SSLC Exam Time Table: ಈ ವರ್ಷದ ಎಸ್ಎಸ್ಎಲ್ಸಿ ಪರೀಕ್ಷೆ ವೇಳಾಪಟ್ಟಿ ಅಪ್ಡೇಟ್ಸ್ ಇಲ್ಲಿದೆ
ಬೆಂಗಳೂರು, ನವೆಂಬರ್ 27: ಪ್ರಸಕ್ತ ಸಾಲಿನ 10ನೇ ತರಗತಿ ವಿದ್ಯಾರ್ಥಿಗಳ ವಾರ್ಷಿಕ ಪರೀಕ್ಷೆಯನ್ನು ಮುಂದಿನ ವರ್ಷ 25 ದಿನಗಳ ಅಧಿಯಲ್ಲಿ ನಡೆಸಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (KSEAB) ಉದ್ದೇಶಿಸಿದೆ. ಈ ಸಂಬಂಧ ಬುಧವಾರ ನವೆಂಬರ್ 27 ಬೆಂಗಳೂರಿನಲ್ಲಿ ಮಹತ್ವದ ಸಭೆ ನಡೆಯಿತು. 2024-25ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ ನಡೆಸಲು ಈಗಾಗಲೇ ಮಂಡಳಿ ದಿನಾಂಕ ನಿಗದಿಪಡಿಸಿದೆ.
10ನೇ ತರಗತಿ ವಾರ್ಷಿಕ ಪರೀಕ್ಷೆಯು ಮುಂದಿನ ವರ್ಷ ಮಾರ್ಚ್ ತಿಂಗಳ 24 ರಿಂದ ಏಪ್ರಿಲ್ 17ರವರೆಗೆ ನಡೆಸಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ತಾತ್ಕಾಲಿಕ ವೇಳಾಪಟ್ಟಿ ಸಿದ್ಧಪಡಿಸಿದೆ. ಇಂದು ನಡೆದ ಸಭೆಯಲ್ಲಿ ಪರೀಕ್ಷೆ ಕುರಿತು ಮಹತ್ವದ ವಿಷಯಗಳ ಚರ್ಚಿಸಲಾಗಿದೆ. ದಿನಾಂಕಗಳನ್ನು ಅಂತಿಮಗೊಳಿಸಲಾಗಿದೆ ಎಂದು ತಿಳಿದು ಬಂದಿದೆ.

ಮಾರ್ಚ್ ತಿಂಗಳ 24 ರಿಂದ ಏಪ್ರಿಲ್ 17ರವರೆಗೆ ಎಸ್ಎಸ್ಎಲ್ಸಿ ಪರೀಕ್ಷೆ ಎಂದು ಸದ್ಯ ಹೇಳಲಾಗುತ್ತಿರುವ ವೇಳಾಪಟ್ಟಿಯು ತಾತ್ಕಾಲಿಕವಾಗಿದೆ. ಇದೇ ಡಿಸೆಂಬರ್ ಮೊದಲು ಇಲ್ಲವೇ ಎರಡನೇ ವಾರ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯು (KSEAB) ಅಧಿಕೃತ ವೇಳಾಪಟ್ಟಿ ಬಿಡುಗಡೆ ಮಾಡಲಿದೆ. ಆಗ ಅಭ್ಯರ್ಥಿಗಳು ದಿನಾಂಕ, ಸಮಯ ಪರಿಶೀಲಿಸಬೇಕು.
ಸದ್ಯ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳು ವೇಳಾಪಟ್ಟಿಗಾಗಿ ಕಾಯದೇ ಇಂದಿನಿಂದಲೇ ಕಠಿಣ ವಿದ್ಯಾಭ್ಯಾಸ ಮಾಡಬೇಕಿದೆ. ಗೊತ್ತಿಲ್ಲ ವಿಷಯಗಳ ಕುರಿತು ತಿಳಿದುಕೊಳ್ಳಲು ಇನ್ನು ಸಾಕಷ್ಟು ಸಮಯಾವಕಾಶ ಇದೆ.
ಶಿಕ್ಷಣ ಇಲಾಖೆ ಅಧಿಕಾರಿಗಳು ಹತ್ತನೇ ತರಗತಿ ವಾರ್ಷಿಕ ಪರೀಕ್ಷೆಯನ್ನು ಮುಂದಿನ ವರ್ಷ ಮಾರ್ಚ್ನಲ್ಲಿ ಆರಂಭಿಸಲು ತೀರ್ಮಾನಿಸಿದೆ. ಇದಕ್ಕೆ ಸಂಬಂಧಿಸಿದಂತೆ ಡಿಸೆಂಬರ್ 2ನೇ ವಾರ ಬಿಡುಗಡೆಗೊಳ್ಳಲಿದೆ. ಆ ದಿನಾಂಕ, ವೇಳಾಪಟ್ಟಿ, ಸಮಯ ಮತ್ತು ಮಾರ್ಗಸೂಚಿಗಳೇ ಅಂತಿಮವಾಗಿರುತ್ತವೆ. ಸದ್ಯ ತಾತ್ಕಾಲಿಕ ವೇಳಾಪಟ್ಟಿ ಮಾಹಿತಿ ಇಲ್ಲಿದೆ ನೋಡಿ.
ತಾತ್ಕಾಲಿಕ ವೇಳಾಪಟ್ಟಿ ಮಾಹಿತಿ
ಗಣಿತಶಾಸ್ತ್ರ: 2025 ರ ಮಾರ್ಚ್ 24 (ಸೋಮವಾರ)
ಇಂಗ್ಲೀಷ್ (ದ್ವಿತೀಯ ಭಾಷೆ): 2025 ರ ಮಾರ್ಚ್ 28 (ಶುಕ್ರವಾರ)
ವಿಜ್ಞಾನ: 2025 ರ ಏಪ್ರಿಲ್ 1 (ಮಂಗಳವಾರ)
ಸಮಾಜ ಶಾಸ್ತ್ರ: 2025 ರ ಏಪ್ರಿಲ್ 4 (ಶುಕ್ರವಾರ)
ಕನ್ನಡ( ಮೊದಲ ಭಾಷೆ): 2025 ರ ಏಪ್ರಿಲ್ 7 (ಸೋಮವಾರ)
ಹಿಂದಿ(ತೃತೀಯ ಭಾಷೆ): 2025 ರ ಏಪ್ರಿಲ್ 11 (ಶುಕ್ರವಾರ)
ಮೊದಲ ಭಾಷೆ: ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲಿಷ್, ಇಂಗ್ಲಿಷ್ (ಎನ್ಸಿಆರ್ಟಿ), ಸಂಸ್ಕೃತ
ದ್ವಿತೀಯ ಭಾಷೆ: ಇಂಗ್ಲಿಷ್, ಕನ್ನಡ.
ತೃತೀಯ ಭಾಷೆ: ಹಿಂದಿ, ಕನ್ನಡ, ಇಂಗ್ಲಿಷ್, ಪರ್ಷಿಯನ್, ಅರೇಬಿಕ್, ತುಳು, ಉರ್ದು, ಸಂಸ್ಕೃತ, ಕೊಂಕಣಿ, ಎನ್ಎಸ್ಕ್ಯೂಎಫ್ ವಿಷಯಗಳ ಪರೀಕ್ಷೆ ನಡೆಯಲಿದೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್












Click it and Unblock the Notifications