ಭೂತಾರಾಧನೆ ಬಗ್ಗೆ ಗೌರವ ಇದೆ, ಕ್ಷಮೆ ಕೇಳಿದ ಸೃಜನ್
ಮಜಾ ಟಾಕೀಸ್ ಕಾರ್ಯಕ್ರಮದಲ್ಲಿ ಭೂತಾರಾಧನೆ ಬಗ್ಗೆ ಅಪಹಾಸ್ಯ ಮಾಡಿದ್ದಾರೆ ಎಂದು ಟೀಕೆಗೆ ಗುರಿಯಾಗಿದ್ದ ಸೃಜನ್ ಲೋಕೇಶ್ ಕ್ಷಮೆ ಕೇಳಿದ್ದಾರೆ.
ಬೆಂಗಳೂರು, ಮಾರ್ಚ್ 20: ಮಜಾ ಟಾಕೀಸ್ ಕಾರ್ಯಕ್ರಮದಲ್ಲಿ ಭೂತಾರಾಧನೆ ಬಗ್ಗೆ ಅಪಹಾಸ್ಯ ಮಾಡಿದ್ದಾರೆ ಎಂದು ಟೀಕೆಗೆ ಗುರಿಯಾಗಿದ್ದ ಸೃಜನ್ ಲೋಕೇಶ್ ಕ್ಷಮೆ ಕೇಳಿದ್ದಾರೆ.
ಈ ಕುರಿತು ಫೇಸ್ಬುಕ್ ನಲ್ಲಿ ಬರೆದುಕೊಂಡಿರುವ ಸೃಜನ್ ಲೋಕೇಶ್, "ಭೂತರಾಧನೆ ಬಗ್ಗೆ ನಾನು ತಮಾಷೆ ಮಾಡಿದೆ ಅಂತ ಕೆಲವು ಫೇಸ್ ಬುಕ್ ಪೋಸ್ಟ್ ಗಮನಿಸಿದೆ. ನನ್ನ ಉದ್ದೇಶ ಖಂಡಿತ ಭೂತರಾಧನೆಯನ್ನು ಅವಮಾನಿಸೋದಾಗಲೀ, ತಮಾಷೆ ಮಾಡೋದಾಗಲಿ ಆಗಿರಲಿಲ್ಲ. ನಾನು ಸಹ ಭೂತರಾಧನೆಯ ಬಗ್ಗೆ ಅಪಾರ ಗೌರವ ಇಟ್ಟುಕೊಂಡಿರುವ ದೈವಭಕ್ತ," ಎಂದು ಹೇಳಿದ್ದಾರೆ.[ಭೂತಕೋಲಕ್ಕೆ ಅಪಹಾಸ್ಯ, ಸೃಜನ್ ವಿರುದ್ಧ ಕರಾವಳಿಗರ ಆಕ್ರೋಶ]

"ನನಗೆ ಅದರ ಅರಿವಿರುವುದರಿಂದಲೇ ನಾನು 'ಭೂತರಾಧನೆ' ಪ್ರಸ್ತಾಪಿಸಿದ್ದು. ಯಾರ ಭಾವನೆಗಳಿಗೂ ಧಕ್ಕೆಯಾಗದ ಹಾಗೆ ನಿಮ್ಮನ್ನು ನಗಿಸೋ ಪ್ರಯತ್ನ ಮಾಡುತ್ತಾ ಬಂದಿದ್ದೇವೆ. ನನಗಿರಿವಿದ್ದೋ, ಅರಿವಿಲ್ಲದೆಯೋ ನನ್ನಿಂದ ತಪ್ಪಾಗಿದ್ದರೆ ಕ್ಷಮೆ ಇರಲಿ... ನಿಮ್ಮ ಸೃಜನ್ ಲೋಕೇಶ್," ಎಂದು ಪೋಸ್ಟ್ ಮಾಡಿದ್ದಾರೆ.
ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಜನಪ್ರಿಯ ಹಾಸ್ಯ ಕಾರ್ಯಕ್ರಮ ಮಜಾ ಟಾಕೀಸ್ ನಲ್ಲಿ ಸೃಜನ್ ಲೋಕೇಶ್ ನೀಡಿದ ಹೇಳಿಕೆಯೊಂದು ಈ ಹಿಂದೆ ವಿವಾದಕ್ಕೆ ಕಾರಣವಾಗಿತ್ತು.
ಮಜಾ ಟಾಕೀಸ್ ನಿರೂಪಕರಾದ ಸೃಜನ್ ಲೋಕೇಶ್ ತುಳುನಾಡಿನ ನಂಬಿಕೆಯ ಭೂತಾರಾಧನೆಗೆ ನಿನ್ನೆ (ಭಾನುವಾರ) ಯ ಕಾರ್ಯಕ್ರಮದಲ್ಲಿ ಅಪಹಾಸ್ಯ ಮಾಡಿರುವ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ ವ್ಯಕ್ತವಾಗಿತ್ತು. ಇದೀಗ ವಿವಾದಕ್ಕೆ ಸೃಜನ್ ಅಂತಿಮ ಮುದ್ರೆ ಒತ್ತಿದ್ದು ಕ್ಷಮೆ ಕೇಳಿದ್ದಾರೆ.
-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion -
LPG Gas: ಗೃಹ-ವಾಣಿಜ್ಯ ಸಿಲಿಂಡರ್ ಬುಕಿಂಗ್ ಮಿತಿ, ದಾಸ್ತಾನು ನಿಯಮಗಳೇನು? ಗ್ಯಾಸ್ ದರಪಟ್ಟಿ












Click it and Unblock the Notifications