ಬಿಜೆಪಿಯನ್ನ ಮತ್ತೆ ಅಧಿಕಾರಕ್ಕೆ ತರುತ್ತೇವೆ: ರೆಡ್ಡಿ ಬ್ರದರ್ಸ್
ಬಳ್ಳಾರಿ, ಮಾರ್ಚ್5: ಬಿಎಸ್ಸಾರ್ ಕಾಂಗ್ರೆಸ್ ಸಂಸ್ಥಾಪಕ ಬಿ ಶ್ರೀರಾಮುಲು ಬಿಜೆಪಿಗೆ ಬಂದಾಯ್ತು. ಮತ್ತು ಇಂದು ಪ್ರಕಟವಾಗಿರುವ ಲೋಕಸಭಾ ಚುನಾವಣೆಗೆ ಬಳ್ಳಾರಿ ಕ್ಷೇತ್ರದಿಂದ ಬಿಜೆಪಿಯ ಅಭ್ಯರ್ಥಿಯಾಗಿ ಕಣಕ್ಕಿಳಿಯುವುದು ಖಚಿತವಾಗಿದೆ.
ಬಳ್ಳಾರಿ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ( ಬಿಎಸ್ಸಾರ್ ಕಾಂಗ್ರೆಸ್) ಹಾಲಿ ಶಾಸಕ ಶ್ರೀರಾಮುಲು ಅವರು ಬಿಜೆಪಿ ಸೇರಿದ್ದು, ಲೋಕಸಭಾ ಚುನಾವಣೆಗೆ ಸ್ಪರ್ಧಿಸುವುದರ ಬಗ್ಗೆ ಕೆಎಂಎಫ್ ಅಧ್ಯಕ್ಷ ಜಿ ಸೋಮಶೇಖರ ರೆಡ್ಡಿ ಇಂದು ಬಳ್ಳಾರಿಯಲ್ಲಿ ಸುದ್ದಿಗಾರರಿಗೆ ತಿಳಿಸಿದ್ದಾರೆ. ಶ್ರೀರಾಮುಲು ಸಹ ಬಿಜೆಪಿ ಸೇರುವ ತಮ್ಮ ನಿರ್ಧಾರವನ್ನು ಇದೇ ಸಂದರ್ಭದಲ್ಲಿ ಬಹಿರಂಗಪಡಿಸಿದರು.

ಶ್ರೀರಾಮುಲು ಬಿಜೆಪಿಗೆ ಬಂದಾಯ್ತು, ಬಳ್ಳಾರಿಯಿಂದ ಕಣಕ್ಕೆ
ಬಿಎಸ್ಸಾರ್ ಕಾಂಗ್ರೆಸ್ ವತಿಯಿಂದ ಇಂದು ಬಳ್ಳಾರಿಯಲ್ಲಿ ಪಕ್ಷದ ಬೂತ್ ಮಟ್ಟದ ಕಾರ್ಯಕರ್ತರ ಸಮಾವೇಶವನ್ನು ಹಮ್ಮಿಕೊಳ್ಳಲಾಗಿತ್ತು. ಅದರಲ್ಲಿ ಪಾಲ್ಗೊಂಡು ಮಾತನಾಡಿದ ಗಾಲಿ ಸೋಮಶೇಖರ ರೆಡ್ಡಿ ಅವರು, ಬಿಜೆಪಿಯೊಂದಿಗೆ ಬಿಎಸ್ಸಾರ್ ಕಾಂಗ್ರೆಸ್ ಅಧಿಕೃತವಾಗಿ ವಿಲೀನವಾಗಿದೆ ಎಂದು ಪ್ರಕಟಿಸಿದರು.

ಸಮಾವೇಶದಲ್ಲಿ ರಾಮುಲು, ಸಂಸದೆ ಶಾಂತಾ ಭಾಗಿ
ಸಮಾವೇಶದಲ್ಲಿ ಶ್ರೀರಾಮುಲು, ಸಂಸದೆ ಶಾಂತಾ ಸೇರಿದಂತೆ ಸ್ಥಳೀಯ ಮುಖಂಡರು ಪಾಲ್ಗೊಂಡಿದ್ದರು.

ಬಿಜೆಪಿ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರುತ್ತೇವೆ: ರೆಡ್ಡಿ ಬ್ರದರ್ಸ್
ಬಿಜೆಪಿ ಜತೆ ಬಿಎಸ್ಸಾರ್ ಕಾಂಗ್ರೆಸ್ ವಿಲೀನವಾಗಿರುವುದರಿಂದ ರಾಜಕೀಯದಲ್ಲಿ ಹೊಸ ಅಧ್ಯಾಯ ಪ್ರಾರಂಭವಾಗಲಿದೆ. ಲೋಕಸಭಾ ಚುನಾವಣೆಯನ್ನು ನಾವೆಲ್ಲ ಒಗ್ಗೂಡಿ ಎದುರಿಸಿ ಕೇಂದ್ರದಲ್ಲಿ ನಮ್ಮ ಬಿಜೆಪಿ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರುತ್ತೇವೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

ಶ್ರೀರಾಮುಲುಗೆ ನಾಣು ಕೃತಜ್ಞ: ಸೋಮ ರೆಡ್ಡಿ
ರಾಜಕೀಯವಾಗಿ ನನ್ನನ್ನು ಶ್ರೀರಾಮುಲು ಅವರೇ ಬೆಳೆಸಿದ್ದಾರೆ. ಅದಕ್ಕೆ ನಾನು ಅವರಿಗೆ ಕೃತಜ್ಞನಾಗಿದ್ದೇನೆ. ಶ್ರೀರಾಮುಲು ಬಳ್ಳಾರಿಯ ಬಸವನ ಗುಡ್ಡದಂತೆ. ಅವರು ರಾಜಕೀಯವಾಗಿ ಅಗಾಧವಾಗಿ ಬೆಳೆದಿದ್ದಾರೆ ಎಂದು ಸೋಮಶೇಖರ ರೆಡ್ಡಿ ಬಣ್ಣಿಸಿದರು.

ರಾಮುಲು ಹೆಚ್ಚು ಮತಗಳಿಂದ ಗೆದ್ದು ಬರುತ್ತಾರೆ: ಸೋಮಶೇಖರ ರೆಡ್ಡಿ
ಬಿಜೆಪಿ ಜತೆಗೆ ಬಿಎಸ್ಸಾರ್ ಕಾಂಗ್ರೆಸ್ ವಿಲೀನವಾಗಲು ನಮ್ಮ ಪಕ್ಷದ ಹೈಕಮಾಂಡ್ ಒಪ್ಪಿಗೆ ನೀಡಿದ್ದು, ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಶ್ರೀರಾಮುಲು ಅವರನ್ನು ನಮ್ಮ ಪಕ್ಷದಿಂದ ಬಳ್ಳಾರಿ ಕ್ಷೇತ್ರದಿಂದಲೇ ಸ್ಪರ್ಧೆಗಿಳಿಸುತ್ತೇವೆ. ಅವರು ಅತಿ ಹೆಚ್ಚು ಮತಗಳಿಂದ ಗೆದ್ದು ಬರುತ್ತಾರೆ ಎಂದೂ ಸೋಮಶೇಖರ ರೆಡ್ಡಿ ಭವಿಷ್ಯ ನುಡಿದರು.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications