ಪ್ರತ್ಯೇಕ ರಾಜ್ಯ: ಎಚ್ಡಿಕೆ ವಿರುದ್ಧ ಶ್ರೀರಾಮುಲು ಆಕ್ರೋಶ
Recommended Video

ಮೊಳಕಾಲ್ಮೂರು, ಜುಲೈ 30: "ಮತ ನೀಡಲಿಲ್ಲವೆಂಬ ಕಾರಣಕ್ಕೆ ಉತ್ತರ ಕರ್ನಾಟಕವನ್ನು ಅವಹೇಳನ ಮಾಡುತ್ತಿರುವ ಮುಖ್ಯಮಂತ್ರಿಗಳು ಸೇಡಿನ ರಾಜಕಾರಣ ಮಾಡುತ್ತಿದ್ದಾರೆ" ಎಂದು ಬಿಜೆಪಿ ಮುಖಂಡ, ಮೊಳಕಾಲ್ಮೂರು ಶಾಸಕ ಶ್ರೀರಾಮುಲು ಹೇಳಿದ್ದಾರೆ.
ಕರ್ನಾಟಕದಲ್ಲಿ ಜೋರುದನಿಯಲ್ಲಿರುವ ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯದ ಕೂಗಿಗೆ ಪರ ವಿರೋಧದ ಚರ್ಚೆ ನಡೆಯುತ್ತಲೇ ಇದೆ.
"ಉತ್ತರ ಕರ್ನಾಟಕದ ಬಹುಪಾಲು ಜಿಲ್ಲೆಗಳು ನಿರ್ಲಕ್ಷ್ಯಕ್ಕೊಳಗಾಗುತ್ತಿರುವುದು ಹೌದು, ಪ್ರತ್ಯೇಕ ರಾಜ್ಯದ ಹೋರಾಟಕ್ಕೆ ನನ್ನದೂ ಬೆಂಬಲವಿದೆ" ಎಂದಿದ್ದ ಶ್ರೀರಾಮುಲು ಇದೀಗ ಯೂಟರ್ನ್ ತೆಗೆದುಕೊಂಡಿದ್ದಾರೆ.
"ಅಖಂಡ ಕರ್ನಾಟಕವು ಯಾವುದೇ ಕಾರಣಕ್ಕೂ ವಿಭಜನೆಯಾಗಬಾರದು ಎನ್ನುವುದು ನನ್ನ ಸ್ಪಷ್ಟ ನಿಲುವು. ರಾಜ್ಯ ಒಡೆಯಲು ಕೆಲವು ಸಂಘಟನೆಗಳು ಕರೆ ನೀಡಿರುವ ಬಂದ್ಗೆ ಬೆಂಬಲ ನೀಡುವ ಪ್ರಶ್ನೆಯೇ ಇಲ್ಲ" ಎಂದು ಅವರು ಟ್ವೀಟ್ ಮಾಡಿದ್ದಾರೆ.
|
ಸಿಎಂ ವಿರುದ್ಧ ಆಕ್ರೋಶ
"ಸಿಎಂ ಕುಮಾರಸ್ವಾಮಿಯವರು ಉತ್ತರ ಕರ್ನಾಟಕಕ್ಕೆ ನಿರಂತರವಾಗಿ ಮಾಡುತ್ತಿರುವ ಅನ್ಯಾಯವೇ ಇಂದಿನ ಈ ಪರಿಸ್ಥಿತಿಗೆ ನೇರ ಕಾರಣ. ಮತ ನೀಡಲಿಲ್ಲವೆಂಬ ಕಾರಣಕ್ಕೆ ಉತ್ತರ ಕರ್ನಾಟಕವನ್ನು ಅವಹೇಳನ ಮಾಡುತ್ತಿರುವ ಮುಖ್ಯಮಂತ್ರಿಗಳು ಸೇಡಿನ ರಾಜಕಾರಣ ಮಾಡುತ್ತಿದ್ದಾರೆ. ಸಮ್ಮಿಶ್ರ ಸರ್ಕಾರ ಬಗೆಯುತ್ತಿರುವ ಈ ದ್ರೋಹವನ್ನು ಮುಚ್ಚಿಡಲು ಕೆಲವು ದುಷ್ಟಶಕ್ತಿಗಳು ನನ್ನ ವಿರುದ್ಧ ಅಪಪ್ರಚಾರ ಮಾಡುತ್ತಿವೆ ಎಂದು ಅವರು ಆಕ್ರೋಶದಿಂದ ಟ್ವೀಟ್ ಮಾಡಿದ್ದಾರೆ.

ಬಹಿರಂಗವಾಗಿಯೇ ಬೆಂಬಲ ಸೂಚಿಸಿದ್ದ ಶ್ರೀರಾಮುಲು
ಜುಲೈ 11 ರಂದು ವಿಧಾನಸಭೆಯಲ್ಲಿ ಬಜೆತ್ ಕುರಿತು ಚರ್ಚೆ ನಡೆಯುತ್ತಿದ್ದ ವೇಳೆಯಲ್ಲಿ ಮಾತನಾಡಿದ್ದ ಶ್ರೀರಾಮುಲು, 'ಉತ್ತರ ಕರ್ನಾಟಕವನ್ನು ಸರ್ಕಾರ ನಿರ್ಲಕ್ಷಿಸಿದೆ, ಹಾಗಾಗಿ ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ಹೋರಾಟಕ್ಕೆ ನನ್ನ ಬೆಂಬಲವಿದೆ' ಎಂದು ಘಂಟಾಘೋಷವಾಗಿ ಹೇಳಿದ್ದರು. ಆದರದೆ ಅವರ ಹೇಳಿಕೆಯನ್ನು ಪಕ್ಷದ ರಾಜ್ಯಾಧ್ಯಕ್ಷ ಬಿ ಎಸ್ ಯಡಿಯೂರಪ್ಪ ಸೇರಿದಂತೆ ಹಲವು ಹಿರಿಯರು ವಿರೋಧಿಸಿದ್ದರು. ಪಕ್ಷದ ನಾಯಕರೇ ಶ್ರೀರಾಮುಲು ಹೇಳಿಕೆಗೆ ವ್ಯಕ್ತಿರಿಕ್ತವಾದ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ಅವರೀಗ ಯೂಟರ್ನ್ ತೆಗೆದುಕೊಂಡಿದ್ದಾರೆ.
|
ಅಖಂಡತೆಯ ಮೇಲೆ ಅಪಾರ ಗೌರವ
ಕರ್ನಾಟಕದ ಅಖಂಡತೆಯಲ್ಲಿ ನನಗೆ ಅಪಾರ ಗೌರವವಿದೆ. ಉತ್ತರ-ದಕ್ಷಿಣವೆಂಬ ಭೇದವಿಲ್ಲದೇ ಸಮಾನವಾಗಿ ಕಾಣಬೇಕೆಂದು ಬಯಸುತ್ತೇನೆ. ಸಮ್ಮಿಶ್ರ ಸರಕಾರವು ಉತ್ತರ ಕರ್ನಾಟಕಕ್ಕೂ ಆದ್ಯತೆ ನೀಡುವ ಮೂಲಕ ಕರ್ನಾಟಕದ ಏಕೀಕರಣವನ್ನು ಗೌರವಿಸಲಿ.

ಸಿದ್ದು-ಗುದ್ದು!
ಶ್ರೀರಾಮುಲು ಅವರು ಪ್ರತ್ಯೇಕ ರಾಜ್ಯದ ಹೋರಾಟವನ್ನು ಬೆಂಬಲಿಸಿ, ರಾಜ್ಯವನ್ನು ವಿಭಜಿಸಲು ಹೊರಟಿದ್ದಾರೆ ಎಂದು ದೂರಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶ್ರೀರಾಮುಲು ಅವರನ್ನು ತರಾಟೆಗೆ ತೆಗೆದುಕೊಂಡಿದ್ದರು. ಕರ್ನಾಟಕ ಏಕೀಕರಣದ ಇತಿಹಾಸವೇ ಗೊತ್ತಿಲ್ಲದ ಶ್ರೀರಾಮುಲು ಪ್ರತ್ಯೇಕ ರಾಜ್ಯದ ಬೇಡಿಕೆ ಇಡುತ್ತಿದ್ದಾರೆ. ಅವರ ಬೇಡಿಗೆ ಮೂರ್ಖತನದ್ದು ಎಂದು ಲೇವಡಿ ಮಾಡಿದ್ದರು.
-
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ












Click it and Unblock the Notifications