'ಪ್ರಧಾನಿ ನರೇಂದ್ರ ಮೋದಿ ಅವರಿಗೂ ಇದೇ ರೀತಿ ಪೆನ್ ಕೊಟ್ಟಿದ್ದೆ'
ಬೆಂಗಳೂರು, ಫೆ. 08: ಪ್ರಮಾಣವಚನ ಸ್ವೀಕರಿಸಿದ ಬಳಿಕ ನೂತನ ಸಚಿವ ಎಸ್.ಟಿ. ಸೋಮಶೇಖರ್ ಅವರು ಮೊದಲ ಬಾರಿ ಆರ್ಟ್ ಆಫ್ ಲಿವಿಂಗ್ನ ಶ್ರೀ ರವಿಶಂಕರ್ ಗುರೂಜಿ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದುಕೊಂಡಿದ್ದಾರೆ. ಈ ಹಿಂದೆ ಉಪ ಚುನಾವಣೆ ಬಳಿಕವೂ ಸಚಿವ ಎಸ್.ಟಿ. ಸೋಮಶೇಖರ್ ಅವರು ಆರ್ಟ್ ಆಫ್ ಲಿವಿಂಗ್ ಆಶ್ರಮದಲ್ಲಿ ಎರಡು ದಿನಗಳ ಕಾಲ ವಾಸ್ತವ್ಯ ಮಾಡಿ ಧ್ಯಾನ ಮಾಡಿದ್ದರು. ಇದೀಗ ಮಂತ್ರಿಯಾದ ಬಳಿಕ ಮತ್ತೆ ಶ್ರೀ ರವಿಶಂಕರ್ ಗುರೂಜಿ ಅವರನ್ನು ಭೇಟಿ ಮಾಡಿ ಚರ್ಚೆ ಮಾಡಿದ್ದಾರೆ.
ನೂತನ ಸಚಿವ ಎಸ್.ಟಿ. ಸೋಮಶೇಖರ್ ಅವರು ಶ್ರೀ ರವಿಶಂಕರ್ ಗುರೂಜಿ ಅವರನ್ನು ಭೇಟಿ ಮಾಡಿದ ಸಂದರ್ಭದಲ್ಲಿ ಗುರೂಜಿ ಉಡುಗೊರೆಯೊಂದನ್ನು ಕೊಟ್ಟಿದ್ದಾರೆ. ಉಡುಗೊರೆ ಪಡೆದುಕೊಂಡ ಬಳಿಕ ಸಚಿವ ಎಸ್.ಟಿ. ಸೋಮಶೇಖರ್ ಅತ್ಯುತ್ತಮ ಖಾತೆ ಪಡೆಯುವ ವಿಶ್ವಾಸದಲ್ಲಿದ್ದಾರಂತೆ, ಅದಕ್ಕೆ ಕಾರಣವಾಗಿದ್ದು ಉಡುಗೋರೆ ಜೊತೆಗೆ ಶ್ರೀ ರವಿಶಂಕರ್ ಗುರೂಜಿ ಅವರು ಮಾಡಿರುವ ಆಶೀರ್ವಾದ.
ಶ್ರೀ ರವಿಶಂಕರ್ ಗುರೂಜಿ ಅವರು ಸಚಿವ ಎಸ್.ಟಿ. ಸೋಮಶೇಖರ್ ಅವರಿಗೆ ಪೆನ್ ನೀಡಿ ಆಶೀರ್ವದಿಸಿದ್ದಾರೆ. ಜೊತೆಗೆ ಈ ಪೆನ್ ನಿಮ್ಮ ಬಳಿಯೆ ಇಟ್ಟುಕೊಳ್ಳಿ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೂ ಇದೇ ರೀತಿಯ ಪೆನ್ ಕೊಟ್ಟಿದ್ದೆ. ಅವರೂ ಇಟ್ಟುಕೊಂಡಿದ್ದಾರೆ. ನೀವೂ ಇಟ್ಟುಕೊಳ್ಳಿ. ನಿಮಗೂ ಒಳ್ಳೇಯದಾಗುತ್ತದೆ ಎಂದು ಆಶೀರ್ವಾದ ಮಾಡಿದ್ದಾರೆ.

ಶ್ರೀ ಶ್ರೀ ರವಿ ಶಂಕರ್ ಗುರೂಜಿ ಭೇಟಿ ಬಳಿಕ ಎಸ್ಟಿಎಸ್ ಹೇಳಿಕೆ: ಶ್ರೀ ಶ್ರೀ ರವಿಶಂಕರ್ ಗುರೂಜಿ ಭೇಟಿ ಬಳಿಕ ಮಾತನಾಡಿರುವ ಸಚಿವ ಎಸ್ಟಿಎಸ್ ಅವರು, ಸೋಮವಾರ ನೂತನ ಸಚಿವರಿಗೆ ಖಾತೆ ಹಂಚುತ್ತೇವೆ ಎಂದು ಸಿಎಂ ಹೇಳಿದ್ದಾರೆ ಎಂದಿದ್ದಾರೆ. ಸಿಎಂ ಯಡಿಯೂರಪ್ಪ ಅವರ ಜೊತೆ ಮಾತುಕತೆ ನಡೆಸಿದ್ದೇನೆ. ಖಾತೆ ಬಗ್ಗೆ ಅವರ ಮೇಲೆ ಯಾವುದೇ ಒತ್ತಡ ಹೇರಿಲ್ಲ.

ಬಿಜೆಪಿ ಕಚೇರಿ ಸಿಬ್ಬಂದಿ ಸಚಿವ ಗೋಪಾಲಯ್ಯರಿಗೆ ಹೇಳಿದ್ದು...
ನಾನು ಬೆಂಗಳೂರು ಅಭಿವೃದ್ದಿ ಖಾತೆ ಕೇಳಿದ್ದೆ, ನನ್ನ ಆಸಕ್ತಿ ಕ್ಷೇತ್ರ ಅನ್ನೋ ಕಾರಣಕ್ಕಾಗಿ ಕೇಳಿದ್ದೆ. ಖಾತೆ ಮುಖ್ಯ ಅಲ್ಲ, ನಾವು ಹೇಗೆ ಕೆಲಸ ಮಾಡುತ್ತೇವೆ ಅನ್ನುವುದು ಮುಖ್ಯ. ಹಿಂದೆ ಬಸವಪ್ಪನವರಿಗೆ ಪರಿಸರ ಖಾತೆ ಕೊಟ್ಟಿದ್ದರು. ಆ ಖಾತೆಯಲ್ಲಿಯೆ ಅವರು ನಾಡಿನ ಜನರು ಮೆಚ್ಚುವಂತಹ ಕೆಲಸ ಮಾಡಿ ತೋರಿಸಿದ್ದರು. ಯಾವುದೇ ಖಾತೆ ಕೊಟ್ಟರೂ ಅತ್ಯುತ್ತಮವಾಗಿ ಕೆಲಸ ಮಾಡುತ್ತೇನೆ ಎಂದು ಸಚಿವ ಸೋಮಶೇಖರ್ ಹೇಳಿದ್ದಾರೆ.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications