ಅತ್ಯಾಚಾರ ಆರೋಪಿ ಶಾಸಕ ಜೀವರಾಜ್ ನಾಪತ್ತೆ

2010ರಲ್ಲಿ ಯುವತಿಯ ಅಪಹರಣ/ ಅತ್ಯಾಚಾರ ಪ್ರಕರಣದಲ್ಲಿ ಶಾಸಕ ಜೀವರಾಜ್ ಆರೋಪ ಎದುರಿಸುತ್ತಿದ್ದಾರೆ. ತಾಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶೋಭಿತ್ ಈ ದೂರು ದಾಖಲಿಸಿದ್ದಾರೆ. ನಾಪತ್ತೆಯಾಗಿರುವ ಆರೋಪಿ ಶಾಸಕ ಜೀವರಾಜ್ ಪತ್ತೆಗಾಗಿ ಶೋಧ ಕಾರ್ಯ ನಡೆಸಿ, ಅವರನ್ನು ಪತ್ತೆಹಚ್ಚಿಕೊಡುವಂತೆ ದೂರಿನಲ್ಲಿ ಪೊಲೀಸರನ್ನು ಕೋರಿದ್ದಾರೆ.
ಶಾಸಕ ಜೀವರಾಜ್ ಕಳೆದ 10 ದಿನಗಳಿಂದ ಕಾಣೆಯಾಗಿದ್ದಾರೆ. ತಾಲೂಕಿನಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆದಿಲ್ಲ. ಕೊಪ್ಪದ ಮೇಗೂರು ಕೃಷಿಕರು ಅನೇಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ ಎಂದು ಶೋಭಿತ್ ದೂರಿದ್ದಾರೆ.
ಜಿಲ್ಲಾಧಿಕಾರಿ, ಪ್ರಾದೇಶಿಕ ಸಂಸದರು, ಜಿಲ್ಲಾ ಉಸ್ತುವಾರಿ ಸಚಿವರು ಶೃಂಗೇರಿ ಭಾಗದ ರೈತ ಸಮಸ್ಯೆಗಳನ್ನು ಪರಿಹರಿಸಲು ಸಾರ್ವಜನಿಕ ಸಭೆಗಳನ್ನು ಆಯೋಜಿಸುತ್ತಿದ್ದಾರೆ. ಆದರೆ ಅಲ್ಲೆಲ್ಲೂ ಸ್ಥಳೀಯ ಶಾಸಕರ ಸುಳಿವಿಲ್ಲ. ಇದರಿಂದ ಜನರಲ್ಲಿ ಸಂದೇಹ ಎದ್ದಿದೆ. ಆದ್ದರಿಂದ ನಮ್ಮ ಶಾಸಕರು ಎಲ್ಲೇ ಇದ್ದರೂ ಅವರನ್ನು ಹುಡುಕಿಕೊಡಬೇಕಾಗಿ ಪ್ರಾರ್ಥನೆ ಎಂದು ಕಾಂಗ್ರೆಸ್ ನಾಯಕ ಶೋಭಿತ್ ಪೊಲೀಸರಲ್ಲಿ ಮನವಿ ಮಾಡಿದ್ದಾರೆ.
ಕೊಪ್ಪ ಪೊಲೀಸರು ನವೆಂಬರ್ 8ರಂದು ಶೃಂಗೇರಿಯ ಬಿಜೆಪಿ ಶಾಸಕ ಜೀವರಾಜ್ ಅವರ ವಿರುದ್ಧ ಯುವತಿಯೊಬ್ಬರ ಅಪಹರಣ, ಅತ್ಯಾಚಾರ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇದೇ ಜಿಲ್ಲೆಯ 23 ವರ್ಷದ ಬಾಧಿತ ಯುವತಿಯು ಶಾಸಕ ಜೀವರಾಜ್ ಅವರು ತಮ್ಮ ಇಬ್ಬರು ಸಹವರ್ತಿಗಳ ನೆರವಿನಿಂದ ಕೆಸಕಿ ಗ್ರಾಮದಲ್ಲಿ ವಾಹನದಲ್ಲಿ ನನ್ನನ್ನು ಅಪಹರಿಸಿ, ಅತ್ಯಾಚಾರಕ್ಕೀಡುಮಾಡಿದರು ಎಂದು ದೂರಿನಲ್ಲಿ ಹೇಳಿದ್ದಾಳೆ. ಆದರೆ ಶಾಸಕ ಜೀವರಾಜ್ ಅವರು ಈ ಆರೋಪವನ್ನು ಅಲ್ಲಗಳೆದಿದ್ದು, ಹಣ ಕೀಳಲು ನನ್ನ ವಿರುದ್ಧ ನಡೆದಿರುವ ಪಿತೂರಿ ಇದಾಗಿದೆ ಎಂದು ಪ್ರತಿಕ್ರಿಯಿಸಿದ್ದಾರೆ.
-
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
ಕನ್ನಡತಿ ಶ್ರೇಯಾಂಕಾ ಪಾಟೀಲ್, ಮಂಧಾನ ಜೊತೆ ಆರ್ಸಿಬಿ ಪಂದ್ಯ ವೀಕ್ಷಣೆ: ಕ್ರೀಡಾ ಸ್ಪೂರ್ತಿ ಮೆರೆದ ಜೆಮಿಮಾ ರೊಡ್ರಿಗಸ್ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral












Click it and Unblock the Notifications