ಮಲೆನಾಡಿಗೆ ಇಂದು ಮಳೆ ಮುನ್ಸೂಚನೆ -
LPG Crisis: ಎಲ್ಪಿಜಿ ಬಿಕ್ಕಟ್ಟಿನ ಸುಳಿಯಲ್ಲಿ ಭಾರತದ ಪ್ರಮುಖ ನಗರಗಳು: ದರ್ಶಿನಿಗಳು ಬಂದ್, ಪಿಜಿಗಳಲ್ಲಿ ಮೆನು ಚೇಂಜ್ -
Gold: ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರದ ನಿಧಿ ಮೌಲ್ಯ 8 ಕೋಟಿ ರೂ.; ನಿಧಿ ಕೊಟ್ಟ ಕುಟುಂಬದಿಂದ ಹೊಸ ಡಿಮ್ಯಾಂಡ್, ಉತ್ಖನನ ಅಂತ್ಯ -
Gas Bill: ಇಡ್ಲಿ-ವಡೆ ಜೊತೆಗೆ ಗ್ಯಾಸ್ ಶುಲ್ಕ ವಿಧಿಸಿದ ರೆಸ್ಟೋರೆಂಟ್!: ದಂಗಾದ ಗ್ರಾಹಕರು, ಇಲ್ಲಿವೆ ನೋಡಿ ದರಗಳು -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ












Click it and Unblock the Notifications