CBSE ಮಾನದಂಡ ಮಾದರಿಯಲ್ಲೇ ರಾಜ್ಯದಲ್ಲಿ SSLC ಪರೀಕ್ಷೆಗೆ ಚಿಂತನೆ?
ಬೆಂಗಳೂರು, ಜೂನ್ 01: ರಾಜ್ಯದಲ್ಲಿ ಎಸ್ಎಸ್ಎಲ್ ಸಿ ಹಾಗೂ ಪಿಯುಸಿ ಪರೀಕ್ಷೆ ನಡೆಸುವ ಸಂಬಂಧ ಕೇಂದ್ರ ಸಿಬಿಎಸ್ಇ ಪರೀಕ್ಷಾ ಮಾನದಂಡ ಅನುಸರಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಗ್ರಾಮೀಣ ಭಾಗದಲ್ಲಿ ಕೊರೊನಾ ಸೋಂಕು ಕಡಿಮೆಯಾಗದ ಹಿನ್ನೆಲೆಯಲ್ಲಿ SSLC ಪರೀಕ್ಷೆಯನ್ನು ಸಿಬಿಎಸ್ಇ ಮಾದರಿಯಲ್ಲಿ ರದ್ದು ಪಡಿಸಲು ಶಿಕ್ಷಣ ಇಲಾಖೆ ಚಿಂತನೆ ನಡೆಸಿದೆ. ಈ ಕುರಿತು ಇನ್ನೆರಡು ದಿನದಲ್ಲಿ ತೀರ್ಮಾನ ಪ್ರಕಟವಾಗುವ ಸಾಧ್ಯತೆಯಿದೆ.
ರಾಷ್ಟ್ರದಲ್ಲಿ ವೈದ್ಯಕೀಯ ಹಾಗೂ ಇಂಜಿನಿಯರಿಂಗ್ ಪದವಿ ಸೇರಲು ಪಿಯುಸಿ ಮಾನದಂಡವನ್ನಾಗಿ ಪರಿಗಣಿಸಲಾಗುತ್ತದೆ. ಹೀಗಾಗಿ ರಾಷ್ಟ್ರದಲ್ಲಿ ಪಿಯುಸಿ ಪರೀಕ್ಷೆ ನಡೆಸುವ ಸಾಧ್ಯತೆಯಿದೆ. ಇನ್ನು ಸಿಬಿಎಸ್ಇ ಬೋರ್ಡ್ ಎಸ್ಎಸ್ಎಲ್ ಸಿ ಪರೀಕ್ಷೆಯನ್ನು ಈಗಾಗಲೇ ರದ್ದು ಮಾಡಲಾಗಿದೆ. ಹೀಗಾಗಿ ರಾಜ್ಯದಲ್ಲಿ ಎಸ್ಎಸ್ಎಸ್ ಸಿ ಪರೀಕ್ಷೆಯನ್ನು ನಡೆಸಬೇಕಾ ಅಥವಾ ಕೇಂದ್ರದ ಮಾದರಿಯಲ್ಲಿ ರದ್ದು ಪಡಿಸಬೇಕಾ ಎಂಬುದರ ಬಗ್ಗೆ ಶಿಕ್ಷಣ ಇಲಾಖೆ ಗೊಂದಲಕ್ಕೆ ಎಡೆ ಮಾಡಿಕೊಟ್ಟಿದೆ.
ಪರೀಕ್ಷೆ ನಡೆಸುವುದಾದರೆ, ಆಫ್ಲೈನ್ ಪರೀಕ್ಷೆ ನಡೆಸುವುದೇ? ಇಲ್ಲವೇ ಸಿಬಿಎಸ್ಇ ಮಾದರಿಯಲ್ಲಿ ಮೌಲ್ಯಾಂಕನ ಪರೀಕ್ಷೆ ನಡೆಸಬೇಕಾ? ಎಂಬುದರ ಬಗ್ಗೆ ಗಂಭೀರ ಚರ್ಚೆ ನಡೆದಿದೆ. ಕೊರೊನಾ ಹಿನ್ನೆಲೆಯಲ್ಲಿ ಎಸ್ಎಸ್ಎಲ್ ಸಿ ಪರೀಕ್ಷೆ ಶಾಲಾ ಹಂತದಲ್ಲಿಯೇ ನಡೆಸಬೇಕು ಎನ್ನುವ ವಾದ ಕೇಳಿ ಬರುತ್ತಿದೆ. ಹೀಗೆ ನಾನಾ ಗೊಂದಲ ಏರ್ಪಟ್ಟಿರುವ ಬೆನ್ನಲ್ಲೇ ಕೇಂದ್ರದ ಮಾನದಂಡ ಮಾದರಿಯಲ್ಲಿ ಎಸ್ಎಸ್ಎಲ್ ಸಿ ಪರೀಕ್ಷೆಯನ್ನು ಮೌಲ್ಯಾಂಕನ ಆಧಾರದ ಮೇಲೆ ನಡೆಸಲು ಅಧಿಕಾರಿಗಳು ಒಲವು ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.

Recommended Video
ರಾಜ್ಯದ ಗ್ರಾಮೀಣ ಭಾಗದಲ್ಲಿ ಕೊರೊನಾ ಎರಡನೇ ಅಲೆ ಅಪ್ಪಳಿಸುತ್ತಿದೆ. ಬೆಂಗಳೂರಿನಲ್ಲಿ ಓದುತ್ತಿದ್ದ ಅನೇಕ ವಿದ್ಯಾರ್ಥಿಗಳು ತಮ್ಮ ಊರುಗಳಿಗೆ ಹೋಗುತ್ತಿದ್ದಾರೆ. ಕೊರೊನಾ ಹಿನ್ನೆಲೆಯಲ್ಲಿ ಪರೀಕ್ಷೆ ಬಗ್ಗೆ ಗೊಂದಲ ಏರ್ಪಟ್ಟು ವಿದ್ಯಾರ್ಥಿಗಳು ಕೂಡ ಆಸಕ್ತಿ ಕಳೆದುಕೊಂಡಿದ್ದಾರೆ. ಸಿಬಿಎಸ್ಇ ಶಾಲೆಗಳಲ್ಲಿ ಓದಿದ ಮಕ್ಕಳು ಈಗಾಗಲೇ ಮೌಲ್ಯಾಂಕನ ಆಧಾರದ ಮೇಲೆ ಉತ್ತೀರ್ಣರಾಗಿದ್ದು ಕಾಲೇಜುಗಳಲ್ಲಿ ದಾಖಲಾತಿ ಆಗುತ್ತಿದ್ದಾರೆ. ಇಷ್ಟೆಲ್ಲಾ ಸಮಸ್ಯೆಗಳ ನಡುವೆ ಶಿಕ್ಷಣ ಇಲಾಖೆ ಯಾವ ರೀತಿಯ ನಿರ್ಧಾರ ಕೈಗೊಳ್ಳಲಿದೆ ಎಂಬ ಪ್ರಶ್ನೆ ಮೂಡಿದೆ.
-
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
ಶಾಲಾ ಮಕ್ಕಳ ಮೊಬೈಲ್ ಬಳಕೆ ನಿರ್ಬಂಧ: 'ಡಿಜಿಟಲ್ ಕರಡು ನೀತಿ' ಬಿಡುಗಡೆಗೊಳಿಸಿದ ರಾಜ್ಯ ಸರ್ಕಾರ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
UPSC ಪೂರ್ವಭಾವಿ ಪರೀಕ್ಷೆ ಮುಗಿದ ತಕ್ಷಣವೇ ಕೀ ಉತ್ತರಗಳ ಬಿಡುಗಡೆಗೆ ಕೇಂದ್ರ ಸರ್ಕಾರದ ನಿರ್ಧಾರ -
CBSE ಶಾಲೆಗಳಲ್ಲಿ ಋತುಚಕ್ರ ನೈರ್ಮಲ್ಯ ಕಡ್ಡಾಯ: ಸುಪ್ರೀಂ ಕೋರ್ಟ್ ಆದೇಶದ ಬೆನ್ನಲ್ಲೇ ಹೊಸ ನಿಯಮ ಜಾರಿ












Click it and Unblock the Notifications