ಮುತಾಲಿಕ್ ಆರೋಗ್ಯ ಹದಗೆಟ್ರೆ ಅಷ್ಟೆ, ಸಿದ್ದುಗೆ ಎಚ್ಚರಿಕೆ!
ಗದಗ, ನವೆಂಬರ್,16 : ಪೊಲೀಸರ ಅಚಾತುರ್ಯದಿಂದ ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ ಮುತಾಲಿಕರ ಆರೋಗ್ಯಕ್ಕೆ ತೊಂದರೆಯಾದಲ್ಲಿ ಇಡೀ ರಾಜ್ಯದಲ್ಲಿ ಅವ್ಯವಸ್ಥೆ ತಲೆದೋರಲಿದೆ ಎಂದು ಗದಗ ಜಿಲ್ಲಾ ಶ್ರೀರಾಮ ಸೇನೆ ಸಂಚಾಲಕ ರಾಜು ಖಾನಪ್ಪನವರ ಎಚ್ಚರಿಸಿದ್ದಾರೆ.
ಪ್ರಮೋದ್ ಮುತಾಲಿಕರನ್ನು ಬಂಧಿಸಿದ ಪೊಲೀಸರ ಕ್ರಮ ಖಂಡಿಸಿ ಶನಿವಾರ ನಗರದಲ್ಲಿ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ರಾಜು ಖಾನಪ್ಪನವರ, 'ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದ ನಂತರ ಹಿಂದೂ ಸಂಘಟನೆಗಳ ಕಾರ್ಯಕರ್ತರು ಮತ್ತು ನಾಯಕರಿಗೆ ತೀವ್ರ ತೊಂದರೆ ನೀಡಲಾಗುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮುಸ್ಲಿಂ ನೀತಿ ಅನುಸರಿಸುತ್ತಿದ್ದಾರೆ' ಎಂದು ದೂರಿದರು.[ಮುತಾಲಿಕ್ ವಿರುದ್ಧ ಎಫ್ ಐಆರ್ ದಾಖಲಿಸಿದ ಕಾಂಗ್ರೆಸ್]

'ಟಿಪ್ಪು ಸುಲ್ತಾನ ಜನ್ಮದಿನ ನವೆಂಬರ್ 20 ರಂದಿದೆ. ಆದರೆ ಮುಖ್ಯಮಂತ್ರಿಗಳು ಜನರ ಗಮನವನ್ನು ಸಚಿವ ಎಚ್.ಆಂಜನೇಯ ಅವರ ಪತ್ನಿ ವಿಜಯಾ ಅವರ ಭ್ರಷ್ಟಾಚಾರ ಪ್ರಕರಣದಿಂದ ಬೇರೆ ಕಡೆಗೆ ಸೆಳೆಯುವ ಹುನ್ನಾರದಿಂದ ಟಿಪ್ಪು ಜಯಂತಿಯನ್ನು ಸರ್ಕಾರದಿಂದ ನೆರವೇರಿಸಿ ವಿವಾದ ಸೃಷ್ಟಿಸಿದ್ದಾರೆ. ಸಾಹಿತಿ ಗಿರೀಶ ಕಾರ್ನಾಡರಿಂದ ವಿವಾದಾತ್ಮಕ ಹೇಳಿಕೆಯನ್ನು ಮುಖ್ಯಮಂತ್ರಿಯವರೇ ಹೇಳಿಸಿದ್ದಾರೆ' ಎಂದು ಆರೋಪಿಸಿದರು.[ಬೆಂಗಳೂರು ವಿಮಾನ ನಿಲ್ದಾಣಕ್ಕೆ ಟಿಪ್ಪು ಹೆಸರಿಡಿ: ಕಾರ್ನಾಡ್]
ಟಿಪ್ಪು ಜಯಂತಿ ವಿರೋಧಿಸಿ ಮಡಿಕೇರಿಯಲ್ಲಿ ನಡೆದ ಬಂದ್ ನ ಅವಧಿಯಲ್ಲಿ ಸಾವನ್ನಪ್ಪಿದ ವಿಶ್ವ ಹಿಂದೂ ಪರಿಷತ್ತಿನ ಕುಟ್ಟಪ್ಪನ ಪ್ರಕರಣವನ್ನು ಸರ್ಕಾರ ಕೂಡಲೇ ಸಿಬಿಐ ತನಿಖೆಗೆ ಒಳಪಡಿಸಬೇಕು. ಮುಸ್ಲಿಂರ ಹಲ್ಲೆಯಿಂದ ಸಾವನ್ನಪ್ಪಿದ ಕುಟ್ಟಪ್ಪನ ಕುಟುಂಬ ವರ್ಗಕ್ಕೆ ಕೂಡಲೇ 50ಲಕ್ಷ ರೂಪಾಯಿಗಳ ಪರಿಹಾರವನ್ನು ನೀಡಬೇಕೆಂದು ಆಗ್ರಹಿಸಿದರು. ಇದೇ ಸಂದರ್ಭದಲ್ಲಿ ಮಹಾತ್ಮಾಗಾಂಧಿ ವರ್ತುಳದಲ್ಲಿ ಒಂದು ಗಂಟೆ ಕಾಲ ರಸ್ತೆ ತಡೆ ನಡೆಸಿದ ಶ್ರೀರಾಮ ಸೇನೆ ಕಾರ್ಯಕರ್ತರು ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.
-
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ












Click it and Unblock the Notifications