ಉದ್ಯಮಿ, ಚಿತ್ರ ನಿರ್ಮಾಪಕ ಹರಿ ಖೋಡೆ ನಿಧನ
ಶ್ರೀಹರಿ ಖೋಡೆ ಸಿನಿಮಾಗಳನ್ನು ಸಹ ನಿರ್ಮಿಸಿದ್ದರು. ಕವನಗಳನ್ನು ರಚಿಸಿದ್ದರು. ರಾಜಕೀಯದ ನಂಟು ಸಹ ಇತ್ತು.
ಬೆಂಗಳೂರು, ನವೆಂಬರ್ 1: ಉದ್ಯಮಿ, ಚಿತ್ರ ನಿರ್ಮಾಪಕ ಶ್ರೀಹರಿ ಎಲ್. ಖೋಡೆ (77) ಸೋಮವಾರ ರಾತ್ರಿ ಮಲ್ಲಿಗೆ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಕಳೆದ ಒಂದು ತಿಂಗಳಿಂದ ಅನಾರೋಗ್ಯದ ಕಾರಣಕ್ಕೆ ಆಸ್ಪತ್ರೆಗೆ ದಾಖಲಾಗಿದ್ದರು. ನೂರು ವರ್ಷಕ್ಕೂ ಹಳೆಯದಾದ ಖೋಡೆ ಇಂಡಿಯಾ ಲಿಮಿಟೆಡ್ ನ ಉಪಾಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕರಾಗಿದ್ದರು ಹರಿ ಖೋಡೆ.
ಖೋಡೆ ಇಂಡಿಯಾ ಹಾಗೂ ಯುನೈಟೆಡ್ ಬ್ರಿವರೀಸ್ ಎರಡೂ ಬೆಂಗಳೂರು ಮೂಲದ, ರಾಜ್ಯದಲ್ಲೇ ಹೆಸರಾದ ಮದ್ಯ ತಯಾರಿಕೆ ಕಂಪನಿಗಳು. ಖೋಡೆ ಬ್ರ್ಯಾಂಡ್ ಗಳನ್ನು ಯುರೋಪ್ ಹಾಗೂ ಕೆನಡಾಗೆ ರಫ್ತು ಮಾಡುವ ಮೂಲಕ ವಿಸ್ತರಣೆಗೆ ಮುಂದಾಗಲಾಗಿತ್ತು.

ಶ್ರೀಹರಿ ಖೋಡೆ ಸಿನಿಮಾಗಳನ್ನು ಸಹ ನಿರ್ಮಿಸಿದ್ದರು. ಕವನಗಳನ್ನು ರಚಿಸಿದ್ದರು. ರಾಜಕೀಯದ ನಂಟು ಸಹ ಇತ್ತು. ದೇವರಾಜ ಅರಸ್, ರಾಮಕೃಷ್ಣ ಹೆಗಡೆ ಮತ್ತು ಜೆ.ಎಚ್.ಪಟೇಲ್ ಸೇರಿ ಹಲವು ಮುಖ್ಯಮಂತ್ರಿಗಳಿಗೆ ಅವರು ಹತ್ತಿರದವರಾಗಿದ್ದರು. 2004ರಲ್ಲಿ ಅರಸು ಸಂಯುಕ್ತ ಪಕ್ಷವನ್ನು ಸ್ಥಾಪಿಸಿದ್ದರು. ಅದರೆ ಅದು ಯಶಸ್ಸು ಕಾಣಲಿಲ್ಲ.
ಹರಿ ಖೋಡೆ ಸಂತ ಶಿಶುನಾಳ ಷರೀಫ, ಮೈಸೂರು ಮಲ್ಲಿಗೆ, ನಾಗಮಂಡಲ ಸೇರಿದಂತೆ ನಾಲ್ಕು ಸಿನಿಮಾಗಳನ್ನು ನಿರ್ಮಿಸಿದ್ದರು. ಎಲ್ಲವೂ ಟಿ.ಎಸ್.ನಾಗಾಭರಣ ನಿರ್ದೇಶಿಸಿದ್ದರು. ಖೋಡೆ ಅವರ ನಿರ್ಮಾಣದ ಕೊನೆ ಚಿತ್ರ 'ಅಲ್ಲಮ' ಇನ್ನೂ ಬಿಡುಗಡೆ ಆಗಬೇಕಿದೆ. ಅವರ ನಿರ್ಮಾಣದ ಮೂರು ಸಿನಿಮಾಗಳಿಗೆ ಪ್ರಶಸ್ತಿ ಬಂದಿದ್ದವು. ಗಾಯಕ ಸಿ.ಅಶ್ವಥ್ ಅವರು ಖೋಡೆ ರಚಿಸಿದ್ದ ಕೆಲವು ಕವನಗಳಿಗೆ ಸಂಗೀತ ನೀಡಿದ್ದರು.
ಹರಿ ಖೋಡೆ ಅವರಿಗೆ ಪತ್ನಿ, ಮೂವರು ಗಂಡುಮಕ್ಕಳು, ಇಬ್ಬರು ಹೆಣ್ಣುಮಕ್ಕಳು ಇದ್ದಾರೆ.
-
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ












Click it and Unblock the Notifications