ಶ್ರೀಕರಾರ್ಚಿತ ಶ್ರೀರಾಮದೇವರಿಗೆ ಸಾಮ್ರಾಜ್ಯ ಪಟ್ಟಾಭಿಷೇಕ
ಶ್ರೀಕರಾರ್ಚಿತ ಶ್ರೀರಾಮದೇವರಿಗೆ ಸಾಮ್ರಾಜ್ಯ ಪಟ್ಟಾಭಿಷೇಕ
ಬೆಂಗಳೂರು, ಆಗಸ್ಟ್ 29: ರಾಮಪಟ್ಟಾಭಿಷೇಕದ ಮೂಲಕ ತ್ರೇತಾಯುಗವನ್ನು ಮರಳಿ ನೆನಪಿಸುವ ಕಾರ್ಯ ಮಾಡಲಾಗುತ್ತದೆ. ಶ್ರೀರಾಮಪಟ್ಟಾಭಿಷೇಕದ ನೈಜ ಸ್ವಾಧ, ಆನಂದ ಸಿಗಬೇಕಾದರೆ ಹಿಂದಿನ ರಾಮಾಯಣದ ಅಧ್ಯಯನ ಮಾಡಬೇಕು.
ಪಟ್ಟಾಭಿಷೇಕ ಕಾರ್ಯಕ್ರಮದಲ್ಲಿ ಭಾಗವಹಿಸುವ ಮೂಲಕ ರಾಮನ ರಾಜತ್ವವನ್ನು ಪ್ರತಿಯೊಬ್ಬರೂ ಅಂಗೀಕರಿಸಿದ್ದೀರಿ ಎಂದು ರಾಮಚಂದ್ರಾಪುರ ಮಠದ ರಾಘವೇಶ್ವರಭಾರತೀ ಶ್ರೀಗಳು ಹೇಳಿದರು.

ಬುಧವಾರ ಗಿರಿನಗರದ ಶ್ರೀರಾಮಾಶ್ರಮದಲ್ಲಿ ಗೋಸ್ವರ್ಗ ಚಾತುರ್ಮಾಸ್ಯ ಶುಭ ಸಂದರ್ಭದಲ್ಲಿ ಶ್ರೀಕರಾರ್ಚಿತ ಶ್ರೀರಾಮದೇವರಿಗೆ ಸಾಮ್ರಾಜ್ಯ ಪಟ್ಟಾಭಿಷೇಕ ಸೇವೆಯ ಸಂದರ್ಭ ನಡೆದ ಧಾರ್ಮಿಕ ಸಭೆಯಲ್ಲಿ ಆಶೀರ್ವಚನ ನೀಡಿದರು.
ಹದಿನಾಲ್ಕು ವರ್ಷದ ವನವಾಸ ಮಾಡಿ ಜಗತ್ತಿಗೆ ಸೇತು ನಿರ್ಮಿಸಿ, ಲೋಕ ಕಂಠಕರನ್ನು ಮರ್ಧನ ಮಾಡಿದ ಬಳಿಕ ಶ್ರೀರಾಮನಿಗೆ ಪಟ್ಟಾಭಿಷೇಕವಾಗಿದೆ.
ಜಗತ್ತಿನ ಕಲ್ಯಾಣ ಕಾರ್ಯಗಳನ್ನು ಮಾಡಿದ ಬಳಿಕ ಪಟ್ಟವನ್ನು ಏರಿದ್ದು. ಮಹಾನ್ ವ್ಯಕ್ತಿಗಳ ಬದುಕಿನ ಸನ್ನಿವೇಶಗಳ ಮೂಲಕವೇ ನೆನಪು ಸದಾ ಉಳಿದುಕೊಳ್ಳುತ್ತದೆ. ರಾಮನ ವೈಭವಕ್ಕೆ ಸಾಟಿಯಾದುದು ಬೇರೊಂದಿಲ್ಲ.
537ದಿನಕ್ಕೆ ಒಂದು ಬಾರಿ ಅಗತ್ಯ ಪೂಜಿತವಾದ ಶಂಕರಾಚಾರ್ಯ ಪ್ರಭಕ್ತರಾಗಿರತಕ್ಕಂತಹ ಅನೇಕ ಮಹಾತ್ಮರಿಂದ ಸಂಪೂಜಿತವಾಗಿರತಕ್ಕಂತಹ ಶ್ರೀರಾಮ ಸೀತೆಯವರಿಗೆ ಪಟ್ಟಾಭಿಷೇಕವಾಗುತ್ತದೆ ಎಂದು ಶ್ರೀಗಳು ತಿಳಿಸಿದರು.
ವಿಶಿಷ್ಠವಾಗಿ ಅಲಂಕೃತವಾದ ಸಿಂಹಾಸನದಲ್ಲಿ ಪಟ್ಟಾಭಿಷಿಕ್ತನಾದ ಶ್ರೀಕರಾರ್ಚಿತ ಶ್ರೀರಾಮದೇವರು ಹಾಗೂ ಸೀತಾಮಾತೆಗೆ ರಾಘವೇಶ್ವರ ಶ್ರೀಗಳು ನವರತ್ನಾಭಿಷೇಕ, ಸುವರ್ಣಾಭಿಷೇಕ ರಜತಾಭಿಷೇಕ ಮಾಡಿದರು.
ವಿಶೇಷ ಸೇವೆ, ಪಟ್ಟಕಾಣಿಕೆಯಾಗಿ ಶ್ರೀಮಠದ ಶಿಷ್ಯಭಕ್ತರು ನವರತ್ನ, ಆಭರಣಗಳು ಸೇರಿ 75ಕ್ಕೂ ಹೆಚ್ಚು ವಿವಿಧ ಸುವಸ್ತುಗಳು ಹಾಗೂ ಕಾಣಿಕೆಗಳನ್ನು ಸೇವಾರೂಪದಲ್ಲಿ ಶ್ರೀರಾಮದೇವರಿಗೆ ಸಮರ್ಪಿಸಿದರು. ಪಟ್ಟಾಭಿಷೇಕದ ಸಂದರ್ಭದಲ್ಲಿ ಸಂಗೀತ ಸೇವೆ, ನೃತ್ಯ ಸೇವೆ, ಋಗ್ವೇದ, ಯಜುರ್ವೇದ, ಸಾಮವೇದ, ಅಥರ್ವವೇದ ಮಂತ್ರಗಳ ಘೋಷ ನೆರವೇರಿತು.
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
KEA: ರಾಜ್ಯದ ವಸತಿ ಶಾಲೆಗಳ ಪ್ರವೇಶ ಪರೀಕ್ಷೆ, ಅಂತಿಮ ಅಂಕಪಟ್ಟಿ ಪ್ರಕಟ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Expressway: ಏಪ್ರಿಲ್ 1ರಿಂದ ರಾಜ್ಯಾದ್ಯಂತ ಟೋಲ್ ದರ ಏರಿಕೆ; ಬೆಂಗಳೂರು-ಮೈಸೂರು ಸೇರಿ ಈ ಪ್ರಮುಖ ಹೆದ್ದಾರಿಗಳಲ್ಲಿ ಸಂಚಾರ ದುಬಾರಿ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ












Click it and Unblock the Notifications