ರಾಜ್ಯ ನಾಯಕತ್ವ ಬದಲಾವಣೆ ವಿಚಾರ: ಬಿಜೆಪಿ ನಾಯಕರು ಏನಂದ್ರು?

ಬೆಂಗಳೂರು, ಮೇ 26: ಒಂದೊಡೆ ಕೊರೊನಾ ಸೋಂಕು ರಾಜ್ಯದಲ್ಲಿ ತಾಂಡವವಾಡುತ್ತಿದೆ, ಇನ್ನೊಂದೆಡೆ ರಾಜ್ಯದ ನಾಯಕತ್ವ ಬದಲಾವಣೆ ಮಾತು ಕೇಳಿಬರುತ್ತಿದೆ.

ಯಡಿಯೂರಪ್ಪ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಯುತ್ತಾರೆ, ಅದಕ್ಕಾಗಿಯೇ ಜೂನ್ 5 ರಂದು ಶಾಸಕರ ಸಭೆ ಕರೆದಿದ್ದಾರೆ ಎನ್ನುವ ಗಾಳಿ ಸುದ್ದಿ ಹರಿದಾಡುತ್ತಿದೆ.

ಆದರೆ ಬಿಜೆಪಿ ನಾಯಕರು ಯಾರೂ ಕೂಡ ಈ ಬಗ್ಗೆ ಮಾತನಾಡಲು ಇಷ್ಟ ಪಡುತ್ತಿಲ್ಲ, ಇದೆಲ್ಲಾ ಊಹಾಪೋಹ, ಕೊರೊನಾ ಸಂದರ್ಭದಲ್ಲಿ ಇವೆಲ್ಲಾ ಪ್ರಸ್ತುತ ಅಲ್ಲ ಎನ್ನುವ ಹೇಳಿಕೆಯನ್ನು ನೀಡಿದ್ದಾರೆ.

ಈ ವಿಚಾರದ ಕುರಿತು ಹಲವು ಬಿಜೆಪಿ ನಾಯಕರು ಪ್ರತಿಕ್ರಿಯೆ ನೀಡಿದ್ದಾರೆ, ಏನು ಹೇಳಿದ್ದಾರೆ ಎಂದು ತಿಳಿಯಲು ಮುಂದೆ ಓದಿ..

 ಈ ವಿಚಾರ ಪ್ರಸ್ತುತ ಅಲ್ಲ

ಈ ವಿಚಾರ ಪ್ರಸ್ತುತ ಅಲ್ಲ

ಕೊರೊನಾ ಪಿಡುಗಿನ ಸಂದರ್ಭದಲ್ಲಿ ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರ ಪ್ರಸ್ತುತ ಅಲ್ಲ ಎಂದು ಸಚಿವ ವಿ. ಸೋಮಣ್ಣ ಹೇಳಿದ್ದಾರೆ.
ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ರಾಜ್ಯದಲ್ಲಿ ಕೋವಿಡ್ ಪರಿಸ್ಥಿತಿ ಭೀಕರವಾಗಿದೆ, ಈ ಸಂದರ್ಭದಲ್ಲಿ ನಾಯಕತ್ವ ಬದಲಾವಣೆ ಪ್ರಸ್ತುತ ಅಲ್ಲ, ಸಿಎಂ ಖುರ್ಚಿ ಖಾಲಿ ಇಲ್ಲ, ಊಹಾಪೋಹಗಳ ಮಾತಿಗೆ ಪ್ರತಿಕ್ರಿಯೆ ನೀಡುವುದಿಲ್ಲ, ಶಾಸಕಾಂಗ ಸಭೆ ಕರೆದಿರುವ ಬಗ್ಗೆ ಯಾವುದೇ ಮಾಹಿತಿ ಇಲ್ಲ ಎಂದಿದ್ದಾರೆ.
ಸಾಮಾನ್ಯರಿಗೆ ಅನುಕೂಲ ಆಗಲಿ ಎಂದು ಕೋವಿಡ್ ಕೇರ್ ಕೇಂದ್ರವನ್ನು ತೆರೆಯಲಾಗಿದೆ, ಮನೆಗಳಲ್ಲಿ ಐಸೊಲೇಟ್ ಆಗಲು ಅನುಕೂಲ ಇಲ್ಲದೇ ಇರುವವರು ಕೋವಿಡ್‌ ಕೇರ್‌ ಸೆಂಟರ್‌ಗೆ ಬರಬಹುದು ಎಂದಿದ್ದಾರೆ.

 ನಾಯಕತ್ವ ಬದಲಾವಣೆ ಸುದ್ದಿ ಅಧಿಕೃತವಲ್ಲ

ನಾಯಕತ್ವ ಬದಲಾವಣೆ ಸುದ್ದಿ ಅಧಿಕೃತವಲ್ಲ

ನಾಯಕತ್ವ ಬದಲಾವಣೆಗೆ ಸಂಬಂಧಿಸಿದ ಯಾವುದೇ ಸುದ್ದಿ ಅಧಿಕೃತವಲ್ಲ, ಎಲ್ಲಾ ಊಹಾಪೋಹಗಳು, ಊಹಾಪೋಹಗಳಿಗೆ ಉತ್ತರ ಕೊಡಲಾಗುವುದಿಲ್ಲ, ಸಿಎಂ ಸ್ಥಾನಕ್ಕೆ ಯಾರ ಹೆಸರಿದೆಯೋ ಅವರನ್ನು ಕೇಳಿ ಎಂದು ಹೇಳಿದರು.

 ಯಡಿಯೂರಪ್ಪ ನಮ್ಮ ನಾಯಕರು

ಯಡಿಯೂರಪ್ಪ ನಮ್ಮ ನಾಯಕರು

ನನಗೆ ಯಡಿಯೂರಪ್ಪನವರೇ ಸರ್ವ ನಾಯಕರು. ಬೊಮ್ಮನಹಳ್ಳಿಯಲ್ಲಿ ಶಾಸಕ ಸತೀಶ್ ರೆಡ್ಡಿ ಹೇಳಿಕೆ. ನಾನು ದೆಹಲಿಗೆ ಹೋಗಿದ್ದೇನೆ ಎನ್ನುವುದು ಸುಳ್ಳು. ಸಿ.ಎಂ ಬದಲಾವಣೆ ವಿಚಾರದಲ್ಲಿ ನನ್ನ ಪಾತ್ರ ಇಲ್ಲ. ಯಡಿಯೂರಪ್ಪನವರು ಶಕ್ತಿವಂತರಾಗಿದ್ದಾರೆ. ಅವರೇ ನಮ್ಮ ಮುಖ್ಯಮಂತ್ರಿಗಳು. ನಾನು ನನ್ನ ಸ್ನೇಹಿತರೊಂದಿಗೆ ದೆಹಲಿಗೆ ಹೋಗಿದ್ದೇನೆ ಎನ್ನುವುದರಲ್ಲಿ ಸತ್ಯಾಂಶ ಇಲ್ಲ. ನಾನು ನನ್ನ ಕ್ಷೇತ್ರದಲ್ಲಿ ಸಕ್ರಿಯವಾಗಿ ಕೆಲಸ ಮಾಡುತ್ತಿದ್ದೇನೆ. ಇದು ಕರೋನಾ ಸಂದರ್ಭ ಜನರ ಸಮಸ್ಯೆಗೆ ಹೇಳಬೇಕು. ಇಂತಹ ಸಮಯದಲ್ಲಿ ಸಿಎಂ ಬದಲಾವಣೆ ವಿಚಾರ ಸರಿಯಲ್ಲ. ನನ್ನ ಸ್ನೇಹಿತರು ಎಲ್ಲಾ ಶಾಸಕರು ಇದ್ದಾರೆ. ಅವರು ಡೆಲ್ಲಿಗೆ ಹೋದರೆ ನಾನು ಹೋಗಿದ್ದೇನೆ ಎನ್ನುವುದು ಎಷ್ಟು ಸರಿ??. ಮುಖ್ಯಮಂತ್ರಿ ಬದಲಾವಣೆ ವಿಚಾರ ನಮ್ಮ ಮುಂದೆ ಇಲ್ಲ. ಹಾಗೇನಾದರೂ ಇದ್ದರೆ ನಮ್ಮ ಹೈಕಮಾಂಡ್ ನೋಡಿಕೊಳ್ಳುತ್ತಾರೆ. ಯಡಿಯೂರಪ್ಪನವರು ಉತ್ತಮ ಆಡಳಿತವನ್ನು ನೀಡುತ್ತಿದ್ದಾರೆ ಎಂದು ಶಾಸಕ ಸತೀಶ್ ರೆಡ್ಡಿ ಹೇಳಿದ್ದಾರೆ.

 ಈ ಸಂದರ್ಭದಲ್ಲಿ ಬದಲಾವಣೆ ಬೇಡ ಎಂಬ ಮಾತು

ಈ ಸಂದರ್ಭದಲ್ಲಿ ಬದಲಾವಣೆ ಬೇಡ ಎಂಬ ಮಾತು

ಕೋವಿಡ್ ಸಂದರ್ಭದಲ್ಲಿ ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಬೇಡ ಎನ್ನುವ ಮಾತು ಕೂಡ ಕೇಳಿಬಂದಿದೆ, ಕೊರೊನಾ ಕಡಿಮೆಯಾದ ಬಳಿಕ ಮತ್ತೆ ಚರ್ಚೆ ಏಳುವ ಸಾಧ್ಯತೆ ಇದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+