SSLC Exam Results 2026: ರಾಜ್ಯದಲ್ಲಿ ಎಸ್ಎಸ್ಎಲ್ಸಿ ಫಲಿತಾಂಶ ಸುಧಾರಣೆಗೆ 'ಟಿವಿ–ಮೊಬೈಲ್ ಸ್ವಿಚ್ ಆಫ್' ಟಾಸ್ಕ್
SSLC Exam Results 2026: ರಾಜ್ಯದಲ್ಲಿ ಎಸ್ಎಸ್ಎಲ್ಸಿ ಪರೀಕ್ಷಾ ಫಲಿತಾಂಶವನ್ನು ಉತ್ತಮಗೊಳಿಸುವ ಉದ್ದೇಶದಿಂದ ಸಾರ್ವಜನಿಕ ಶಿಕ್ಷಣ ಇಲಾಖೆ ವಿವಿಧ ಕ್ರಮಗಳನ್ನು ಜಾರಿಗೆ ತರಲು ನಿರ್ಧರಿಸಿದೆ. ಇದೀಗ ಹೊಸ ರೀತಿಯ ಟಾಸ್ಕ್ ಒಂದನ್ನು ಪರಿಚಯಿಸಿದೆ. ವಿದ್ಯಾರ್ಥಿಗಳ ಗಮನವನ್ನು ಓದಿನತ್ತ ಕೇಂದ್ರೀಕರಿಸಲು 'ಟಿವಿ ಮತ್ತು ಮೊಬೈಲ್ ಸ್ವಿಚ್ ಆಫ್' ಎಂಬ ಅಭಿಯಾನಕ್ಕೆ ಚಾಲನೆ ನೀಡಲು ಇಲಾಖೆ ಮುಂದಾಗಿದೆ.
ಪರೀಕ್ಷೆಗಳು ಸಮೀಪಿಸುತ್ತಿರುವ ಹಿನ್ನೆಲೆ, ಪ್ರತಿದಿನ ಸಂಜೆ 7ರಿಂದ 9 ಗಂಟೆಯವರೆಗೆ ಎರಡು ಗಂಟೆಗಳ ಕಾಲ ವಿದ್ಯಾರ್ಥಿಗಳು ಮೊಬೈಲ್ ಫೋನ್ ಹಾಗೂ ಟಿವಿಯನ್ನು ಬಳಸದಂತೆ ಇರಬೇಕೆಂದು ಸೂಚಿಸಲಾಗಿದೆ. ಮೊಬೈಲ್ ಗೀಳು ವಿದ್ಯಾರ್ಥಿಗಳ ಅಧ್ಯಯನಕ್ಕೆ ಅಡ್ಡಿ ಆಗುತ್ತಿರುವುದರಿಂದ, ಈ ಸಮಯವನ್ನು ಓದಿಗೆ ಮೀಸಲಿಡುವಂತೆ ಇಲಾಖೆ ಸಲಹೆ ನೀಡಿದೆ.

ಫಲಿತಾಂಶ ಸುಧಾರಣೆಗೆ ಹೊಸ ಅಭಿಯಾನ: ಈ ಅಭಿಯಾನ ಯಶಸ್ವಿ ಆಗಲು ಪೋಷಕರ ಸಹಕಾರವೂ ಅಗತ್ಯ ಆಗಿದ್ದು, ಪಿಡಿಓಗಳ ಮಟ್ಟದಲ್ಲಿಯೇ ಪೋಷಕರಿಗೆ ಜಾಗೃತಿ ಮೂಡಿಸುವಂತೆ ಸೂಚನೆ ನೀಡಲಾಗಿದೆ. ಜೊತೆಗೆ ಮುಖ್ಯಶಿಕ್ಷಕರು ಸಹ ಪೋಷಕರಿಗೆ ಈ ಬಗ್ಗೆ ಮಾಹಿತಿ ನೀಡಬೇಕು. ಅಗತ್ಯ ಇದ್ದರೆ ಡಂಗೂರ ಸಾರುವ ಮೂಲಕವೂ ಜಾಗೃತಿ ಮೂಡಿಸುವಂತೆ ಸುತ್ತೋಲೆ ಹೊರಡಿಸಲಾಗಿದೆ ಎಂದು ತಿಳಿದುಬಂದಿದೆ. ಈ ಕ್ರಮದಿಂದ ವಿದ್ಯಾರ್ಥಿಗಳ ಓದಿನ ಮೇಲೆ ಹೆಚ್ಚು ಗಮನ ಕೇಂದ್ರೀಕೃತವಾಗಲಿದೆ ಎಂಬ ನಿರೀಕ್ಷೆ ಶಿಕ್ಷಣ ಇಲಾಖೆಯದ್ದಾಗಿದೆ.
ರಾಜ್ಯದಲ್ಲಿ ಎಸ್ಎಸ್ಎಲ್ಸಿ ಪರೀಕ್ಷಾ ಫಲಿತಾಂಶವನ್ನು ಉತ್ತಮಗೊಳಿಸುವ ಉದ್ದೇಶದಿಂದ ಸಾರ್ವಜನಿಕ ಶಿಕ್ಷಣ ಇಲಾಖೆ ಹಲವು ಹೊಸ ಕ್ರಮಗಳನ್ನು ಜಾರಿಗೆ ತರುತ್ತಿದೆ. ವಿದ್ಯಾರ್ಥಿಗಳ ಕಲಿಕಾ ಮಟ್ಟ ಹೆಚ್ಚಿಸುವುದು, ಓದಿನ ಮೇಲೆ ಹೆಚ್ಚಿನ ಗಮನ ಕೇಂದ್ರೀಕರಿಸುವುದು ಹಾಗೂ ಪರೀಕ್ಷಾ ಭಯವನ್ನು ಕಡಿಮೆ ಮಾಡುವುದು ಈ ಕ್ರಮಗಳ ಪ್ರಮುಖ ಗುರಿಯಾಗಿದೆ.
ಪರೀಕ್ಷೆಗಳು ಸಮೀಪಿಸುತ್ತಿರುವ ಹಿನ್ನೆಲೆ ಶಾಲೆಗಳಲ್ಲಿ ಹೆಚ್ಚುವರಿ ತರಗತಿಗಳು, ಪುನರಾವರ್ತನಾ ಪಾಠಗಳು ಹಾಗೂ ಮಾದರಿ ಪರೀಕ್ಷೆಗಳ ಆಯೋಜನೆಗೆ ಒತ್ತು ನೀಡಲಾಗುತ್ತಿದೆ. ವಿದ್ಯಾರ್ಥಿಗಳು ತಮ್ಮ ಕಷ್ಟಕರ ವಿಷಯಗಳನ್ನು ಗುರುತಿಸಿ ಸುಧಾರಿಸಿಕೊಳ್ಳಲು ಶಿಕ್ಷಕರು ವೈಯಕ್ತಿಕವಾಗಿ ಮಾರ್ಗದರ್ಶನ ನೀಡುತ್ತಿದ್ದಾರೆ.
ಹಾಗೆಯೇ ಇದೀಗ ಶಿಕ್ಷಣ ಇಲಾಖೆ 'ಟಿವಿ ಮತ್ತು ಮೊಬೈಲ್ ಸ್ವಿಚ್ ಆಫ್' ಎಂಬ ಅಭಿಯಾನವನ್ನೂ ಆರಂಭಿಸಿದೆ. ಪ್ರತಿದಿನ ಸಂಜೆ 7ರಿಂದ 9 ಗಂಟೆಯವರೆಗೆ ವಿದ್ಯಾರ್ಥಿಗಳು ಮೊಬೈಲ್ ಹಾಗೂ ಟಿವಿ ಬಳಕೆಯನ್ನು ತಪ್ಪಿಸಿ ಓದಿಗೆ ಸಮಯ ಮೀಸಲಿಡುವಂತೆ ಸೂಚನೆ ನೀಡಲಾಗಿದೆ. ಇದರಿಂದ ಮೊಬೈಲ್ ಗೀಳು ಕಡಿಮೆಯಾಗುತ್ತದೆ ಮತ್ತು ಓದಿನ ಮೇಲೆ ಗಮನ ಹೆಚ್ಚುತ್ತದೆ ಎಂಬ ನಿರೀಕ್ಷೆಯಿದೆ.
ಪೋಷಕರ ಪಾತ್ರವೂ ಮಹತ್ವವಾಗಿರುವುದರಿಂದ, ಅವರಿಗೆ ಜಾಗೃತಿ ಮೂಡಿಸುವ ಕಾರ್ಯ ನಡೆಯುತ್ತಿದೆ. ಮಕ್ಕಳ ಓದಿನ ಬಗ್ಗೆ ಗಮನ ವಹಿಸುವಂತೆ ಹಾಗೂ ಮನೆಮಟ್ಟದಲ್ಲಿಯೇ ಸಹಕಾರ ನೀಡುವಂತೆ ಇಲಾಖೆ ಮನವಿ ಮಾಡಿದೆ. ಈ ಎಲ್ಲಾ ಕ್ರಮಗಳ ಎಸ್ಎಸ್ಎಲ್ಸಿ ಫಲಿತಾಂಶದಲ್ಲಿ ಸುಧಾರಣೆ ತರಲು ಶಿಕ್ಷಣ ಇಲಾಖೆ ಮುಂದಾಗಿದೆ.
-
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
ರಾಮಚಂದ್ರ ರಾವ್ ಪ್ರಕರಣ: 'ಎಐ' ಅಲ್ಲ ಅಸಲಿ ವಿಡಿಯೋ; ಎಫ್ಎಸ್ಎಲ್ ವರದಿಯಲ್ಲಿ ಬಯಲಾಯ್ತು ಸತ್ಯ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Anil Kumble: ವಿರಾಟ್ ಕೊಹ್ಲಿ-ಬೆಂಗಳೂರು ನಡುವಿನ ಅವಿನಾಭಾವ ಸಂಬಂಧದ ಬಗ್ಗೆ ಕನ್ನಡಿಗ ಅನಿಲ್ ಕುಂಬ್ಳೆ ಮನದಾಳದ ಮಾತು -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply












Click it and Unblock the Notifications