Wedding: ಎಸ್.ಆರ್ ವಿಶ್ವನಾಥ್ ಪುತ್ರಿ ಬೈರತಿ ಸುರೇಶ್ ಮಗನ ಮದುವೆ ದಿನಾಂಕ ಫಿಕ್ಸ್
ಬೆಂಗಳೂರು ಜುಲೈ 25: ಬಿಜೆಪಿ ನಾಯಕ ಶಾಸಕ ಎಸ್.ಆರ್ ವಿಶ್ವನಾಥ್ ಪುತ್ರಿ ಹಾಗೂ ಕಾಂಗ್ರೆಸ್ ನಾಯಕ, ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಮಗನ ಮದುವೆ ದಿನಾಂಕ ಫಿಕ್ಸ್ ಆಗಿದೆ. ಈ ಬಗ್ಗೆ ಸ್ವತ: ಎಸ್.ಆರ್ ವಿಶ್ವನಾಥ್ ಅವರೇ ಹೇಳಿಕೊಂಡಿದ್ದು, ತಮ್ಮ ಮಗಳ ಮದುವೆ ದಿನಾಂಕವನ್ನು ವೇದಿಕೆ ಮೇಲೆ ನೂರಾರು ಜನರ ಮುಂದೆ ಪ್ರಸ್ತಾಪಿಸಿದ್ದಾರೆ.
ಹೌದು... ಮಕ್ಕಳಿಗೆ ಮದುವೆ ಮಾಡುವ ಮೂಲಕ ಕೈ ಹಾಗೂ ಕಮಲ ಒಂದಾಗುತ್ತಿದೆ. ಕಾಂಗ್ರೆಸ್ ನಾಯಕ, ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಹಾಗೂ ಬಿಜೆಪಿ ನಾಯಕ ಶಾಸಕ ಎಸ್ಆರ್ ವಿಶ್ವನಾಥ್ ಬೀಗರಾಗುತ್ತಿರುವ ವಿಚಾರ ನಿಜವಾಗಿದೆ. ಈ ಬಗ್ಗೆ ಸ್ವತ: ಎಸ್.ಆರ್ ವಿಶ್ವನಾಥ್ ಅವರೇ ಹೇಳಿಕೊಂಡಿದ್ದು ಮದುವೆ ದಿನಾಂಕ ಕೂಡ ಅವರು ಘೋಷಣೆ ಮಾಡಿದ್ದಾರೆ.

ಹೌದು... ಎಸ್.ಆರ್ ವಿಶ್ವನಾಥ್ ಪುತ್ರಿ ಹಾಗೂ ಬೈರತಿ ಸುರೇಶ್ ಮಗನ ಮದುವೆಯಾಗುತ್ತಿದ್ದು ದಿನಾಂಕ ಡೂಡ ಫಿಕ್ಸ್ ಆಗಿದೆ. ಎಸ್ಆರ್ ವಿಶ್ವನಾಥ್ ಮಗಳನ್ನು ಬೈರತಿ ಸುರೇಶ್ ಪುತ್ರ ಮದುವೆಯಾಗುತ್ತಿದ್ದು ದಿನಾಂಕ ನಿಗಧಿಯಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಸುರೇಶ್ ಪುತ್ರ ಸಂಜಯ್ ಹಾಗೂ ವಿಶ್ವನಾಥ್ ಪುತ್ರಿ ಅಪೂರ್ವ ಇಬ್ಬರು ಕಾಲೇಜು ಸ್ನೇಹಿತರಾಗಿದ್ದರು.
ಸಂಜಯ್ ಹಾಗೂ ಅಪೂರ್ವ ಇಬ್ಬರು ಮಲ್ಲೇಶ್ವರಂನ ವಿದ್ಯಾಮಂದಿರದಲ್ಲಿ ಶಿಕ್ಷಣವನ್ನು ಪಡೆದುಕೊಂಡಿದ್ದರು. ಇಬ್ಬರ ನಡುವೆ ಕಾಲೇಜು ದಿನಗಳ ಸಮಯದಲ್ಲೇ ಉತ್ತಮ ಸ್ನೇಹವಿತ್ತು. ಆ ಬಳಿಕ ಇಬ್ಬರು ಪರಸ್ಪರ ಪ್ರೀತಿಸುತ್ತಿದ್ದರು. ಇದರಂತೆ ಇದೀಗ ಮದುವೆ ಹಂತಕ್ಕೆ ಇಬ್ಬರ ಪ್ರೇಮ ಬಂದಿದ್ದು, ಎರಡೂ ಕುಟುಂಬದ ಸಮ್ಮತಿ ಮೇರೆಗೆ ಮದುವೆ ನಿಶ್ಚಯ ಮಾಡಲಾಗಿದೆ.
ಬೈರತಿ ಸುರೇಶ್ ಅವರ ಮಗ ನನ್ನ ಅಳಿಯನಾಗುತ್ತಿದ್ದಾನೆ. ಫೆಬ್ರವರಿ 7ನೇ ತಾರೀಖು ಅರಮನೆ ಮೈದಾನ ಗೇಟ್ ನಂಬರ್ 1ಮತ್ತು 2ರಲ್ಲಿ ಮದುವೆ ಸಮಾರಂಭ ನಡೆಯಲಿದೆ. ಜುಲೈ 9ನೇ ತಾರೀಖು ಮದುವೆ ಊಟ ಇರುತ್ತದೆ. ಯಾರೂ ಕೂಡ ಮುಸ್ ಮಾಡ್ಬೇಡಿ. ತಮ್ಮ ಆಶೀರ್ವಾದ ನಮ್ಮ ಮಕ್ಕಳ ಮೇಲೆ ಇರಬೇಕು ಎಂದು ಎಸ್.ಆರ್ ವಿಶ್ವನಾಥ್ ಹೇಳಿದ್ದಾರೆ.
ಇದರಿಂದ ಬಿಜೆಪಿ ನಾಯಕ ಶಾಸಕ ಎಸ್.ಆರ್ ವಿಶ್ವನಾಥ್ ಪುತ್ರಿ ಹಾಗೂ ಕಾಂಗ್ರೆಸ್ ನಾಯಕ, ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಇಬ್ಬರೂ ಬೀಗರಾಗುವುದು ಖಚಿತವಾಗಿದೆ.
-
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು -
Prediction on Donald Trump: ಟ್ರಂಪ್ ಗೆಲುವು, ಇರಾನ್ ಯುದ್ಧ ಭವಿಷ್ಯ: 3 ಭವಿಷ್ಯವಾಣಿಯಲ್ಲಿ 2 ನಿಜ, ಮತ್ತೊಂದೇನು -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Sanju Samson: ಟಿ20 ವಿಶ್ವಕಪ್ ಗೆಲುವಿನ ಬಳಿಕ ಕ್ರಿಕೆಟ್ ದೇವರ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಸಂಜು ಸ್ಯಾಮ್ಸನ್












Click it and Unblock the Notifications