Get Updates
Get notified of breaking news, exclusive insights, and must-see stories!

Sumalatha : ಸುಮಲತಾ ಬಿಜೆಪಿ ಸೇರ್ಪಡೆ: ‘ಪ್ರಕ್ರಿಯೆ ಪ್ರಗತಿಯಲ್ಲಿದೆ, ಚರ್ಚೆ ನಡೆಯುತ್ತಿದೆ’ ಎಂದ ಸಿಎಂ ಬೊಮ್ಮಾಯಿ

ಸಂಸದೆ ಸುಮಲತಾ ಅಂಬರೀಶ್ ಅವರು ಬಿಜೆಪಿ ಸೇರಬಹುದು ಎಂಬ ಊಹಾಪೋಹಗಳು ಜೋರಾಗಿ ಕೇಳಿಬರುತ್ತಿವೆ. ಈ ವಿಚಾರವಾಗಿ ಪ್ರತಿಕ್ರಿಯಿಸಿರುವ ಬೊಮ್ಮಾಯಿ ಅವರು ಸುಮಲತಾ ಅಂಬರೀಷ್ ಅವರೊಂದಿಗೆ ಮಾತುಗತೆಗಳು ನಡೆಯುತ್ತಿವೆ ಎಂದು ತಿಳಿಸಿದ್ದಾರೆ.

ಬೆಂಗಳೂರು, ಮಾರ್ಚ್‌ 09: ಕರ್ನಾಟಕದಲ್ಲಿ ವಿಧಾನಸಭಾ ಚುನಾವಣೆಗೆ ಮುನ್ನ, ಮಂಡ್ಯ ಲೋಕಸಭಾ ಸಂಸದೆ ಸುಮಲತಾ ಅಂಬರೀಶ್ ಅವರು ಆಡಳಿತಾರೂಢ ಬಿಜೆಪಿ ಸೇರಬಹುದು ಎಂಬ ಊಹಾಪೋಹಗಳು ಜೋರಾಗಿ ಕೇಳಿಬರುತ್ತಿವೆ. ಈ ವಿಚಾರವಾಗಿ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸುಮಲತಾ ಅಂಬರೀಷ್ ಅವರೊಂದಿಗೆ ಮಾತುಗತೆಗಳು ನಡೆಯುತ್ತಿವೆ ಎಂದು ತಿಳಿಸಿದ್ದಾರೆ.

ಸಂಸದೆ ಸುಮಲತಾ ಅವರು ನಾಳೆ (ಶುಕ್ರವಾರ) ಮಂಡ್ಯದಲ್ಲಿ ನಡೆಯಲಿರುವ ಮಾಧ್ಯಮಗೋಷ್ಠಿಯಲ್ಲಿ ಬಿಜೆಪಿ ಸೇರುವ ನಿರ್ಧಾರವನ್ನು ಪ್ರಕಟಿಸುವ ಸಾಧ್ಯತೆಯಿದೆ. ಮಾರ್ಚ್ 12 ರಂದು ಮದ್ದೂರು ತಾಲೂಕಿನ ಗೆಜ್ಜಲಗೆರೆಯಲ್ಲಿ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಉದ್ಘಾಟನೆ ಹಾಗೂ ಬೃಹತ್ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಲು ಪ್ರಧಾನಿ ನರೇಂದ್ರ ಮೋದಿಯವರು ಮಂಡ್ಯಕ್ಕೆ ಭೇಟಿ ನೀಡಲಿದ್ದಾರೆ. ಮಂಡ್ಯದಲ್ಲಿ ನಡೆಯಲಿರುವ 1.5 ಕಿ.ಮೀ ಉದ್ದದ ರೋಡ್‌ಶೋನಲ್ಲಿ ಅವರು ಭಾಗವಹಿಸುವ ಸಾಧ್ಯತೆ ಇದೆ. ಈ ಸಂದರ್ಭದಲ್ಲಿ ಸುಮಲತಾ ಅವರು ಬಿಜೆಪಿಗೆ ಸೇರ್ಪಡೆಗೊಳ್ಳಲಿದ್ದಾರೆ ಎಂಬ ಉಹಾಪೋಹಗಳು ದಟ್ಟವಾಗಿವೆ.

Speculations rife about Sumalatha Ambareesh joining BJP, Basavaraj Bommai says talks are on

ಸುಮಲತಾ ಬಿಜೆಪಿಗೆ ಸೇರ್ಪಡೆಗೊಳ್ಳುವ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಬೊಮ್ಮಾಯಿ, 'ಪ್ರಕ್ರಿಯೆ ಪ್ರಗತಿಯಲ್ಲಿದೆ, ಚರ್ಚೆ ನಡೆಯುತ್ತಿದೆ' ಎಂದು ವಿಜಯಪುರದಲ್ಲಿ ಸುದ್ದಿಗಾರರಿಗೆ ತಿಳಿಸಿದರು.

ಮೇ ತಿಂಗಳ ವೇಳೆಗೆ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಅವರು ಮಂಡ್ಯ ಜಿಲ್ಲೆಯ ಯಾವುದಾದರೂ ಒಂದು ಕ್ಷೇತ್ರದಿಂದ ಸ್ಪರ್ಧಿಸಲು ಚಿಂತನೆ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ.

ಸುಮಲತಾ ಬಿಜೆಪಿ ಸೇರುವ ಬಗ್ಗೆ ಯಾವುದೇ ವಿವರಗಳನ್ನು ಬಹಿರಂಗಪಡಿಸಲು ಬಯಸದ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಯಾದಗಿರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. 'ನೀವು ಇಷ್ಟು ದಿನ ಕಾಯುತ್ತಿದ್ದೀರಿ, ಇನ್ನೂ 24 ಗಂಟೆಗಳ ಕಾಲ ಕಾಯಿರಿ. ನಾನು ದೃಢೀಕರಿಸಲು ಅಥವಾ ನಿರಾಕರಿಸಲು ಸಾಧ್ಯವಿಲ್ಲ. ನನಗೆ ಈ ಬಗ್ಗೆ ತಿಳಿದಿಲ್ಲ' ಎಂದು ಹೇಳಿದ್ದಾರೆ.

Speculations rife about Sumalatha Ambareesh joining BJP, Basavaraj Bommai says talks are on

'ಪ್ರತಿಯೊಬ್ಬ ವ್ಯಕ್ತಿಯು ತನ್ನದೇ ಆದ ಶಕ್ತಿಯನ್ನು ಹೊಂದಿದ್ದಾನೆ. ಯಾರಾದರೂ ಪಕ್ಷಕ್ಕೆ ಸೇರುವ ಮೂಲಕ, ಅದು ಖಂಡಿತವಾಗಿಯೂ ಆಯಾ ಕ್ಷೇತ್ರಗಳಲ್ಲಿ ಪಕ್ಷವನ್ನು ಬಲಪಡಿಸುತ್ತದೆ' ಎಂದು ಅವರು ತಿಳಿಸಿದರು.

ಇತ್ತೀಚೆಗಷ್ಟೇ ಅಂಬರೀಶ್ ಅವರ ಅಭಿಮಾನಿಗಳು ಎಂದು ಹೇಳಿಕೊಳ್ಳುವ ಸಮಾನ ಮನಸ್ಕ ಜನರ ಗುಂಪು ಮಂಡ್ಯದಲ್ಲಿ ಸಭೆ ನಡೆಸಿ, ರಾಜ್ಯ ರಾಜಕಾರಣಕ್ಕೆ ಬರುವಂತೆ ಸುಮಲತಾ ಅವರಿಗೆ ಒತ್ತಾಯಿಸಿದೆ.

ತೀವ್ರ ಪೈಪೋಟಿಯಿಂದ ಕೂಡಿದ್ದ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಸುಮಲತಾ 2019ರಲ್ಲಿ 1,25,876 ಮತಗಳಿ ಅಂತರದಿಂದ ಗೆದ್ದಿದ್ದರು. ಅವರು ಅಂದಿನ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರ ಪುತ್ರ ಜೆಡಿಎಸ್‌ನ ನಿಖಿಲ್ ಕುಮಾರಸ್ವಾಮಿ ಅವರನ್ನು ಸೋಲಿಸಿದರು. ಮಂಡ್ಯ ಲೋಕಸಭಾ ಕ್ಷೇತ್ರಕ್ಕೆ ನಡೆದಿದ್ದ ಹಣಾಹಣಿಯು ರಾಷ್ಟ್ರಮಟ್ಟದಲ್ಲಿ ಗಮನ ಸೆಳೆದಿತ್ತು.

ಸುಮಲತಾ ಅವರು ಆರಂಭದಲ್ಲಿ ಕಾಂಗ್ರೆಸ್‌ನಿಂದ ಟಿಕೆಟ್ ಬಯಸಿದ್ದರು. ಆದರೆ, ಸಮ್ಮಿಶ್ರ ಸರ್ಕಾರದ ನಿರ್ಧಾರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸುಮಲತಾ ಸ್ಪರ್ಧಿಸಿದ್ದರು.

ವಿಧಾನಸಭೆಯಲ್ಲಿ ಸಂಪೂರ್ಣ ಬಹುಮತ ಗಳಿಸಲು ಮಂಡ್ಯ ಸೇರಿದಂತೆ ಹಳೇ ಮೈಸೂರು ಭಾಗದಲ್ಲಿ ಗರಿಷ್ಠ ಸ್ಥಾನಗಳನ್ನು ಗೆಲ್ಲುವ ಗುರಿಯೊಂದಿಗೆ ಬಿಜೆಪಿ ಸುಮಲತಾ ಅವರನ್ನು ಪಕ್ಷಕ್ಕೆ ಸೆಳೆಯಲು ಪ್ರಯತ್ನಗಳನ್ನು ನಡೆಸುತ್ತಿದೆ. ಅದರ ಕೆಲವು ಮುಖಂಡರು ಮತ್ತು ಸಚಿವರು ಬಹಿರಂಗವಾಗಿ ಪಕ್ಷಕ್ಕೆ ಆಹ್ವಾನಿಸಿದ್ದಾರೆ ಮತ್ತು ಅವರೊಂದಿಗೆ ಮಾತುಕತೆ ನಡೆಯುತ್ತಿದೆ ಎಂದು ಹೇಳಿದ್ದಾರೆ. ಇತ್ತೀಚೆಗಷ್ಟೇ ಅವರ ಬೆಂಬಲಿಗರು ಬಿಜೆಪಿ ಸೇರಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+