SSLC ಪ್ರಶ್ನೆ ಪತ್ರಿಕೆ ಸೋರಿಕೆ ಮಾಡಿದರೆ ಜೈಲು ಶಿಕ್ಷೆ
ಬೆಂಗಳೂರು, ಮಾರ್ಚ್ 11: ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳನ್ನು ಸೋರಿಕೆ ಮಾಡಿದರೆ, ಜೈಲು ಶಿಕ್ಷೆ ಅನುಭವಿಸಬೇಕಾಗುತ್ತದೆ ಎಂದು ಪ್ರೌಢ ಶಿಕ್ಷಣ ಇಲಾಖೆ ತಿಳಿಸಿದೆ. ಈ ಮೂಲಕ ಪ್ರಶ್ನೆ ಪತ್ರಿಕೆ ಸೋರಿಕೆ ಮಾಡಿದರೆ, ಹುಷಾರ್ ಎಂದು ಎಚ್ಚರಿಕೆ ನೀಡಿದೆ.
ಇದೇ ತಿಂಗಳ 27 ರಿಂದ ಎಸ್ಎಸ್ಎಲ್ಸಿ ಪರೀಕ್ಷೆ ಪ್ರಾರಂಭ ಆಗಲಿದೆ. ಪರೀಕ್ಷೆ ದಿನ ಹತ್ತಿರ ಬರುತ್ತಿದ್ದಂತೆ ಪ್ರಶ್ನೆ ಪತ್ರಿಕೆ ಸೋರಿಕೆಯ ಪ್ರಯತ್ನಗಳು ನಡೆಯುತ್ತಿದೆ. ಆದರೆ, ಈ ಬಾರಿ ಏನಾದರೂ, ಪ್ರಶ್ನೆ ಪತ್ರಿಕೆ ಲೀಕ್ ಮಾಡುವ ಕೆಲಸಕ್ಕೆ ಮುಂದಾದರೆ, ಶಿಕ್ಷೆ ಅನುಭವಿಸಬೇಕಾಗುತ್ತದೆ.
ಪ್ರಶ್ನೆ ಪತ್ರಿಕೆ ಸೋರಿಕೆ ಮಾಡುವ ಆರೋಪಿಗಳ ವಿರುದ್ಧ ಜಾಮೀನು ರಹಿತ ಬಂಧನ ಪ್ರಕರಣ ದಾಖಲಾಗಲಿದೆ. ಈ ಕೆಲಸ ಮಾಡಲು ಪ್ರಯತ್ನ ಪಡುವವರನ್ನು ಮಾತ್ರವಲ್ಲದೆ ಅದಕ್ಕೆ ಸಹಾಯ ಮಾಡುವವರು ಕೂಡ ಜೈಲು ಸೇರಬೇಕಾಗುತ್ತದೆ.

ಪ್ರಶ್ನೆ ಪತ್ರಿಕೆ ಸೋರಿಕೆ ಆಗದಂತೆ ಮುಂಜಾಗ್ರತೆ ಕ್ರಮ ಕೈಗೊಂಡಿದ್ದು, ವಿಧ್ಯಾರ್ಥಿಗಳು ಹಾಗೂ ಪೋಷಕರು ಆತಂಕಪಡುವ ಅಗತ್ಯ ಇಲ್ಲ ಎಂದು ಪ್ರೌಢ ಶಿಕ್ಷಣ ಇಲಾಖೆ ತಿಳಿಸಿದೆ.
ಇತ್ತೀಚಿಗಷ್ಟೆ, ವಿಜಯಪುರದಲ್ಲಿ ದ್ವಿತೀಯ ಪಿಯುಸಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ ನಡೆದಿತ್ತು. ಮುರುಗೇಶ್ ಸಗರ ಹಾಗೂ ಮುರುಘೇಂದ್ರ ಹಿರೇಮಠ ಎನ್ನುವವರನ್ನು ಪೊಲೀಸರು ಬಂಧಿಸಿದ್ದರು.
-
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
ರಾಮಚಂದ್ರ ರಾವ್ ಪ್ರಕರಣ: 'ಎಐ' ಅಲ್ಲ ಅಸಲಿ ವಿಡಿಯೋ; ಎಫ್ಎಸ್ಎಲ್ ವರದಿಯಲ್ಲಿ ಬಯಲಾಯ್ತು ಸತ್ಯ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Anil Kumble: ವಿರಾಟ್ ಕೊಹ್ಲಿ-ಬೆಂಗಳೂರು ನಡುವಿನ ಅವಿನಾಭಾವ ಸಂಬಂಧದ ಬಗ್ಗೆ ಕನ್ನಡಿಗ ಅನಿಲ್ ಕುಂಬ್ಳೆ ಮನದಾಳದ ಮಾತು -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ












Click it and Unblock the Notifications