ಕರ್ನಾಟಕ ವಿಧಾನಸಭೆ ಚುನಾವಣೆಗೆ ಪ್ರಮೋದ್ ಮುತಾಲಿಕ್ ಸ್ಪರ್ಧೆ ಪಕ್ಕಾ
Recommended Video
ಚಿಕ್ಕಮಗಳೂರು, ನವೆಂಬರ್ 20: ಶ್ರೀರಾಮ ಸೇನೆಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ 2018ರ ಕರ್ನಾಟಕ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸುವುದು ಬಹುತೇಕ ಖಚಿತವಾಗಿದೆ.
ಕರ್ನಾಟಕ ವಿಧಾನಸಭೆ ಚುನಾವಣೆಗೆ ಶಿವಸೇನೆ ಅಭ್ಯರ್ಥಿಗಳ ಸ್ಪರ್ಧೆ?
ಈ ಬಗ್ಗೆ ಸ್ವತಃ ಪ್ರಮೋದ್ ಮುತಾಲಿಕ್ ಅವರು ಚಿಕ್ಕಮಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, :ರಾಜ್ಯದಲ್ಲಿ ಹಿಂದುತ್ವಕ್ಕೆ ಬೆಲೆಯೇ ಇಲ್ಲದಂತಾಗಿದೆ. ಹೀಗಾಗಿ ಹಿಂದುತ್ವದ ರಕ್ಷಣೆಗಾಗಿ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ದಿಸಲಿದ್ದೇನೆ" ಎಂದು ಸ್ಪಷ್ಟ ಪಡಿಸಿದರು.
ಈಗಾಗಲೇ ಚಿಕ್ಕಮಗಳೂರು ಸೇರಿದಂತೆ ರಾಜ್ಯದ 7 ವಿಧಾನಸಭಾ ಕ್ಷೇತ್ರಗಳಲ್ಲಿ ಸ್ಪರ್ದಿಸುವಂತೆ ಆಹ್ವಾನ ಬಂದಿದೆ. ಈ ಪೈಕಿ ಯಾವುದಾದರೊಂದು ಕ್ಷೇತ್ರದಲ್ಲಿ ಸ್ಪರ್ಧೆ ಮಾಡುವುದು ಖಚಿತವಾಗಿದೆ.
ಈಗಾಗಲೇ ಶಿವಸೇನೆಯೊಂದಿಗೆ ಎರಡು ಸುತ್ತಿನ ಮಾತುಕತೆ ನಡೆದಿದೆ. ಈ ಬಗ್ಗೆ ಕಾರ್ಯಕರ್ತರೊಂದಿಗೆ ಚರ್ಚಿಸಿ ತೀರ್ಮಾನ ಕೈಗೊಳ್ಳುವುದಾಗಿ ತಿಳಿಸಿದರು.
ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ನೀಡುವಂತೆ ಕಾರ್ಯಕರ್ತರು ಮತ್ತು ಪ್ರಮುಖರು ಬಿಜೆಪಿಯನ್ನು ಸಂಪರ್ಕಿಸುತ್ತಿದ್ದೇವೆ. ಆದರೆ, ಸೌಜನ್ಯಕ್ಕೂ ನಮ್ಮನ್ನು ಸಂಪರ್ಕಿಸಿಲ್ಲ' ಎಂದು ಮುತಾಲಿಕ್ ಇತ್ತೀಚೆಗೆ ಕಲಬುರಗಿಯಲ್ಲಿ ಹೇಳಿದ್ದರು.