SSLC Exam 2: ಶಿಕ್ಷಕರ ಒತ್ತಾಯಕ್ಕೆ ಮಣಿದ ಸರ್ಕಾರ, ಎಸ್ಎಸ್ಎಲ್ಸಿ ಪರೀಕ್ಷೆ -2 ದಿನಾಂಕ ಮುಂದೂಡಿಕೆ
ಬೆಂಗಳೂರು, ಮೇ. 18: ಸರ್ಕಾರಿ ನೌಕರರ ಒತ್ತಾಯಕ್ಕೆ ಮಣಿದಿರುವ ಸರ್ಕಾರ 2024ರ ಎಸ್.ಎಸ್.ಎಲ್.ಸಿ ಪರೀಕ್ಷೆ 1 ರಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ನಡೆಸುವ ವಿಶೇಷ ಪರಿಹಾರ ಬೋಧನಾ ತರಗತಿಗಳನ್ನು ಮುಂದೂಡಿದೆ. ಇದರ ಜೊತೆಗೆ ಜೂನ್ 07 ರಿಂದ ನಡೆಯಬೇಕಿದ್ದ ಎಸ್. ಎಸ್.ಎಲ್.ಸಿ ಪರೀಕ್ಷೆ-2 (Karnataka SSLC 2024 Exam 2) ಅನ್ನು ಮುಂದೂಡಿದೆ.
ಇದೇ ತಿಂಗಳ ಮೇ.15 ರಿಂದ ಆರಂಭವಾಗಿದ್ದ ಎಸ್ಎಸ್ಎಲ್ಸಿ ವಿಶೇಷ ಪರಿಹಾರ ಬೋಧನಾ ತರಗತಿಗಳನ್ನು ಮುಂದೂಡಿಕೆ ಮಾಡಿದೆ. ಮೇ 29 ರಿಂದ ಜೂನ್ 13ರ ವರೆಗೆ ನಡೆಸಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಹಿಂದೆ ಶಿಕ್ಷಣ ಇಲಾಖೆ ನೀಡಿದ್ದ ಆದೇಶಕ್ಕೆ ಸರ್ಕಾರಿ ನೌಕರರಿಂದ ಭಾರಿ ವಿರೋಧ ವ್ಯಕ್ತವಾಗಿತ್ತು. ಈ ಬಗ್ಗೆ ಶಿಕ್ಷಣ ಇಲಾಖೆ ಮತ್ತು ಸರ್ಕಾರಕ್ಕೆ ಪತ್ರ ಬರೆದು ಮನವಿ ಮಾಡಿದ್ದರು.

ಜೂ.14 ರಿಂದ ಎಸ್ಎಸ್ಎಲ್ಸಿ ಪರೀಕ್ಷೆ-2 ಆರಂಭ
ವಿಶೇಷ ಬೋಧನ ತರಗತಿಗಳನ್ನು ಮುಂದೂಡಿರುವ ಜೊತೆಯಲ್ಲಿಯೇ ಎಸ್ಎಸ್ಎಲ್ಸಿ ಮುಖ್ಯ ಪರೀಕ್ಷೆ-1ರಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಜೂನ್ 07 ರಿಂದ ನಡೆಯಬೇಕಿದ್ದ ಎಸ್ಎಸ್ಎಲ್ಸಿ ಪರೀಕ್ಷೆ-2 ಅನ್ನು ಕೂಡ ಮುಂದೂಡಲಾಗಿದೆ. ಜೂನ್ 14 ರಿಂದ ಎಸ್ಎಸ್ಎಲ್ಸಿ ಪರೀಕ್ಷೆ-2 ಪ್ರಾರಂಭಿಸಲು ಶಿಕ್ಷಣ ಇಲಾಖೆ ನಿರ್ಧಾರಿಸಿದೆ.
ಎಸ್ಎಸ್ಎಲ್ಸಿ ಪರೀಕ್ಷೆ-2 ಜೂನ್ 14ರಿಂದ ಆರಂಭವಾಗಲಿದ್ದು, ಪರಿಷ್ಕೃತ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಶೀಘ್ರದಲ್ಲೇ ಬಿಡುಗಡೆ ಮಾಡಲಿದೆ. ಇದೇ ತಿಂಗಳ ಮೇ.9 ರಂದು 2023-24ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟವಾಗಿತ್ತು.

ಮೇ.15 ರಿಂದ ವಿಶೇಷ ತರಗತಿಗಳಿಗೆ ಶಿಕ್ಷಕರಿಂದ ತೀವ್ರ ಅಸಮಾಧಾನ
ಇತ್ತ, ಫಲಿತಾಂಶ ಕುಸಿದಿದ್ದ ಕಾರಣ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಮೇ 13 ರಂದು ಈ ಭಾರಿಯ ಎಸ್.ಎಸ್.ಎಲ್.ಸಿಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಬೇಸಿಗೆ ರಜೆ ಅವಧಿಯಲ್ಲಿ ಪುನರ್ಬಲನ ತರಗತಿಗಳನ್ನು ತೆಗೆದುಕೊಳ್ಳಲು ಸಹಶಿಕ್ಷಕರು ಶಾಲಾ ಕರ್ತವ್ಯಕ್ಕೆ ಹಾಜರಾಗಬೇಕೆಂದು ಆದೇಶಿಸಿದ್ದರು. ಇದಕ್ಕೆ ಶಿಕ್ಷಕರ ಸಮುದಾಯದಲ್ಲಿ ತೀವ್ರ ಅಸಮಾಧಾನ, ಆಕ್ರೋಶ ಉಂಟಾಗಿತ್ತು.
ಸಹಶಿಕ್ಷಕರು ರಜೆ ಅವಧಿಯಲ್ಲಿ ಏಪ್ರಿಲ್ ತಿಂಗಳಿನಲ್ಲಿ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕೆಲಸಕ್ಕೆ ಹಾಜರಾಗಿದ್ದಾರೆ. ರಜಾ ಅವಧಿಗಳಲ್ಲಿ ಚುನಾವಣಾ ಕರ್ತವ್ಯಗಳಾದ ಚೆಕ್ಪೋಸ್ಟ್, ಸೆಕ್ಟರ್, ಮಾಸ್ಟರ್ ಟ್ರೈನರ್ ಬಿ.ಎಲ್.ಓ ನಿಯೋಜನೆ ಹೀಗೆ ಹಲವಾರು ಕೆಲಸ ಮಾಡಿದ್ದಾರೆ. ಶಿಕ್ಷಕರು ಇಲಾಖೆ ಕಾರ್ಯದ ಹೊರತಾಗಿ ಸಿಕ್ಕಿರುವ ಮೇ ಒಂದೇ ತಿಂಗಳ ರಜೆ ಅವಧಿಯಲ್ಲಿ ತಮ್ಮ ಕುಟುಂಬ, ಮಕ್ಕಳ ಶೈಕ್ಷಣಿಕ ಪ್ರವೇಶ, ಮನೆ ಸ್ಥಳಾಂತರ ಸೇರಿ ಹಲವು ಕೆಲಸ ಇರುತ್ತದೆ. ಹಿಂದಿಂದಲೂ ಶೈಕ್ಷಣಿಕ ವ್ಯವಸ್ಥೆಯಲ್ಲಿ ಅಕ್ಟೋಬರ್ 02 ರಿಂದ ಅಕ್ಟೋಬರ್ 30 ರವರೆಗೆ ದಸರಾ ರಜೆ ನೀಡಲಾಗುತ್ತಿತ್ತು. ಹಾಗೂ ಏಪ್ರಿಲ್ 10 ರಿಂದ ಮೇ 29 ರವರೆಗೆ ಬೇಸಿಗೆ ರಜೆಯನ್ನು ನೀಡಲಾಗುತ್ತಿತ್ತು ಎಂದು ಸರ್ಕಾರಿ ನೌಕರರ ಸಂಘ ಶಿಕ್ಷಣ ಇಲಾಖೆಗೆ ಪತ್ರ ಬರೆದಿತ್ತು.
ಹಲವು ಅಂಶಗಳನ್ನು ಗಮನಿಸಿ 2024ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಬೇಸಿಗೆ ರಜೆಯಲ್ಲಿ ಮೇ 15 ರಿಂದ ನಿಗದಿಪಡಿಸಿರುವ ಪುನರ್ಬಲನ ತರಗತಿಗಳನ್ನು ಮೇ 29 ರಿಂದ ಜೂನ್ 06 ರವರೆಗೆ ಆಯೋಜಿಸಬೇಕು ಎಂದು ಮನವಿ ಮಾಡಿತ್ತು. ಈ ಮನವಿಗೆ ಸರ್ಕಾರ ಸ್ಪಂದಿಸಿದ್ದು, ಪರೀಕ್ಷೆ ಮತ್ತು ವಿಶೇಷ ಬೋಧನಾ ತರಗತಿಗಳ ದಿನವನ್ನು ಮುಂದೂಡಿದೆ.
-
SSLC: ಹಿಂದಿ ಪರೀಕ್ಷೆಯಲ್ಲಿ ಅಂಕ ಲೆಕ್ಕಕ್ಕೆ ಇಲ್ಲ: ವಿದ್ಯಾರ್ಥಿಗಳ ಹೊರೆ ಇಳಿಕೆ, ಸರ್ಕಾರದ ನಿರ್ಧಾರಕ್ಕೆ ಬೆಂಬಲ ಕೊಟ್ಟ ಕರವೇ -
SSLC ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್: ಒಟ್ಟು ಅಂಕ 625ರ ಬದಲು 525ಕ್ಕೆ ಇಳಿಕೆ, ತೃತೀಯ ಭಾಷೆಗೆ ಗ್ರೇಡ್ -
Viral ಆಯ್ತು ಅಕೌಂಟ್ಸ್ ಪ್ರಶ್ನೆಪತ್ರಿಕೆ: ಪರೀಕ್ಷೆಯಲ್ಲೂ ಮಿಂಚಿದ 'ಧುರಂಧರ್: ದಿ ರಿವೆಂಜ್' ಸಿನಿಮಾದ ಪಾತ್ರಗಳು -
KEA Recruitment: ವಾಯುವ್ಯ ಸಾರಿಗೆ ಸಂಸ್ಥೆ ನೇಮಕಾತಿ ಪರೀಕ್ಷೆಗಳ ದಿನಾಂಕ ಬದಲಾವಣೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
CBSE 12ನೇ ತರಗತಿಯ ಜೀವಶಾಸ್ತ್ರ ಪ್ರಶ್ನೆಪತ್ರಿಕೆ ವಿಶ್ಲೇಷಣೆ: ತಜ್ಞರು ಮತ್ತು ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ಮಾಹಿತಿ -
ಬೆಂಗಳೂರಿನ ಪಾನಿಪುರಿ ವ್ಯಾಪಾರಿಯ ತಿಂಗಳ ಸಂಪಾದನೆ ಫುಲ್ Viral: ದಿನಕ್ಕೆ 3 ಸಾವಿರ ರೂ. ಗಳಿಕೆ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ












Click it and Unblock the Notifications