ವಿದ್ಯುತ್ ತಂತಿಯಲ್ಲಿ ಬಟ್ಟೆ ಒಣಗಿಸಲು ಸರಕಾರದ ಅನುಮತಿ!
ಬೆಂಗಳೂರು, ಸೆ 4: ಬೆಂಗಳೂರು ಮಹಾನಗರ ವಿಶಾಲವಾಗಿ ಬೆಳೆಯುತ್ತಿರುವುದರಿಂದ ಟ್ರಾಫಿಕ್ ಜಾಮ್, ನೀರು, ಕರೆಂಟ್ ಸಮಸ್ಯೆಯ ಜೊತೆಗೆ ಸಾರ್ವಜನಿಕರಿಗೆ ಬಟ್ಟೆ ಒಣಗಿಸಲೂ ಜಾಗ ಸಿಗದೇ ಇರುವುದನ್ನು ಸರಕಾರ ಗಂಭೀರವಾಗಿ ತೆಗೆದುಕೊಂಡಿದೆ.
ಈ ಸಂಬಂಧ ಸ್ತ್ರೀ ಶಕ್ತಿ ಸಂಘಟನೆ (ಹೆಸರು ಬದಲಾಯಿಸಲಾಗಿದೆ) ಈ ಹಿಂದೆ ನೀಡಿದ್ದ ಮನವಿಗೆ ಕ್ಯಾಬಿನೆಟ್ ನಲ್ಲಿ ಅನುಮತಿ ನೀಡಲಾಗಿದೆ. ಇದರಂತೆ ಇನ್ನು ಮುಂದೆ ಅಂದರೆ ಸರಕಾರದ ಮುಂದಿನ ಅಧಿಸೂಚನೆಯ ತನಕ ಬೆಂಗಳೂರು ಸೇರಿದಂತೆ ರಾಜ್ಯದೆಲ್ಲಡೆ ವಿದ್ಯುತ್ ಕಂಬದಲ್ಲಿ ಸಾರ್ವಜನಿಕರು ಬಟ್ಟೆ ಒಣಗಿ ಹಾಕಬಹುದಾಗಿದೆ. (ಬೆಸ್ಕಾಂನಿಂದ ಮತ್ತೆ ಶಾಕ್)
ಈ ಸಂಬಂಧ ಬೆಸ್ಕಾಂ ಸೇರಿದಂತೆ ರಾಜ್ಯದ ಇತರ ನಾಲ್ಕು ಎಸ್ಕಾಂ (ಇಲೆಕ್ಟ್ರಿಕಲ್ ಸಪ್ಲೈ ಕಂಪೆನಿ) ಮುಖ್ಯ ಇಂಜಿನಿಯರುಗಳಿಗೆ ಇಂಧನ ಸಚಿವರು ಸಹಿ ಹಾಕಿರುವ ಆದೇಶದ ಪ್ರತಿಯನ್ನು ಕಳುಹಿಸಿ ಕೊಡಲಾಗಿದೆ.

ಈಗಾಗಲೇ ಎಗ್ಗಿಲ್ಲದೇ ಸಾಗುತ್ತಿರುವ ಲೋಡ್ ಶೆಡ್ಡಿಂಗ್ ನಿಂದಾಗಿ ವಿದ್ಯುತ್ ಕಂಬ ಅಥವಾ ತಂತಿಯನ್ನು ಸಾರ್ವಜನಿಕರು ಬಟ್ಟೆ ಒಣಗಿಸಲು ಉಪಯೋಗಿಸಿ ಕೊಂಡರೆ ಇದರಿಂದ ಸರಕಾರಕ್ಕೆ ಯಾವುದೇ ನಷ್ಟವಾಗುವುದಿಲ್ಲ.
ಬದಲಿಗೆ ಇದನ್ನು ನಮ್ಮ ಸರಕಾರದ ಸಾಧನೆಯೆಂದು ಮುಂಬರುವ ಚುನಾವಣೆಗಳಲ್ಲಿ ಹೇಳಿಕೊಳ್ಳಬಹುದಾಗಿದೆ. ಜೊತೆಗೆ, ಕರೆಂಟ್ ಶಾಕ್ ಹೊಡೆದು ಸಾಯಿಯುವವರ ಸಂಖ್ಯೆಯೂ ಕಮ್ಮಿಯಾಗಿದೆ ಎಂದು ನಾವು ಪ್ರಚಾರ ಗಿಟ್ಟಿಸಿಕೊಳ್ಳಬಹುದಾಗಿದೆ ಎನ್ನುವುದು ಸರಕಾರದ ದೂರಾಲೋಚನೆ ಎನ್ನಲಾಗುತ್ತಿದೆ.
ಬೆಂಗಳೂರು ವ್ಯಾಪ್ತಿಯಲ್ಲಿ ಮೂರರಿಂದ ನಾಲ್ಕು ಗಂಟೆ, ರಾಜ್ಯದ ಇತರ ನಗರಗಳಲ್ಲಿ ನಾಲ್ಕರಿಂದ ಆರು ಗಂಟೆ ಮತ್ತು ಗ್ರಾಮೀಣ ಭಾಗದಲ್ಲಿ ಹತ್ತರಿಂದ ಹನ್ನೆರಡು ಗಂಟೆಯ ಕಾಲ ವಿದ್ಯುತ್ ಕಂಬದಲ್ಲಿ ಧಾರಾಳವಾಗಿ ಬಟ್ಟೆ ಒಣಗಿಸಲು ಯಾವುದೇ ಅಭ್ಯಂತರವಿಲ್ಲ ಎಂದು ಹೆಸರು ಹೇಳಲು ಇಚ್ಚಿಸದ ಸರಕಾರಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಇನ್ಮುಂದೆ ತಂತಿಯ ಮೇಲೆ ಕುಳಿತ ಕಾಗೆಗಳನ್ನು ಓಡಿಸಿ ಧಾರಾಳವಾಗಿ ಬಟ್ಟೆ ಒಣಗಿ ಹಾಕಿಕೊಳ್ಳಬಹುದಾಗಿದೆ. ಸರಕಾರದ ಈ ಅಪರೂಪದ ಮತ್ತು ಐತಿಹಾಸಿಕ ನಿರ್ಧಾರಕ್ಕೆ ರಾಜ್ಯದೆಲ್ಲಡೆ ವ್ಯಾಪಕ ಪ್ರಶಂಸೆ ವ್ಯಕ್ತವಾಗುತ್ತಿದೆ. (ಕಾಲ್ಪನಿಕ ಲೇಖನ)
-
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್












Click it and Unblock the Notifications