ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಎಸ್.ಆರ್.ನವಲೀ ಹಿರೇಮಠ್ ಬಿಜೆಪಿ ಸೇರ್ಪಡೆ

|
Google Oneindia Kannada News

ಬೆಂಗಳೂರು ಮಾರ್ಚ್ 22 : ಬಾಗಲಕೋಟೆಯ ಎಸ್‌ಆರ್‌ಎನ್‌ಇ ಫೌಂಡೇಶನ್ ಅಧ್ಯಕ್ಷ ಮತ್ತು ಸಮಾಜ ಸೇವಕ ಎಸ್.ಆರ್.ನವಲೀ ಹಿರೇಮಠ್ ಬಿಜೆಪಿ ಸೇರಿದರು.

ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಗುರುವಾರ ನಡೆದ ಸಮಾರಂಭದಲ್ಲಿ ಎಸ್.ಆರ್.ನವಲೀ ಹಿರೇಮಠ್ ಅವರು ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಸಮ್ಮುಖದಲ್ಲಿ ಪಕ್ಷಕ್ಕೆ ಸೇರ್ಪಡೆಗೊಂಡರು.

ಮಾ.26, 27ರಂದು ಅಮಿತ್ ಶಾ ರಾಜ್ಯ ಪ್ರವಾಸಮಾ.26, 27ರಂದು ಅಮಿತ್ ಶಾ ರಾಜ್ಯ ಪ್ರವಾಸ

ಬಾಗಲಕೋಟೆ ಜಿಲ್ಲೆಯಲ್ಲಿ ಬಿಜೆಪಿಯನ್ನು ಗೆಲ್ಲಿಸುವ ಉದ್ದೇಶದಿಂದ ಪಕ್ಷದ ಸಿದ್ದಾಂತಗಳನ್ನು ಒಪ್ಪಿ ಎಸ್.ಆರ್.ನವಲೀ ಹಿರೇಮಠ್ ಅವರು ಪಕ್ಷ ಸೇರಿದರು. 'ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸುವಂತೆ' ಯಡಿಯೂರಪ್ಪ ಸೂಚಿಸಿದ್ದಾರೆ.

SR Navali Hiremath join BJP

ಸಮಾರಂಭದಲ್ಲಿ ಮಾತನಾಡಿದ ಯಡಿಯೂರಪ್ಪ ಅವರು, 'ರಾಜ್ಯದಲ್ಲಿ ಬಿಜೆಪಿಯ ಗೆಲುವಿಗೆ ಶ್ರಮಿಸುವ ಮುಖಂಡರನ್ನು ನಾವು ಸ್ವಾಗತಿಸುತ್ತೇವೆ. ಈ ಹಿನ್ನಲೆಯಲ್ಲಿ ಬಾಗಲಕೋಟೆ ಜಿಲ್ಲೆಯ ಪ್ರಭಾವಿ ಮುಖಂಡ ನವಲೀ ಹಿರೇಮಠ್ ಅವರು ಪಕ್ಷ ಸೇರ್ಪಡೆಯಾಗುತ್ತಿರುವುದು ಬಹಳ ಸಂತಸ ತಂದಿದೆ' ಎಂದು ಹೇಳಿದರು.

ಚುನಾವಣೆ : ಬಿಜೆಪಿ ಟಿಕೆಟ್ ಹಂಚಿಕೆಗೆ ಎ, ಬಿ, ಸಿ ಸೂತ್ರ!ಚುನಾವಣೆ : ಬಿಜೆಪಿ ಟಿಕೆಟ್ ಹಂಚಿಕೆಗೆ ಎ, ಬಿ, ಸಿ ಸೂತ್ರ!

ಎಸ್.ಆರ್.ನವಲೀ ಹಿರೇಮಠ್ ಮಾತನಾಡಿ, 'ರಾಜ್ಯದಲ್ಲಿ ಭಾರತೀಯ ಜನತಾ ಪಕ್ಷವವನ್ನು ಅಧಿಕಾರಕ್ಕೆ ತರುವುದು ನಮ್ಮ ಗುರಿಯಾಗಿದೆ. ಯಡಿಯೂರಪ್ಪ ಅವರ ನಾಯಕತ್ವದಲ್ಲಿ ನಂಬಿಕೆಯಿಟ್ಟು ಪಕ್ಷಕ್ಕೆ ಸೇರಿದ್ದೇನೆ' ಎಂದರು.

ಕಾರ್ಯಕ್ರಮದಲ್ಲಿ ಮಾಜಿ ಸಚಿವರಾದ ಗೋವಿಂದ ಕಾರಜೋಳ, ಲಕ್ಷ್ಮಣ ಸವದಿ ಸೇರಿದಂತೆ ಹಲವರು ಭಾಗವಹಿಸಿದ್ದರು.

English summary
Bagalkot leader and SRNE foundation president S.R.Navali Hiremath on March 22, 2018 joined BJP in the presence of Karnataka BJP president B.S.Yeddyurappa.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X