Siddheshwar Swamiji: ಈ ಉದ್ಯಾನಕ್ಕೆ ಶ್ರೀ ಸಿದ್ಧೇಶ್ವರ ಸ್ವಾಮೀಜಿ ಹೆಸರು ಇಟ್ಟ ಸರ್ಕಾರ
ಬೆಂಗಳೂರು, ಅಕ್ಟೋಬರ್ 16: ಕರ್ನಾಟಕದ ಮೂರನೇ ಬೃಹತ್ ಕೆರೆ ವಿಜಯಪುರದ ಮಮದಾಪುರ ಕೆರೆ. ಇಲ್ಲಿ ಒಟ್ಟು 2 ಲಕ್ಷ ಗಿಡಗಳನ್ನು ನೆಡಲು ಸರ್ಕಾರ ಪ್ಲಾನ್ ಮಾಡಿಕೊಂಡಿದೆ. ಇನ್ನು ಇಲ್ಲಿನ ಮಮದಾಪುರ ಉದ್ಯಾನಕ್ಕೆ ವಿಜಯಪುರದ ಜ್ಞಾನಯೋಗಾಶ್ರಮದ ಪೂಜ್ಯ ಶ್ರೀ ಸಿದ್ದೇಶ್ವರ ಸ್ವಾಮೀಜಿ ಅವರ ಹೆಸರನ್ನು ರಾಜ್ಯ ಸರ್ಕಾರ ಇಟ್ಟಿದೆ ಎಂದು ಕೈಗಾರಿಕೆ ಸಚಿವರು ಆದ ಜಿಲ್ಲಾ ಉಸ್ತುವಾರಿ ಸಚಿವ ಎಂಬಿ ಪಾಟೀಲ ಮಾಹಿತಿ ನೀಡಿದರು.
ವಿಜಯಪುರ ಜಿಲ್ಲೆಯ ಮಮದಾಪುರದಲ್ಲಿ ಇರುವ 1,494.38 ಎಕರೆ ವಿಸ್ತೀರ್ಣದ 'ಜೀವವೈವಿಧ್ಯ ಉದ್ಯಾನ'ಕ್ಕೆ ಶ್ರೀ ಸಿದ್ಧೇಶ್ವರ ಸ್ವಾಮೀಜಿಗಳ ಹೆಸರನ್ನು ಸರ್ಕಾರದಿಂದ ಅಧಿಕೃತವಾಗಿ ಇಡಲಾಗಿದೆ ಎಂದ ಬುಧವಾರ ತಿಳಿಸಿದರು. ಉದ್ಯಾನಕ್ಕೆ ಸ್ವಾಮೀಜಿ ಹೆಸರು ಇಟ್ಟಿದ್ದಕ್ಕೆ ಸಚಿವರು ಹರ್ಷ ವ್ಯಕ್ತಪಡಿಸಿದರು.

ಪೂಜ್ಯ ಶ್ರೀ ಸಿದ್ಧೇಶ್ವರ ಸ್ವಾಮೀಜಿಗಳು ತಮಗೆ ಸದಾ ಮಾರ್ಗದರ್ಶಕರಾಗಿದ್ದರು. ರಾಜ್ಯ ಸರ್ಕಾರದ ಈ ನಿರ್ಧಾರದಿಂದ ಅತೀವ ಸಂತಸವಾಗಿದೆ. ಇನ್ನುಮುಂದೆ ಮಮದಾಪುರ ಉದ್ಯಾನವು 'ಶ್ರೀ ಸಿದ್ಧೇಶ್ವರ ಸ್ವಾಮೀಜಿ ಜೀವವೈವಿಧ್ಯ ಪರಂಪರೆ ತಾಣ' ಎಂದು ಕರೆಯಲ್ಪಡುತ್ತದೆ.
ಮಮದಾಪುರ ಉದ್ಯಾನವು ನೀರು ಮತ್ತು ಮಣ್ಣಿನ ಸಂರಕ್ಷಣೆ, ಪ್ರಾಣಿ ಮತ್ತು ಪಕ್ಷಿ ಸಂಕುಲಗಳ ಆವಾಸ, ಸ್ಥಳೀಯರ ಜೀವನಕ್ಕೆ ಆಸರೆಯಾಗುರುವ ಅನನ್ಯ ತಾಣವಾಗಿದೆ. ಇದಕ್ಕೆ ಶ್ರೀಗಳ ಹೆಸರಿಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅರಣ್ಯ ಸಚಿವ ಈಶ್ವರ ಖಂಡ್ರೆ ಅವರಿಗೆ ಮನವಿ ಮಾಡಿಕೊಂಡಿದ್ದೆ. ಇದಕ್ಕೆ ಅವರು ಕ್ಷಿಪ್ರವಾಗಿ ಸ್ಪಂದಿಸಿದ್ದಾರೆ ಎಂದು ಅವರಿಗೆ ಸಚಿವರು ಕೃತಜ್ಞತೆ ಸಲ್ಲಿಸಿದರು.
ವಿಜಯಪುರ ಕೆರೆ ಅಭಿವೃದ್ಧಿಗೆ ಪಣ
ರಾಜ್ಯದಲ್ಲಿ ಮೂರನೇ ಅತೀ ದೊಡ್ಡ ಕೆರೆ ಮಮದಾಪುರ ಕೆರೆ ವಿಶಾಲವಾಗಿದೆ. ಇಲ್ಲಿ ಸುಮಾರು ಎರಡು ಲಕ್ಷ ಸಸಿಗಳನ್ನು ನೆಟ್ಟು ಬೆಳೆಸಲು ಹಸಿರಿಗೆ ಕೊಡುಗೆ ನೀಡಲು ಸರ್ಕಾರ ಪ್ಲಾನ್ ಮಾಡಿಕೊಂಡಿದೆ. ಈಗಾಗಲೇ 60000ಕ್ಕೂ ಹೆಚ್ಚು ಗಿಡಗಳನ್ನು ನೆಡಲಾಗಿದೆ. ಇಲ್ಲಿ ಬೃಹತ್ ಉದ್ಯಾನ ಸೃಷ್ಟಿ ಮಾಡಲಾಗಿದೆ.
ಮಲೆನಾಡಿನಲ್ಲಿ ಬೆಳೆಯುವ ಅಕ್ಕಿ ಸೇರಿದಂತೆ ವಿವಿಧ ರೀತಿಯ ವ್ಯವಸಾಯ ಈ ವಿಜಯಪುರ ಜಿಲ್ಲೆಯಲ್ಲಿ ಸಹ ನಡೆಯಬೇಕು ಎಂಬ ಉದ್ದೇಶ ಸರ್ಕಾರದ್ದಾಗಿದೆ. ಈ ಕೆರೆಯಲ್ಲಿ ಬಾಸುಮತಿ ಅಕ್ಕಿ ಸಹಿತ ವಿವಿಧ ಬೆಳೆಗಳನ್ನು ಬೆಳೆಯಲು ಈ ಕೆರೆ ಸಾಕಷ್ಟು ಅನುಕೂಲವಾಗಿತ್ತು. ನಂತರ ಹಲವು ವರ್ಷಗಳಿಂದ ಕೆರೆ ಬತ್ತಿ ಹೋಗಿದೆ. ಜಾಲಿ ಗಿಡ ಬೆಳೆದು ಹಾಳಾಗಿತ್ತು. ಇದೀಗ ಅಲ್ಲಿ ಲಕ್ಷಾಂತರ ಗಿಡಗಳನ್ನು ನೆಡಲಾಗುತ್ತಿದೆ ಎಂದು ಈ ಹಿಂದೆ ಸಚಿವ ಎಂಬಿ ಪಾಟೀಲ್ ತಿಳಿಸಿದ್ದರು.
-
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್












Click it and Unblock the Notifications