ವಿದ್ಯುತ್ ತಂತಿಯಲ್ಲಿ ಬಟ್ಟೆ ಒಣಗಿಸಲು ಸರಕಾರದ ಅನುಮತಿ!
ಬೆಂಗಳೂರು, ಸೆ 4: ಬೆಂಗಳೂರು ಮಹಾನಗರ ವಿಶಾಲವಾಗಿ ಬೆಳೆಯುತ್ತಿರುವುದರಿಂದ ಟ್ರಾಫಿಕ್ ಜಾಮ್, ನೀರು, ಕರೆಂಟ್ ಸಮಸ್ಯೆಯ ಜೊತೆಗೆ ಸಾರ್ವಜನಿಕರಿಗೆ ಬಟ್ಟೆ ಒಣಗಿಸಲೂ ಜಾಗ ಸಿಗದೇ ಇರುವುದನ್ನು ಸರಕಾರ ಗಂಭೀರವಾಗಿ ತೆಗೆದುಕೊಂಡಿದೆ.
ಈ ಸಂಬಂಧ ಸ್ತ್ರೀ ಶಕ್ತಿ ಸಂಘಟನೆ (ಹೆಸರು ಬದಲಾಯಿಸಲಾಗಿದೆ) ಈ ಹಿಂದೆ ನೀಡಿದ್ದ ಮನವಿಗೆ ಕ್ಯಾಬಿನೆಟ್ ನಲ್ಲಿ ಅನುಮತಿ ನೀಡಲಾಗಿದೆ. ಇದರಂತೆ ಇನ್ನು ಮುಂದೆ ಅಂದರೆ ಸರಕಾರದ ಮುಂದಿನ ಅಧಿಸೂಚನೆಯ ತನಕ ಬೆಂಗಳೂರು ಸೇರಿದಂತೆ ರಾಜ್ಯದೆಲ್ಲಡೆ ವಿದ್ಯುತ್ ಕಂಬದಲ್ಲಿ ಸಾರ್ವಜನಿಕರು ಬಟ್ಟೆ ಒಣಗಿ ಹಾಕಬಹುದಾಗಿದೆ. (ಬೆಸ್ಕಾಂನಿಂದ ಮತ್ತೆ ಶಾಕ್)
ಈ ಸಂಬಂಧ ಬೆಸ್ಕಾಂ ಸೇರಿದಂತೆ ರಾಜ್ಯದ ಇತರ ನಾಲ್ಕು ಎಸ್ಕಾಂ (ಇಲೆಕ್ಟ್ರಿಕಲ್ ಸಪ್ಲೈ ಕಂಪೆನಿ) ಮುಖ್ಯ ಇಂಜಿನಿಯರುಗಳಿಗೆ ಇಂಧನ ಸಚಿವರು ಸಹಿ ಹಾಕಿರುವ ಆದೇಶದ ಪ್ರತಿಯನ್ನು ಕಳುಹಿಸಿ ಕೊಡಲಾಗಿದೆ.

ಈಗಾಗಲೇ ಎಗ್ಗಿಲ್ಲದೇ ಸಾಗುತ್ತಿರುವ ಲೋಡ್ ಶೆಡ್ಡಿಂಗ್ ನಿಂದಾಗಿ ವಿದ್ಯುತ್ ಕಂಬ ಅಥವಾ ತಂತಿಯನ್ನು ಸಾರ್ವಜನಿಕರು ಬಟ್ಟೆ ಒಣಗಿಸಲು ಉಪಯೋಗಿಸಿ ಕೊಂಡರೆ ಇದರಿಂದ ಸರಕಾರಕ್ಕೆ ಯಾವುದೇ ನಷ್ಟವಾಗುವುದಿಲ್ಲ.
ಬದಲಿಗೆ ಇದನ್ನು ನಮ್ಮ ಸರಕಾರದ ಸಾಧನೆಯೆಂದು ಮುಂಬರುವ ಚುನಾವಣೆಗಳಲ್ಲಿ ಹೇಳಿಕೊಳ್ಳಬಹುದಾಗಿದೆ. ಜೊತೆಗೆ, ಕರೆಂಟ್ ಶಾಕ್ ಹೊಡೆದು ಸಾಯಿಯುವವರ ಸಂಖ್ಯೆಯೂ ಕಮ್ಮಿಯಾಗಿದೆ ಎಂದು ನಾವು ಪ್ರಚಾರ ಗಿಟ್ಟಿಸಿಕೊಳ್ಳಬಹುದಾಗಿದೆ ಎನ್ನುವುದು ಸರಕಾರದ ದೂರಾಲೋಚನೆ ಎನ್ನಲಾಗುತ್ತಿದೆ.
ಬೆಂಗಳೂರು ವ್ಯಾಪ್ತಿಯಲ್ಲಿ ಮೂರರಿಂದ ನಾಲ್ಕು ಗಂಟೆ, ರಾಜ್ಯದ ಇತರ ನಗರಗಳಲ್ಲಿ ನಾಲ್ಕರಿಂದ ಆರು ಗಂಟೆ ಮತ್ತು ಗ್ರಾಮೀಣ ಭಾಗದಲ್ಲಿ ಹತ್ತರಿಂದ ಹನ್ನೆರಡು ಗಂಟೆಯ ಕಾಲ ವಿದ್ಯುತ್ ಕಂಬದಲ್ಲಿ ಧಾರಾಳವಾಗಿ ಬಟ್ಟೆ ಒಣಗಿಸಲು ಯಾವುದೇ ಅಭ್ಯಂತರವಿಲ್ಲ ಎಂದು ಹೆಸರು ಹೇಳಲು ಇಚ್ಚಿಸದ ಸರಕಾರಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಇನ್ಮುಂದೆ ತಂತಿಯ ಮೇಲೆ ಕುಳಿತ ಕಾಗೆಗಳನ್ನು ಓಡಿಸಿ ಧಾರಾಳವಾಗಿ ಬಟ್ಟೆ ಒಣಗಿ ಹಾಕಿಕೊಳ್ಳಬಹುದಾಗಿದೆ. ಸರಕಾರದ ಈ ಅಪರೂಪದ ಮತ್ತು ಐತಿಹಾಸಿಕ ನಿರ್ಧಾರಕ್ಕೆ ರಾಜ್ಯದೆಲ್ಲಡೆ ವ್ಯಾಪಕ ಪ್ರಶಂಸೆ ವ್ಯಕ್ತವಾಗುತ್ತಿದೆ. (ಕಾಲ್ಪನಿಕ ಲೇಖನ)
-
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು -
ಟಿ20 ವಿಶ್ವಕಪ್ 2026 ಭಾರತದ ಮುಡಿಗೆ: ಬಾಲ ಮುದುರಿಕೊಂಡ 'ಸೈಲೆಂಟ್' ಸ್ಯಾಂಟ್ನರ್












Click it and Unblock the Notifications